ವಿಜೃಂಭಣೆಯಿಂದ ನಡೆದ ಜಂಬೂ ಸವಾರಿ ಮೆರವಣಿಗೆ
-
ಮೈಸೂರು,ಸೆ.30: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಕೊನೆಯ ಆಕರ್ಷಣೆಯಾದ ವೈಭವದ ಜಂಬೂಸವಾರಿ ಸಾಂಸ್ಕೃತಿಕ ಶನಿವಾರ ಮುಗಿಲು ಮಟ್ಟುವ ಹರ್ಷೋದ್ಘಾರಗಳ ನಡುವೆ ನಡೆಯಿತು. ಇಂದಿನ ಜಂಬೂ ಸವಾರಿ ಯದುವಂಶದ ಅರಸರ ಗತವೈಭವ, ಪರಂಪರೆ ಹಾಗೂ ಇತಿಹಾಸವನ್ನು ನೆನಪಿಸುವಂತಿತ್ತು.
ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.15ಕ್ಕೆ ಶುಭಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ನಂತರ ಸಂಜೆ 4.45ಕ್ಕೆ ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಭ ಕುಂಬ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಸಶಸ್ತ್ರ ಪಡೆಯ (ಸಿಎಆರ್) ಪೊಲೀಸರು, 21 ಕುಶಾಲತೋಪುಗಳನ್ನು ಹಾರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ, ಯದುವಂಶಸ್ಥ ಯುವರಾಜ ಯದುವೀರ್, ಮೇಯರ್ ರವಿಕುಮಾರ್, ಜಿಲ್ಲಾಧಿಕಾರಿ ಡಿ. ರಂದೀಪ್, ನಗರ ಪೊಲೀಸ್ ಆಯುಕ್ತ ಎ. ಸುಬ್ರಮಣ್ಯೇಶ್ವರ ರಾವ್ ಸೇರಿದಂತೆ ಸಂಸದರು, ಶಾಸಕರು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಅಂಬಾರಿಯನ್ನು ಹೊತ್ತ ಅರ್ಜುನ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದರೆ, ಉಳಿದ ಗಜಪಡೆ ಅವನನ್ನು ಹಿಂಬಾಲಿಸಿದ್ದು ನೋಡುಗರ ಕಣ್ಮನ ಸೆಳೆಯುತ್ತಿತ್ತು. ಕುಶಾಲತೋಪುಗಳ ಭಾರೀ ಶಬ್ಧಕ್ಕೆ ಹೆದರದೆ ಗಜರಾಜ ಅರ್ಜುನ 750 ಕೆಜಿ ತೂಕದ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಅಂಬಾರಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಿತ್ತು.
ಇದಕ್ಕೂ ಮುನ್ನ ರಾಜವಂಶಸ್ಥ ಯದುವೀರ್ ಒಡೆಯರ್ ಅರಮನೆಯಲ್ಲಿ ವಿಜಯದಶಮಿ ಹಾಗೂ ಶಮಿಪೂಜೆ ನಡೆಸಿದರು. ಕಳೆದ 9 ದಿನಗಳಿಂದ ಸಾಂಸ್ಕೃತಿಕ ನಗರಿಯಲ್ಲಿ ಕಿನ್ನರ ಲೋಕವನ್ನೇ ಸೃಷ್ಟಿಸಿ ಲಕ್ಷಾಂತರ ಜನಮನ ಸೂರೆಗೊಂಡ ವಿಜೃಂಭಣೆಯ, ರಸದೌತಣದ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡು ಅಂತಿಮ ಪ್ರಮುಖ ಘಟ್ಟ ಜಂಬೂ ಸವಾರಿ ಮೆರವಣಿಗೆಗೆ ಸಾಕ್ಷಿಭೂತರಾದರು. ರಾಜಬೀದಿಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗುತ್ತಿದ್ದಂತೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನಸ್ತೋಮ ಹರ್ಷೋದ್ಗಾರ ಮಾಡುತ್ತಿದ್ದುದು ಕಂಡುಬಂತು.
