Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಗ್ಯಾರಂಟಿ' ಈಡೇರಿಸದಿದ್ದರೆ ಅಧಿವೇಶನ...

'ಗ್ಯಾರಂಟಿ' ಈಡೇರಿಸದಿದ್ದರೆ ಅಧಿವೇಶನ ಮುಗಿಯುವವರೆಗೂ ಸತ್ಯಾಗ್ರಹ: ಬಿ.ಎಸ್.ಯಡಿಯೂರಪ್ಪ

''ವಿಧಾನಸೌಧದ ಒಳಗೆ, ಹೊರಗೆ ನಮ್ಮ ಹೋರಾಟ ನಿಶ್ಚಿತ''

22 Jun 2023 7:13 PM IST
share
ಗ್ಯಾರಂಟಿ ಈಡೇರಿಸದಿದ್ದರೆ ಅಧಿವೇಶನ ಮುಗಿಯುವವರೆಗೂ ಸತ್ಯಾಗ್ರಹ: ಬಿ.ಎಸ್.ಯಡಿಯೂರಪ್ಪ
''ವಿಧಾನಸೌಧದ ಒಳಗೆ, ಹೊರಗೆ ನಮ್ಮ ಹೋರಾಟ ನಿಶ್ಚಿತ''

ದಾವಣಗೆರೆ, ಜೂ.22: ಐದೂ ಗ್ಯಾರಂಟಿ ಭರವಸೆಗಳನ್ನು ಯಾವುದೇ ಷರತ್ತಿಲ್ಲದೇ ಜಾರಿಗೊಳಿಸಲು ಒತ್ತಾಯಿಸಿ ಜು.4ರಂದು ರಾಜ್ಯಪಾಲರ ಭಾಷಣ ಮುಗಿದ ನಂತರ ವಿಧಾನಸೌಧ ಆವರಣದ ಬಳಿಯ ಗಾಂಧಿ ಪುತ್ಥಳಿ ಬಳಿ ಅಧಿವೇಶನ ಮುಗಿಯುವವರೆಗೂ ಸತ್ಯಾಗ್ರಹ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಲ್ಲಿನ ರೇಣುಕಾ ಮಂದಿರದಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ನೀಡಿದ್ದ ಐದೂ ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು, ತಿಂಗಳಾದರೂ ಈಡೇರಿಸಿಲ್ಲ. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಂತೆ ಜು.5ರಿಂದಲೇ ವಿಧಾನಸೌಧ ಗಾಂಧಿ ಪುತ್ಥಳಿ ಬಳಿ ಹೋರಾಟ ಆರಂಭಿಸಲಿದ್ದೇನೆ ಎಂದರು.

ನಾನೇ ಖುದ್ದಾಗಿ ಧರಣಿ ಸತ್ಯಾಗ್ರಹ ನಡೆಸುವೆ. ವಿಧಾನಸಭೆ, ವಿಧಾನ ಪರಿಷತ್‍ನಲ್ಲೂ ನಮ್ಮ ಶಾಸಕರು ಹೋರಾಟ ನಡೆಸುವರು. ಅಧಿವೇಶನದಲ್ಲಿ ಬಿಜೆಪಿ ಶಾಸಕರು ಗ್ಯಾರಂಟಿ ಯೋಜನೆಗಳ ಜಾರಿಗೆ ಒತ್ತಾಯಿಸಿ ಹೋರಾಟ ನಡೆಸಿದರೆ, ಸದನದ ಹೊರಗೆ ಗಾಂಧಿ ಪುತ್ಥಳಿ ಬಳಿ ನಾನೂ ಸೇರಿದಂತೆ ಬಿಜೆಪಿಯ ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರು ಧರಣಿ ಸತ್ಯಾಗ್ರಹ ನಡೆಸುತ್ತೇವೆ. ಯಾವುದೇ ಷರತ್ತು ವಿಧಿಸದೇ, ಜಾರಿಗೊಳಿಸಬೇಕು.  ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಈಡೇರಿಸದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ, ಹೊರಗೆ ನಮ್ಮ ಹೋರಾಟ ನಿಶ್ಚಿತ ಎಂದು ಹೇಳಿದರು.

ಅಕ್ಕಿ ಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋಗಿ, ಶಕ್ತಿ ಯೋಜನೆ ಹಾಗೂ ಪದವೀಧರರಿಗೆ 3 ಸಾವಿರ ರು., ಡಿಪ್ಲೊಮಾ ಪದವೀಧರರಿಗೆ ವಿದ್ಯಾನಿಧಿ ನೀಡುವುದಾಗಿ ಸ್ವತಃ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸಹಿ ಮಾಡಿ, ಗ್ಯಾರಂಟಿ ಕಾರ್ಡ್‍ಗಳಲ್ಲಿ ರಾಜ್ಯದಲ್ಲಿ ಹಂಚಿ, ಆಶ್ವಾಸನೆ ನೀಡಿದ್ದರು. ಮನೆ ಮನೆಗಳ ಬಾಗಿಲಿಗೆ ಹೋಗಿ, ಗ್ಯಾರಂಟಿ ಕಾರ್ಡ್ ನೀಡಿದ್ದರು. ಈ ಪೈಕಿ ಶಕ್ತಿ ಯೋಜನೆ ಮಾತ್ರ ಜಾರಿಗೊಳಿಸಿದ್ದು, ಅದಕ್ಕೂ ಹಲವಾರು ಷರತ್ತುಗಳನ್ನು ವಿಧಿಸಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೇ ಜಾರಿಗೊಳಿಸಬೇಕು ಎಂದು ಅವರು ತಾಕೀತು ಮಾಡಿದರು.

ಸಿಎಂ ಸಿದ್ದರಾಮಯ್ಯ ಈಗ ರಾಜ್ಯದ ಜನರಿಗೆ ಅಕ್ಕಿ ನೀಡುವ ಬದಲಿಗೆ ವಿನಾಕಾರಣ ಸಬೂಬು ಹೇಳುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಅಕ್ಷಮ್ಯ ಅಪರಾಧ. ಕೊಟ್ಟ ಭರವಸೆಗಳನ್ನು ನೀವು ಮೊದಲು ಈಡೇರಿಸಿ. ಅದನ್ನು ಬಿಟ್ಟು, ಕೇಂದ್ರದ ವಿರುದ್ಧ ವೃಥಾ ಆರೋಪ ಮಾಡಿ, ಕಾಲಹರಣ ಮಾಡುತ್ತಾ ಕೂರುವುದಲ್ಲ ಎಂದು ಕಿಡಿಕಾರಿದರು. 

ಈ ವೇಳೆ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಎಂ.ಪಿ.ರೇಣುಕಾಚಾರ್ಯ, ಸಂಸದ ಸಿದ್ಧೇಶ್ವರ್, ಮಾಜಿ ಶಾಸಕ ಎಸ್.ವಿ.ರಾಮಚಂದ್ರ, ಹರಿಹರದ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಕೆ.ಎಸ್.ನವೀನ್, ಸುಧಾ ಜಯರುದ್ರೇಶ್, ಶಿವಕುಮಾರ್, ಪ್ರೊ.ಲಿಂಗಣ್ಣ, ರವಿಕುಮಾರ್, ಕೇಂದ್ರದ ಸಚಿವ ನಾರಾಯಣಸ್ವಾಮಿ, ಯಶವಂತರಾವ್ ಜಾಧವ್ ಇತರರು ಇದ್ದರು.

share
Next Story
X