Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಲೇಖನಗಳು
  4. ಗಂಗೊಳ್ಳಿ ಬೋಟ್ ಅಗ್ನಿ ದುರಂತಕ್ಕೆ ಒಂದು...

ಗಂಗೊಳ್ಳಿ ಬೋಟ್ ಅಗ್ನಿ ದುರಂತಕ್ಕೆ ಒಂದು ವಾರ: ಇನ್ನೂ ಸಿಗದ ಪರಿಹಾರ..!

ಸಂಕಷ್ಟಕ್ಕೊಳಗಾದ ಮೀನುಗಾರರು

ವಾರ್ತಾಭಾರತಿವಾರ್ತಾಭಾರತಿ20 Nov 2023 11:50 PM IST
share

ಯೋಗೀಶ್ ಕುಂಭಾಶಿ/ಬಿ.ಬಿ.ಶೆಟ್ಟಿಗಾರ್

ಕುಂದಾಪುರ, ನ.19: ರಾಜ್ಯದ ಪಶ್ಚಿಮ ಕರಾವಳಿಯ ಪ್ರಮುಖ ಬಂದರು ಕೇಂದ್ರಗಳಲ್ಲಿ ಒಂದಾದ ಗಂಗೊಳ್ಳಿಯಲ್ಲಿ ದೀಪಾವಳಿ ದಿನ ನಡೆದ ಅಗ್ನಿ ಅವಘಡ ಮೀನುಗಾರಿಕೆಯನ್ನು ನೆಚ್ಚಿಕೊಂಡ ಸಾಕಷ್ಟು ಸಂಖ್ಯೆಯ ಮೀನುಗಾರರ ಬದುಕನ್ನು ಕಸಿದುಕೊಂಡಿದೆ. ಆಕಸ್ಮಿಕ ಬೆಂಕಿ ಅನಾಹುತದಿಂದ 9 ಮೀನುಗಾರಿಕಾ ಬೋಟು, ಸಣ್ಣ ದೋಣಿಗಳು, ಡೆಂಗಿ ಬೋಟುಗಳು, ಬಲೆಗಳು ಸುಟ್ಟು ಕರಕಲಾಗಿದ್ದು, ಈ ಘಟನೆಯಿಂದ ಮೀನುಗಾರರು ದಿಗ್ಭ್ರಾಂತರಾಗಿದ್ದಾರೆ.

<ಏನಿದು ಘಟನೆ..?: ಕಳೆದ ಸೋಮವಾರ (ನ.13) ಬೆಳಗ್ಗೆ ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯ ವಾರ್ಪ್ ಪ್ರದೇಶದಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟುಗಳಿಗೆ ಆಕಸ್ಮಿಕ ಬೆಂಕಿ ತಗುಲಿತ್ತು. ಕ್ಷಣಾರ್ಧದಲ್ಲಿ ಬೆಂಕಿ ಕೆನ್ನಾಲಿಗೆ ಸುತ್ತಮುತ್ತ ವ್ಯಾಪಿಸಿ ಸುಮಾರು 9 ಬೋಟುಗಳನ್ನು ಆಹುತಿ ಪಡೆದಿದೆ. ಮಳೆಗಾಲಕ್ಕೂ ಮುಂಚೆ ಈ ಭಾಗದಲ್ಲಿ ಬೋಟುಗಳನ್ನು ನಿಲ್ಲಿಸಿ ಅವುಗಳ ದುರಸ್ತಿ ಕೆಲಸ ನಿರ್ವಹಿಸಲಾಗುತ್ತದೆ. ಹೀಗಾಗಿ ಈ ಬೋಟುಗಳು ಕೆಲ ತಿಂಗಳುಗಳಿಂದ ಇಲ್ಲಿಯೇ ಇದ್ದು ಮುಂದೆ ಒಂದೆರಡು ದಿನದಲ್ಲಿ ಮೀನುಗಾರಿಕೆಗೆ ತೆರಳಲು ಅಣಿಯಾಗಿತ್ತು.