ಪೋಲಿಸ್ ಬ್ಯಾಂಡ್ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ ಮಜಲು, ನಂದಿಕೋಲು, ಮರಗಾಲು, ಹುಲಿವೇಷಧಾರಿಗಳೂ ಸೇರಿದಂತೆ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ದಸರಾ ಜಂಬೂಸವಾರಿ ಮೆರವಣಿಗೆಗೆ ಮೆರಗು ತಂದಿದ್ದವು. ರಾಜ್ಯದ ಕಲಾ ತಂಡಗಳಲ್ಲದೆ, ಉತ್ತರ ಪ್ರದೇಶ, ಪಂಜಾಬ್, ತೆಲಂಗಾಣ, ಒಡಿಸ್ಸಾ, ಡಾರ್ಜಲಿಂಗ್, ಹರಿಯಾಣ ರಾಜ್ಯಗಳ ಸುಮಾರು 40 ತಂಡಗಳು ಅತ್ಯಾಕರ್ಷಕ ನೃತ್ಯ ಪ್ರದರ್ಶನ ನೀಡಿ ನೋಡುಗರ ಪ್ರಶಂಸೆಗೆ ಪಾತ್ರವಾದವು.
ನಾಡಿನ ಕಲೆ, ಸಾಹಿತ್ಯ, ವಾಸ್ತುಶಿಲ್ಪ, ಪಾರಂಪರೆ, ಪರಿಸರ, ಐತಿಹಾಸಿಕ ತಾಣಗಳು, ಪುರಾಣ ಪ್ರಸಿದ್ಧ ತಾಣಗಳು, ದೇವಾಲಯಗಳು ಮುಂತಾದ ಸ್ತಬ್ಧ ಚಿತ್ರಗಳ ಮೆರವಣಿಗೆ ಸಾಲುಗಟ್ಟಿ ಸಾಗಿತ್ತು. ಇದು ನೋಡುಗರಲ್ಲಿ ಕುತೂಹಲ ಮೂಡಿಸಿತ್ತು.
ಎಲ್ಲ ಜಿಲ್ಲೆಗಳ ಪ್ರಮುಖ ಐತಿಹಾಸಿಕ ಮತ್ತು ಪುಣ್ಯ ಕ್ಷೇತ್ರಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಇದ್ದವು. ವೀರರಾಣಿ ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವ, ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಮುಂತಾದ ದಾರ್ಶನಿಕರ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು.
ಅರಮನೆ ಆವರಣದಿಂದ ಬನ್ನಿಮಂಟಪದ ಕವಾಯತು ಮೈದಾನದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಿತು. ದೇಶ-ವಿದೇಶಗಳ ಪ್ರವಾಸಿಗರು ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಂಡರು. ಮುನ್ನೆಚ್ಚರಿಕೆ ಕ್ರಮವಾಗಿ ಮೆರವಣಿಗೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಮೆರವಣಿಗೆಯಲ್ಲಿ ಕೆಎಸ್ಆರ್ಪಿ, ಅಗ್ನಿಶಾಮಕ ಸೇವೆ, ಮೌಂಟ್ ಬಿಟಾಲಿಯನ್, ಕರ್ನಾಟಕ ಪೊಲೀಸ್ ಬ್ಯಾಂಡ್, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾ ದಳ, ಮಹಿಳಾ ಪೊಲೀಸ್, ರಿಸರ್ವ್ ಪೊಲೀಸ್ ಸೇರಿದಂತೆ ಅರಮನೆಯ ವಾದ್ಯವೃಂದ, ಪಿರಂಗಿ ಗಾಡಿಗಳು, ವಿಶೇಷ ವೇಷಧಾರಿಗಳ ತಂಡ, ಅಲೆಮಾರಿಗಳ ತಂಡ ಸೇರಿದಂತೆ 30 ತಂಡಗಳು ಪಾಲ್ಗೊಂಡಿದ್ದವು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.