Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾಮಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ...

ಗ್ರಾಮಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಿ: ಡಾ.ತಿಪ್ಪೇಸ್ವಾಮಿ

ಉಡುಪಿ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆ

22 Jun 2023 9:02 PM IST
share
ಗ್ರಾಮಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಿ: ಡಾ.ತಿಪ್ಪೇಸ್ವಾಮಿ
ಉಡುಪಿ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆ

ಉಡುಪಿ, ಜೂ.22: ಪ್ರತಿ  ಗ್ರಾಮ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ, ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಶಿಕ್ಷಣ ಸಮಿತಿಗಳನ್ನು ರಚಿಸಬೇಕು. ಈ ಸಮಿತಿಗಳು ಪ್ರತೀ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಮಕ್ಕಳ ಹಕ್ಕುಗಳ ರಕ್ಷಣೆಯೂ ಸೇರಿದಂತೆ ಅವುಗಳನ್ನು ಅನುಷ್ಠಾನ ಮಾಡುವುದು ಸಹ ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಯಾಗಿದೆ. ಶಾಲಾ-ಕಾಲೇಜುಗಳು ಸೇರಿದಂತೆ ಹಾಸ್ಟೆಲ್‌ಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ತಪ್ಪದೇ ಜಾರಿಗೊಳಿಸಬೇಕು. ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು ಎಂದರು. 

ಶಾಲೆಯಿಂದ ಯಾವುದೇ ಮಗು ಹೊರಗೆ ಉಳಿಯದಂತೆ ನೋಡಿ ಕೊಳ್ಳಬೇಕು. ಈ ಬಗ್ಗೆ ಶಿಕ್ಷಣ ಇಲಾಖೆ, ಸ್ಥಳೀಯ ಸಂಸ್ಥೆಗಳು ಹೆಚ್ಚೆಚ್ಚು ಕಾರ್ಯ ಪ್ರವೃತ್ತರಾಗಬೇಕು. ಶಾಲಾ-ಕಾಲೇಜು ವಸತಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಹಾಯವಾಣಿ 112 ಹಾಗೂ 1098 ಅನ್ನು ಗೋಡೆಯ ಮೇಲೆ ಕಡ್ಡಾಯವಾಗಿ ನಮೂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.  

ಶಾಲಾ ಆವರಣಗಳಲ್ಲಿ ವಿದ್ಯುತ್ ತಂತಿಯ ಮಾರ್ಗಗಳು ಇರುವ ಬಗ್ಗೆ ಜಿಲ್ಲಾ ಮಟ್ಟದಲ್ಲಿ ವರದಿಯನ್ನು ನೀಡಬೇಕು ಹಾಗೂ ಇವುಗಳ ತೆರವಿಗೆ ತಕ್ಷಣ ಮುಂದಾಗಬೇಕು ಎಂದು ಡಾ.ತಿಪ್ಪೇಸ್ವಾಮಿ ನಿರ್ದೇಶನ ನೀಡಿದರು.

ಬಾಲ್ಯವಿವಾಹದ ಬಗ್ಗೆ ಎಚ್ಚರವಿರಲಿ: ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಒಂದಾದ ಬಾಲ್ಯ ವಿವಾಹ ಎಲ್ಲೂ ನಡೆಯ ದಂತೆ ಎಚ್ಚರವಹಿಸಿ. ಪ್ರೌಢಶಾಲಾ ಮಟ್ಟದಲ್ಲಿ ಮಕ್ಕಳು ಪ್ರೀತಿ-ಪ್ರೇಮಗಳಿಗೆ ಸಿಲುಕದಂತೆ ಕಡಿವಾಣ ಹಾಕಬೇಕು ಎಂದ ಅವರು, ಪೋಕ್ಸೋ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಲಹೆ ನೀಡಿದರು.  

ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಪ್ರಕರಣಕ್ಕೆ ಒಳಗಾದವರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಆದ್ಯತೆ ಮೇಲೆ ನೀಡಬೇಕು. ಪ್ರತೀ ಶಾಲೆಯಲ್ಲೂ ಮಕ್ಕಳ ಹಕ್ಕುಗಳ ಕ್ಲಬ್‌ಗಳನ್ನು ರಚಿಸುವುದರೊಂದಿಗೆ ವಿದ್ಯಾರ್ಥಿಗಳು ಅದರಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ  ನೋಡಿ ಕೊಳ್ಳುವ ಜವಾಬ್ದಾರಿ ಶಿಕ್ಷಣ ಇಲಾಖೆಯ ದ್ದಾಗಿದೆ ಎಂದರು.

ಯಾವುದೇ ವಿದ್ಯಾರ್ಥಿ ಶಾಲಾ ಶುಲ್ಕಗಳನ್ನು ಕಟ್ಟಿಲ್ಲ ಎಂಬ ಕಾರಣದ ಮೇಲೆ ಆತನ ವರ್ಗಾವಣೆ ಪತ್ರವನ್ನು ತಡೆಹಿಡಿಯದಂತೆ ನೋಡಿಕೊಳ್ಳಬೇಕು ಎಂದು ಡಾ.ತಿಪ್ಪೇಸ್ವಾಮಿ ನುಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಪೊಲೀಸ್ ಉಪಅಧೀಕ್ಷಕ ದಿನಕರ್, ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.  

share
Next Story
X