Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾಗತಿಕ ಶಾಂತಿಗಾಗಿ ಕೆಲಸ ಮಾಡಲು...

ಜಾಗತಿಕ ಶಾಂತಿಗಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧ: ಶ್ವೇತಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ

22 Jun 2023 11:20 PM IST
share
ಜಾಗತಿಕ ಶಾಂತಿಗಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧ: ಶ್ವೇತಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ

ವಾಷಿಂಗ್ಟನ್: ಜಾಗತಿಕ ಶಾಂತಿಗಾಗಿ ಕಾರ್ಯನಿರ್ವಹಿಸಲು ಭಾರತ-ಅಮೆರಿಕ ಬದ್ಧವಾಗಿದೆ. ಎರಡೂ ದೇಶಗಳ ಸಮಾಜಗಳು ಮತ್ತು ಸಂಸ್ಥೆಗಳು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಆಧರಿಸಿವೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೆರಿಕ ಪ್ರವಾಸದ ಎರಡನೇ ದಿನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ರನ್ನು ಭೇಟಿಯಾದ ಸಂದರ್ಭ ತಮಗೆ ನೀಡಿದ ಭವ್ಯ ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿದ ಮೋದಿ, ಇದು ಭಾರತದ 1.4 ಶತಕೋಟಿ ಜನರಿಗೆ, ಅಮೆರಿಕದಲ್ಲಿರುವ 4 ದಶಲಕ್ಷ ಭಾರತೀಯ ಸಮುದಾಯಕ್ಕೆ  ಸಂದ ಗೌರವ ಮತ್ತು  ಹೆಮ್ಮೆಯಾಗಿದೆ . ಎರಡೂ ದೇಶಗಳ ನಡುವಿನ ಸೌಹಾರ್ದ ಸಂಬಂಧದ ಸಂಕೇತವಾಗಿದೆ ಎಂದರು.

ಭಾರತೀಯ ಸಮುದಾಯದ ಜನರು ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದ ಮೂಲಕ ಅಮೆರಿಕದಲ್ಲಿ ಭಾರತದ ಹಿರಿಮೆಯನ್ನು ಹೆಚ್ಚಿಸುತ್ತಿದ್ದಾರೆ. ಇವರು ಎರಡೂ ದೇಶಗಳ ನಡುವಿನ ಸಂಬಂಧದ ನಿಜವಾದ ಶಕ್ತಿಯಾಗಿದ್ದಾರೆ. ಈ ಗೌರವವನ್ನು ಅವರಿಗೆ ಒದಗಿಸಿದ್ದಕ್ಕೆ ಬೈಡನ್ ಮತ್ತು ಅವರ ಪತ್ನಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮೋದಿ ಹೇಳಿದರು. ಉಭಯ ದೇಶಗಳ ಸಂವಿಧಾನವೂ ‘ನಾವು.. ಜನರು’ ಎಂಬ ಪದದೊಂದಿಗೆ ಆರಂಭವಾಗುತ್ತದೆ. ನಾವಿಬ್ಬರೂ ‘ಎಲ್ಲರ ಹಿತಾಸಕ್ತಿ.. ಎಲ್ಲರ ಕಲ್ಯಾಣ’ ಎಂಬ ಮೂಲಭೂತ ತತ್ವದಲ್ಲಿ ನಂಬಿಕೆ ಇರಿಸಿದ್ದೇವೆ.   

ಬಳಿಕ ಮಾತನಾಡಿದ ಬೈಡನ್ ‘ಅಮೆರಿಕ-ಭಾರತದ ಸಂಬಂಧ 21ನೇ ಶತಮಾನದ ಅತ್ಯಂತ ನಿರ್ಣಾಯಕ ಸಂಬಂಧಗಳಲ್ಲಿ ಒಂದಾಗಿದೆ’ ಎಂದರು. ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಅವರ ಪತಿ ಡಗ್ಲಾಸ್ ಎಮ್ಹೋಫ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. 

ಬುಧವಾರ ಬೈಡನ್ ಮತ್ತವರ ಪತ್ನಿ ಜಿಲ್ ಬೈಡನ್ ಶ್ವೇತಭವನದಲ್ಲಿ ಮೋದಿ ಗೌರವಾರ್ಥ ಔತಣಕೂಟವನ್ನು ಆಯೋಜಿಸಿದ್ದರು. ಈ ಸಂದರ್ಭ ಹಲವು ಮಹತ್ವದ ವಿಷಯಗಳ ಬಗ್ಗೆ ಉಭಯ ಮುಖಂಡರು ಚರ್ಚೆ ನಡೆಸಿದರು ಎಂದು ವರದಿಯಾಗಿದೆ.

ಬೆಂಗಳೂರು, ಅಹ್ಮದಾಬಾದ್ ನಲ್ಲಿ ಅಮೆರಿಕದ ಕಾನ್ಸುಲೇಟ್ ಆರಂಭಕ್ಕೆ ಒಪ್ಪಂದ

ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಈ ಸಂದರ್ಭ ರಕ್ಷಣಾ ಕಾರ್ಯಕ್ರಮ, ಬಾಹ್ಯಾಕಾಶ ಯಾತ್ರೆ, ವೀಸಾ ನಿಯಮ ಸೇರಿದಂತೆ ಹಲವು ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮೋದಿ ಅಮೆರಿಕ ಭೇಟಿಯ ಎರಡನೇ ದಿನವಾದ ಗುರುವಾರದ  ಕೆಲವು ಮಹತ್ವದ ಬೆಳವಣಿಗಳ ವಿವರ:

► ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಪೂರಕವಾದ ಕ್ರಮವೊಂದರಲ್ಲಿ ಭಾರತದ ವಾಯುಪಡೆಗೆ ಅಗತ್ಯವಿರುವ ಯುದ್ಧವಿಮಾನದ ಇಂಜಿನ್ಗಳನ್ನು ಭಾರತದಲ್ಲಿ ತಯಾರಿಸಲು ಸರಕಾರಿ ಸ್ವಾಮ್ಯದ ಎಚ್ಎಎಲ್ ಜತೆಗೂಡುವುದಾಗಿ ಅಮೆರಿಕದ ‘ಜನರಲ್ ಇಲೆಕ್ಟ್ರಿಕ್ಸ್’ನ  ಏರೋಸ್ಪೇಸ್ ವಿಭಾಗ ಘೋಷಿಸಿದೆ.

► ಭಾರತ ಮತ್ತು ಅಮೆರಿಕ ರಾಜತಾಂತ್ರಿಕ ಸಂಬಂಧಗಳಲ್ಲಿ ದೊಡ್ಡ ಹೆಜ್ಜೆಯಿಟ್ಟಿದ್ದು ಎಚ್-1ಬಿ ವೀಸಾ ಪ್ರಕ್ರಿಯೆ ಬದಲಾವಣೆ ಗೆ ಮತ್ತು ಹೊಸ ಕಾನ್ಸುಲೇಟ್ ಕಚೇರಿ ಆರಂಭಿಸಲು ನಿರ್ಧಾರ.

► ಭಾರತ ಈಗ ಅಮೆರಿಕದಲ್ಲಿ ಐದು ಕಾನ್ಸುಲೇಟ್ ಕಚೇರಿಯನ್ನು ಹೊಂದಿದ್ದು ಇದೀಗ ಸಿಯಾಟಲ್ನಲ್ಲಿ ಮತ್ತೊಂದು ಕಚೇರಿ ಆರಂಭಿಸಲಿದೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು ಮತ್ತು ಅಹ್ಮದಾಬಾದ್ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಆರಂಭವಾಗಲಿದೆ.

► ಅಮೆರಿಕದಲ್ಲಿ ವಾಸಿಸಲು ಮತ್ತು ಕೆಲಸ ಮಾಡಲು ಸುಲಭವಾಗುವಂತೆ ಹೊಸ ವೀಸಾ ನಿಯಮ ರೂಪಿಸಲಾಗಿದೆ. ಇದರಂತೆ, ಎಚ್-1ಬಿ ವೀಸಾದಡಿ ಇರುವ ಕಡಿಮೆ ಸಂಖ್ಯೆಯ ಭಾರತೀಯರು ಹಾಗೂ ಇತರ ವಿದೇಶಿ ಕೆಲಸಗಾರರು ಅಮೆರಿಕದಲ್ಲಿ ಇದ್ದುಕೊಂಡೇ ತಮ್ಮ ವೀಸಾಗಳನ್ನು ನವೀಕರಿಸಬಹುದಾಗಿದೆ. ಮುಂದಿನ ದಿನದಲ್ಲಿ ಈ ಯೋಜನೆಯನ್ನು ಇನ್ನಷ್ಟು ಭಾರತೀಯರಿಗೆ ವಿಸ್ತರಿಸಲಾಗುವುದು. 2022ರಲ್ಲಿ ಎಚ್-1ಬಿ ವೀಸಾ ಹೊಂದಿರುವ 4,42,000 ಜನರಲ್ಲಿ 73%ದಷ್ಟು ಭಾರತೀಯರಾಗಿದ್ದಾರೆ ಎಂದು ರಾಯ್ಟರ್ಸ್ ವರದಿ ಮಾಡಿದೆ.

► 2025ರೊಳಗೆ ಚಂದಿರನೆಡೆಗೆ ಮಾನವರನ್ನು ಕಳುಹಿಸುವ, ಅಮೆರಿಕ ನೇತೃತ್ವದ ‘ಆರ್ಟೆಮಿಸ್ ಒಪ್ಪಂದ’ಕ್ಕೆ ಭಾರತ ಸೇರ್ಪಡೆಯಾಗಲಿದೆ ಎಂದು ಶ್ವೇತಭವನದ ಮೂಲಗಳು ಹೇಳಿವೆ.

► ಅಮೆರಿಕದ ಪ್ರಮುಖ ಸಂಸ್ಥೆ ‘ಮೈಕ್ರಾನ್ ಟೆಕ್ನಾಲಜಿ’(ಕಂಪ್ಯೂಟರ್ ಚಿಪ್ ಉತ್ಪಾದಿಸುವ ಸಂಸ್ಥೆ) ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಗೆ ಪ್ರೋತ್ಸಾಹ ನೀಡಲಿದೆ. ಸೆಮಿಕಂಡಕ್ಟರ್ಗಳು ಇಲೆಕ್ಟ್ರಾನಿಕ್ಸ್ ವಸ್ತುಗಳಿಂದ ಹಿಡಿದು ಅಟೊಮೊಬೈಲ್ ಕ್ಷೇತ್ರದವರೆಗೂ ಅತ್ಯಂತ ಪ್ರಮುಖ ಅಗತ್ಯವಾಗಿರುವುದರಿಂದ ಇದು ಅತ್ಯಂತ ಮಹತ್ವದ ಉಪಕ್ರಮವಾಗಿದೆ

share
Next Story
X