Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಪೇದೆ ಹತ್ಯೆ ಆರೋಪಿ ಪರ ನಿಂತ...

ಪೊಲೀಸ್ ಪೇದೆ ಹತ್ಯೆ ಆರೋಪಿ ಪರ ನಿಂತ ಬಿಜೆಪಿ ನಾಯಕರು: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

''ಕೊಲೆಗಾರ ಬಿಜೆಪಿಯವ ಎಂದಾಕ್ಷಣ ಇವರ ಬಾಯಿಗೆ ಬೀಗ ಬಿದ್ದಿದೆ''

22 Jun 2023 6:57 PM IST
share
ಪೊಲೀಸ್ ಪೇದೆ ಹತ್ಯೆ ಆರೋಪಿ ಪರ ನಿಂತ ಬಿಜೆಪಿ ನಾಯಕರು: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
''ಕೊಲೆಗಾರ ಬಿಜೆಪಿಯವ ಎಂದಾಕ್ಷಣ ಇವರ ಬಾಯಿಗೆ ಬೀಗ ಬಿದ್ದಿದೆ''

ಬೆಂಗಳೂರು, ಜೂ. 22: ‘ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಟ್ಯಾಕ್ಟರ್ ಹತ್ತಿಸಿ ಕೊಂದ ಆರೋಪಿ ಪರವಾಗಿ ಬಿಜೆಪಿ ಶಾಸಕ ಅಭ್ಯರ್ಥಿಗಳು ಹಾಗೂ ಪರಿಷತ್ ಸದಸ್ಯರ ಪುತ್ರ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಇತರೆ ನಾಯಕರು ಮಾತನಾಡುತ್ತಿರುವುದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಗುರುವಾರ ಈ ಕುರಿತು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ಹಿಂದಿನ ಬಿಜೆಪಿ ಸರಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿತ್ತು. ರೌಡಿಶೀಟರ್ ಗಳು, ಪೊಲೀಸ್ ಅಧಿಕಾರಿಗಳ ಬರ್ತಡೇ ಪಾರ್ಟಿ ಆಯೋಜನೆ ಉಸ್ತುವಾರಿ ನೋಡಿಕೊಳ್ಳುವಂತಹ ಹೀನಾಯ ಸ್ಥಿತಿ ಬಂದೊದಗಿತ್ತು. ಬಿಜೆಪಿ ಸರಕಾರದಲ್ಲಿ ಕಲಬುರ್ಗಿ ಜಿಲ್ಲೆಯನ್ನು ಅಕ್ರಮ ದಂಧೆಕೋರರ ಸುರಕ್ಷಿತ ತಾಣವಾಗಿಸಿ, ಜಿಲ್ಲೆಯ   ಹೆಸರನ್ನು ಮಣ್ಣು ಪಾಲು ಮಾಡಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರ ಬಂದ ಬಳಿಕ ಅಂತಹ ದುರವಸ್ಥೆಯನ್ನು ಬದಲಿಸುವ ಕೆಲಸ ನಡೆಯುತ್ತಿದ್ದು ಜನರಿಗೆ ಕಾನೂನಿನ ಮೇಲೆ ನಂಬಿಕೆ ಮೂಡಿಸಲಾಗುತ್ತಿದೆ’ ಎಂದು ಬರೆದಿದ್ದಾರೆ.

