Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗನ ಹತ್ಯೆಗೈದ ಆರೋಪಿಯನ್ನು ಕೊಲೆಗೈದ...

ಮಗನ ಹತ್ಯೆಗೈದ ಆರೋಪಿಯನ್ನು ಕೊಲೆಗೈದ ತಾಯಿ!

22 Jun 2023 11:48 PM IST
share
ಮಗನ ಹತ್ಯೆಗೈದ ಆರೋಪಿಯನ್ನು ಕೊಲೆಗೈದ ತಾಯಿ!

ಹೈದರಾಬಾದ್, ಜೂ. 22: ಆಂಧ್ರಪ್ರದೇಶದಲ್ಲಿ ಮಹಿಳೆಯೊಬ್ಬರು ಒಂದೂವರೆ ವರ್ಷದ ಹಿಂದೆ ತನ್ನ ಮಗನನ್ನು ಕೊಂದ ವ್ಯಕ್ತಿಯೊಬ್ಬನನ್ನು ಕೊಂದು ಪ್ರತೀಕಾರ ತೀರಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬುಧವಾರ ಬೆಳಗ್ಗೆ ಅವರು ಪೊಲೀಸರಿಗೆ ಶರಣಾಗಿದ್ದಾರೆ.

ಜಾನ್ ಬಿ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆಯಲ್ಲಿ ತನ್ನ ಇಬ್ಬರು ಪುತ್ರರೊಂದಿಗೆ ವಾಸಿಸುತ್ತಿದ್ದರು. ಅವರು ತನ್ನ ಮಕ್ಕಳೊಂದಿಗೆ ಕೂಲಿ ಕೆಲಸ ಮಾಡುತ್ತಿದ್ದರು. ಅವರ ಗಂಡ ಶಬೀರ್ 15 ವರ್ಷಗಳ ಹಿಂದೆ ನಿಧನರಾಗಿದ್ದರು.

ಜಾನ್ ಬಿ, ಶೇಖ್ ಬಾಜಿ ಎಂಬ ಸ್ಥಳೀಯ ರೌಡಿಯೊಂದಿಗೆ ಸಂಬಂಧ ಬೆಳೆಸಿದ್ದರು. ಇದು ದೊಡ್ಡ ಮಗನ ಗಮನಕ್ಕೆ ಬಂದಾಗ ಅವನು ಶೇಖ್ ಬಾಜಿಗೆ ಮನೆಗೆ ಬರದಂತೆ ಎಚ್ಚರಿಕೆ ನೀಡಿದ್ದನು. ಕೋಪಗೊಂಡ ಶೇಖ್ ಬಾಜಿ ತನ್ನ ಗೆಳೆಯರ ನೆರವಿನಿಂದ 2021 ಆಗಸ್ಟ್‌ನಲ್ಲಿ ಜಾನ್ ಬಿಯ ದೊಡ್ಡ ಮಗನನ್ನು ಕೊಂದನು.

2021 ಡಿಸೆಂಬರ್‌ನಲ್ಲಿ, ಜಾನ್ ಬಿ ತನ್ನ ಸಹೋದರ ಮತ್ತು ಚಿಕ್ಕ ಮಗನೊಂದಿಗೆ ಪ್ರಧಾನ ಆರೋಪಿ ಕಸಮ್‌ನನ್ನು ಕೊಂದರು. ಬಳಿಕ ಪೊಲೀಸರಿಗೆ ಶರಣಾದರು.
ಕೆಲವು ತಿಂಗಳ ಬಳಿಕ ಜಾಮೀನಿನಲ್ಲಿ ಹೊರಬಂದ ಅವರು ಎರಡನೇ ಆರೋಪಿ ಶೇಖ್ ಬಾಜಿಯನ್ನು ಕೊಲ್ಲಲು ಯೋಜನೆ ರೂಪಿಸಿದರು. ಶೇಖ್ ಬಾಜಿಗೆ ಫೋನ್ ಮಾಡಿ ತಮ್ಮ ಸಂಬಂಧವನ್ನು ಮುಂದುವರಿಸುವ ಎಂದು ಮನವರಿಕೆ ಮಾಡಿದರು.

ಇದನ್ನು ನಂಬಿದ ಶೇಖ್ ಮಂಗಳವಾರ ರಾತ್ರಿ ಜಾನ್ ಬಿ ಸಹೋದರನ ಹುಟ್ಟುಹಬ್ಬಕ್ಕೆ ಬಂದನು. ಕುಡಿದ ಅಮಲಿನಲ್ಲಿದ್ದ ಆತನನ್ನು ಜಾನ್ ಬಿ ಮತ್ತು ಇತರ ಮೂವರು ಇರಿದು ಕೊಂದರು. ಬಳಿಕ ಅವರು ಪೊಲೀಸರಿಗೆ ಶರಣಾಗಿದ್ದಾರೆ.

share
Next Story
X