Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಾಲಿಬಾನ್ ಸರಕಾರದ ಮಾನ್ಯತೆ ಅಸಾಧ್ಯ:...

ತಾಲಿಬಾನ್ ಸರಕಾರದ ಮಾನ್ಯತೆ ಅಸಾಧ್ಯ: ವಿಶ್ವಸಂಸ್ಥೆ

ಮಹಿಳೆಯರ ಮೇಲಿನ ನಿರ್ಬಂಧ ತೆರವಿಗೆ ಆಗ್ರಹ

22 Jun 2023 10:48 PM IST
share
ತಾಲಿಬಾನ್ ಸರಕಾರದ ಮಾನ್ಯತೆ ಅಸಾಧ್ಯ: ವಿಶ್ವಸಂಸ್ಥೆ
ಮಹಿಳೆಯರ ಮೇಲಿನ ನಿರ್ಬಂಧ ತೆರವಿಗೆ ಆಗ್ರಹ

ವಿಶ್ವಸಂಸ್ಥೆ: ಅಫ್ಘಾನ್ ನಲ್ಲಿ  ಮಹಿಳೆಯರ ಹಕ್ಕುಗಳಿಗೆ ನಿರ್ಬಂಧ ಜಾರಿಯಲ್ಲಿರುವವರೆಗೆ ಅಲ್ಲಿನ ತಾಲಿಬಾನ್ ಸರಕಾರವನ್ನು ಅಂತರಾಷ್ಟ್ರೀಯ ಸಮುದಾಯ ಮಾನ್ಯ ಮಾಡುವುದು ಬಹುತೇಕ ಅಸಾಧ್ಯವಾಗಿದೆ ಎಂದು ವಿಶ್ವಸಂಸ್ಥೆ ಬುಧವಾರ ಹೇಳಿದೆ.

‘ಅಫ್ಘಾನ್ನಲ್ಲಿ ವಾಸ್ತವಿಕ ಅಧಿಕಾರಿಗಳೊಂದಿಗೆ ನನ್ನ ನಿಯಮಿತ ಚರ್ಚೆಯ ಸಂದರ್ಭ ಅವರು ಜಾರಿಗೆ ತಂದಿರುವ ನಿರ್ಬಂಧಗಳು (ವಿಶೇಷವಾಗಿ ಮಹಿಳೆಯರು ಮತ್ತು ಬಾಲಕಿಯರ ವಿರುದ್ಧ) ಯಾವ ರೀತಿ ಅವರಿಗೆ ಅಂತರಾಷ್ಟ್ರೀಯ ಮಾನ್ಯತೆ ಪಡೆಯುವುದಕ್ಕೆ ಅಡ್ಡಿಯಾಗುತ್ತಿದೆ ಎಂಬುದನ್ನು ವಿವರಿಸಿದ್ದೇನೆ’ ಎಂದು ಅಫ್ಘಾನ್ ನಲ್ಲಿ ವಿಶ್ವಸಂಸ್ಥೆಯ ನೆರವು ನಿಯೋಗದ ಮುಖ್ಯಸ್ಥೆ ರೋಝಾ ಒಟುಂಬಯೆವ ಹೇಳಿದ್ದಾರೆ. ಬುಧವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

‘ವಿಶ್ವಸಂಸ್ಥೆ ಮತ್ತದರ ಸದಸ್ಯ ದೇಶಗಳು ಮಾನ್ಯತೆ ನೀಡಬೇಕು ಎಂದು ತಾಲಿಬಾನ್ ಬಯಸುತ್ತಿದೆ. ಆದರೆ ಇದೇ ವೇಳೆ, ವಿಶ್ವಸಂಸ್ಥೆಯ ಸನದಿನಲ್ಲಿ ಉಲ್ಲೇಖಿಸಲಾಗಿರುವ ಪ್ರಮುಖ ಸಿದ್ಧಾಂತಗಳಿಗೆ ವಿರುದ್ಧವಾಗಿ ಅವರು ವರ್ತಿಸುತ್ತಿದ್ದಾರೆ. ಮಹಿಳೆಯರ ಹಕ್ಕುಗಳ ಮೇಲಿನ ನಿರ್ಬಂಧದ ಕುರಿತ ಆದೇಶ ಜಾರಿಯಲ್ಲಿರುವವರೆಗೆ ಅವರ ಸರಕಾರವನ್ನು ಅಂತರಾಷ್ಟ್ರೀಯ ಸಮುದಾಯ ಮಾನ್ಯ ಮಾಡುವುದು ಬಹುತೇಕ ಅಸಾಧ್ಯ’ ಎಂದು ತಾಲಿಬಾನ್ ಅಧಿಕಾರಿಗಳಿಗೆ ಸ್ಪಷ್ಟಪಡಿಸಲಾಗಿದೆ ಎಂದು ರೋಝಾ ಒಟುಂಬಯೆವ ಹೇಳಿದ್ದಾರೆ.