ಬೆಂಕಿ ಅವಘಡದಿಂದ ಹೊತ್ತಿ ಉರಿದ 9 ಬೋಟುಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಪರ್ಸೀನ್ ಬೋಟುಗಳು, 370 ಮೊದಲಾದ ದುಬಾರಿ ಬೋಟುಗಳಿದ್ದು, ಉಳಿದಂತೆ ಸಣ್ಣ ದೋಣಿಗಳು, ಬಲೆಗಳು, ವಾರ್ಪ್ ಪ್ರದೇಶದಲ್ಲಿದಲ್ಲಿದ್ದ ಮೂರಕ್ಕೂ ಅಧಿಕ ಬೈಕ್‌ಗಳ ಸಹಿತ ವಿವಿಧ ಪರಿಕರಗಳು ಸುಟ್ಟು ಬೂದಿಯಾಗಿದ್ದವು. ಒಟ್ಟಾರೆಯಾಗಿ ಆದ ನಷ್ಟ 13ರಿಂದ 15 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಸಚಿವರು, ಜನಪ್ರತಿನಿಧಿಗಳ ಭೇಟಿ: ಘಟನೆ ನಡೆದ ದಿನವೇ ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಸಹಿತ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಶ್ಪಾಲ್ ಸುವರ್ಣ ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಭೇಟಿ ನೀಡಿದ್ದರು. ನಂತರದ ದಿನಗಳಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ.ರಾಘವೇಂದ್ರ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕಳೆದ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮೊದಲಾದವರು ಭೇಟಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಸಂಸದರು, ಶಾಸಕರು ಪರಿಹಾರದ ಭರವಸೆ ನೀಡಿದ್ದು ಶೀಘ್ರದಲ್ಲಿ ಪರಿಹಾರ ಹಣ ದೊರೆತು ಕಮರಿದ ಬದುಕನ್ನುಮತ್ತೆ ಕಟ್ಟಿಕೊಳ್ಳುವ ನಿರೀಕ್ಷೆಯಲ್ಲಿ ಮೀನುಗಾರರಿದ್ದಾರೆ.

ಕುಂದಾಪುರಕ್ಕೆ ಹತ್ತಿರವಿದ್ದರೂ ದೂರವಾದ ಗಂಗೊಳ್ಳಿ..!

ಕುಂದಾಪುರ ನಗರದ ಅಂಚಿನ ಪಂಚ ಗಂಗಾವಳಿ ನದಿಯಿಂದ ಗಂಗೊಳ್ಳಿಗೆ ದೋಣಿ ಮೂಲಕ ಸಾಗಲು ಅನತಿ ದೂರ. ಆದರೆ, ರಸ್ತೆ ಮಾರ್ಗವಾಗಿ ಸುಮಾರು 15 ಕಿ.ಮೀ. ಸುತ್ತುಹಾಕಿ ಸಾಗಬೇಕು. ಅವಘಡ ನಡೆದ ದಿನವೂ ಬೈಂದೂರಿನಿಂದ ಅಗ್ನಿಶಾಮಕ ದಳ ಬಂದಿದ್ದು, ಹೆಚ್ಚುವರಿ ಅಗ್ನಿಶಾಮಕ ವಾಹನದ ಅಗತ್ಯವಿದ್ದುದರಿಂದ ಕುಂದಾಪುರ ಹಾಗೂ ಉಡುಪಿಯಿಂದ ಆಗಮಿಸಿದ ಅಗ್ನಿಶಾಮಕ ವಾಹನಗಳು ಸುತ್ತು ಹಾಕಿ ಘಟನಾ ಸ್ಥಳಕ್ಕೆ ತೆರಳಬೇಕಾಯಿತು. ಇದರಿಂದ ಅಮೂಲ್ಯವಾದ ಸಮಯ ನಷ್ಟವಾಗಿತ್ತು. ಕುಂದಾಪುರದಿಂದ ಗಂಗೊಳ್ಳಿಗೆ ನೇರ ಸಂಪರ್ಕ ಸೇತುವೆ ನಿರ್ಮಾಣಕ್ಕೆ ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಇತ್ತೀಚೆಗೆ ಈ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆಯೇ ಗಂಗೊಳ್ಳಿಯಲ್ಲಿ ದುರ್ಘಟನೆಯೊಂದು ನಡೆದಿದ್ದು, ಸಂಪರ್ಕ ಸೇತುವೆಯಿದ್ದರೆ ಇಂತಹ ಭಾರೀ ಪ್ರಮಾಣದ ಅನಾಹುತ ನಡೆಯುತ್ತಿರಲಿಲ್ಲ ಎಂಬುದು ಮೀನುಗಾರರು ಹಾಗೂ ನಾಗರಿಕರ ಅಭಿಪ್ರಾಯ. ಅಗ್ನಿಶಾಮಕ ಹೊರ ಠಾಣೆ ಮಾಡಿದರೆ ಇಂತಹ ಘಟನೆಗಳನ್ನು ತಡೆಯಲು ಸಾಧ್ಯ ಎಂದು ಸ್ಥಳಕ್ಕಾಗಮಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳ ಬಳಿ ಮೀನುಗಾರರು ಅಹವಾಲು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X