‘ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವ ಕಾರ್ಯಾಚರಣೆ ನಡೆಸಲಾಗಿದೆ. ಜಿಲ್ಲೆಯ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಿ, ಅಕ್ರಮ ದಂಧೆಗಳ ಮೂಲಕ ಹಣ ಸಂಪಾದಿಸಿ ಚುನಾವಣೆ ನಡೆಸುವ ಬಿಜೆಪಿ ನಾಯಕರಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹಾಗಾಗಿ, ಈ ಅಕ್ರಮ ನಿಯಂತ್ರಣ ಮಾಡಲು ಮುಂದಾಗಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುವ ವೇಳೆ ಅದನ್ನು ತಡೆಯಲು ಬಂದ ಕರ್ತವ್ಯ ನಿರತ ಪೊಲೀಸ್ ಪೇದೆಯ ಮೇಲೆ ಟ್ರಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಹೀಗೆ ಕೊಂದವರ ಬೆನ್ನು ಬಿದ್ದ ಪೊಲೀಸ್ ಇಲಾಖೆ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಪರಾರಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಹಿಡಿದು ತರುವಾಗ ಆತ ಪೊಲೀಸ್ ಅಧಿಕಾರಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ತನಿಖೆ ವೇಳೆ ಈ ಕೊಲೆ ಆರೋಪಿ ಅಫ್ಜಲ್‍ಪುರ ಬಿಜೆಪಿ ಮುಖಂಡನಾಗಿರುವುದು, ಚುನಾವಣೆಯಲ್ಲಿ ಹಲವಾರು ಬಿಜೆಪಿ ಅಭ್ಯರ್ಥಿಗಳು ಹಾಗೂ ನಾಯಕರೊಂದಿಗೆ ಕೆಲಸ ಮಾಡಿದ್ದು ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲಾಗುತ್ತದೆ. ಈ ನಡುವೆ, ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗದೊಂದಿಗೆ ತಾವೇ ಖುದ್ದಾಗಿ ಭೇಟಿ ಮಾಡಿ ಪಕ್ಷದ ವತಿಯಿಂದ 1 ಲಕ್ಷ ರೂ. ಪರಿಹಾರ ನೀಡಿದ್ದು, ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕನ ಕೈಯಿಂದ ಕೊಲೆಯಾದ ಪೊಲೀಸ್ ಪೇದೆಯ ಕುಟುಂಬಕ್ಕೆ ಕ್ಷಮೆ ಕೇಳುವುದಿರಲಿ, ಅತ್ತ ಕಡೆ ತಿರುಗಿಯೂ ನೋಡಿಲ್ಲ’ ಎಂದು ಟೀಕಿಸಿದ್ದಾರೆ.

‘ಬಿಜೆಪಿ ನಾಯಕರು ಕೊಲೆ ಆರೋಪಿಗಳ ರಾಜಕೀಯ ಹಿನ್ನಲೆ ಪತ್ತೆಯಾಗುವವರೆಗೆ ಮತ್ತೆ ಹೆಣದ ಮೇಲೆ ರಾಜಕಾರಣ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದರು. ಆದರೆ ಕೊಲೆ ಆರೋಪಿ ಬಿಜೆಪಿಯವನು ಎಂದು ಗೊತ್ತಾದ ತಕ್ಷಣ ಇವರೆಲ್ಲರ ಬಾಯಿಗೆ ಬೀಗ ಬಿದ್ದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರ್.ಅಶೋಕ್, ಆರಗ ಜ್ಞಾನೇಂದ್ರರವರೇ, ಈಗ ನಿಮ್ಮದೇ ಪಕ್ಷದ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷರೆಲ್ಲಾ ಈ ಕೊಲೆಗಾರನ ಪರವಾಗಿ ಮಾತನಾಡುತ್ತಿದ್ದಾರೆ. ಇವರಿಗೆ ಏನು ಹೇಳ್ತೀರಾ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

‘ನಿಮ್ಮ ಪಕ್ಷದ ಮುಖಂಡನಿಂದಪೊಲೀಸ್ ಪೇದೆ ಕೊಲೆಯಾಗಿರುವಾಗ ಅವರ ಕುಟುಂಬಕ್ಕೇ ಕ್ಷಮೆ ಕೇಳುವ ಮಾನವೀಯತೆ ನಿಮ್ಮಲ್ಲಿ ಕೊರತೆಯಾಯಿತೇ?, ಬಿಜೆಪಿಯ ದುರಹಂಕಾರ, ಜನವಿರೋಧಿ ಹೇಳಿಕೆಗಳಿಂದ, ಈಗಾಗಲೇ ರಾಜ್ಯದ ಜನರು ಅವರನ್ನು 63ಕ್ಕೆ ತಂದು ನಿಲ್ಲಿಸಿದ್ದಾರೆ. ಇದರಿಂದ ಇನ್ನು ಪಾಠ ಕಲಿಯಲಿಲ್ಲ ಎಂದರೆ ಮುಂದಿನ ದಿನಗಳಲ್ಲಿ 6 ಮತ್ತೆ 3ಕ್ಕೆ ಜನ ತಂದುಬಿಡಬಹುದೇನೋ. ಜನರ ಬಳಿ ಕ್ಷಮೆ ಕೇಳಿ, ಮಾಡಿರುವ ಪಾಪಕ್ಕೆ ಪ್ರಾಯಶ್ಚಿತ ಮಾಡಿಕೊಂಡು ಜವಾಬ್ದಾರಿಯುತ ವಿಪಕ್ಷವಾಗಿ ಕಾರ್ಯ ನಿರ್ವಹಿಸಲಿ’

-ಪ್ರಿಯಾಂಕ್ ಖರ್ಗೆ ಗ್ರಾಮೀಣಾಭಿವೃದ್ಧಿ ಸಚಿವ

share
Next Story
X