ಅಫ್ಘಾನಿಸ್ತಾನದ ತಾಲಿಬಾನ್ ಸರಕಾರವನ್ನು ಯಾವುದೇ ದೇಶ ಅಥವಾ ಅಂತರಾಷ್ಟ್ರೀಯ ಸಂಘಟನೆ ಅಧಿಕೃತವಾಗಿ ಮಾನ್ಯ ಮಾಡಿಲ್ಲ. 2021ರಲ್ಲಿ ಅಧಿಕಾರಕ್ಕೆ ಮರಳಿದಂದಿನಿಂದ ತಾಲಿಬಾನ್ ಆಡಳಿತವು ಮಹಿಳೆಯರ ಮೇಲೆ ಹಲವು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಉನ್ನತ ಶಿಕ್ಷಣ ಪಡೆಯುವುದನ್ನು, ಸರಕಾರಿ ಉದ್ಯೋಗ ಪಡೆಯುವುದನ್ನು, ಸ್ಥಳೀಯ ಮತ್ತು ಅಂತರಾಷ್ಟ್ರೀಯ ಎನ್ಜಿಒ(ಸರಕಾರೇತರ) ಸಂಘಟನೆಗಳಲ್ಲಿ ಕೆಲಸ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಮಹಿಳೆಯರ ಹಕ್ಕುಗಳನ್ನು ನಿರ್ಬಂಧಿಸುವ ಇಂತಹ ಕ್ರಮಗಳನ್ನು ಅಫ್ಘಾನ್ನ ಜನರೇ ವಿರೋಧಿಸುತ್ತಿದ್ದಾರೆ. ಈ ಕ್ರಮಗಳಿಗಾಗಿ ತಾಲಿಬಾನ್ ಅಧಿಕಾರಿಗಳು ಸ್ಥಳೀಯವಾಗಿ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೆಲೆಯನ್ನು ತೆರಬೇಕಾಗಿದೆ. ಸ್ಥಳೀಯವಾಗಿ ಹೇಳುವುದಾದರೆ ದೇಶದ ಜನಸಂಖ್ಯೆಯ 50%ದಷ್ಟು ಜನರಿಗೆ ಸಂಕಷ್ಟ ತರುವ ನೀತಿಯಿಂದಾಗಿ ಅರ್ಥವ್ಯವಸ್ಥೆಗೆ ಹಾನಿಯಾಗುತ್ತಿದೆ. ಕಳೆದ ಎಪ್ರಿಲ್ನಲ್ಲಿ ವಿದೇಶಿ ಎನ್ಜಿಒಗಳಲ್ಲಿ ಕೆಲಸ ಮಾಡುವುದಕ್ಕೆ ಇದ್ದ ನಿರ್ಬಂಧವು ಅಫ್ಘಾನಿಸ್ತಾನದ ಆದ್ಯಂತದ ವಿಶ್ವಸಂಸ್ಥೆ ಕಚೇರಿಗೂ ವಿಸ್ತರಣೆಯಾಗಿದೆ. 

ಇದಕ್ಕೆ ಅಲ್ಲಿನ ಅಧಿಕಾರಿಗಳು ಯಾವುದೇ ವಿವರಣೆ ನೀಡಿಲ್ಲ ಅಥವಾ ನಿರ್ಬಂಧ ಯಾವಾಗ ತೆರವಾಗುತ್ತದೆ ಎಂದು ಮಾಹಿತಿ ನೀಡಿಲ್ಲ. ಅಲ್ಲಿರುವ ನಮ್ಮ ಮಹಿಳಾ ಸಿಬಂದಿಗಳನ್ನು ಅಪಾಯಕ್ಕೆ ಒಡ್ಡಲು ನಾವು ಸಿದ್ಧವಿಲ್ಲ. ಆದ್ದರಿಂದ ಕಚೇರಿಗೆ ಬರಬೇಡಿ ಎಂದವರಿಗೆ ಸೂಚಿಸಿದ್ದೇವೆ. ತಾರತಮ್ಯ ಮಾಡದಿರುವ ನಮ್ಮ ನೀತಿಗೆ ಅನುಗುಣವಾಗಿ ಅಗತ್ಯವಿಲ್ಲದ ಪುರುಷ ಸಿಬಂದಿಗಳನ್ನೂ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ ಎಂದವರು ಹೇಳಿದ್ದಾರೆ.

share
Next Story
X