Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವದ ಅತಿದೊಡ್ಡ ಕೊಡೆ ಮಕ್ಕಾದ...

ವಿಶ್ವದ ಅತಿದೊಡ್ಡ ಕೊಡೆ ಮಕ್ಕಾದ ಹರಮ್‌ನಲ್ಲಿ ಜೋಡಣೆ

ವಾರ್ತಾಭಾರತಿವಾರ್ತಾಭಾರತಿ15 March 2016 9:11 AM IST
share
ವಿಶ್ವದ ಅತಿದೊಡ್ಡ ಕೊಡೆ ಮಕ್ಕಾದ ಹರಮ್‌ನಲ್ಲಿ ಜೋಡಣೆ

ಮಕ್ಕಾ, ಮಾ.15: ವಿಶ್ವದ ಅತಿದೊಡ್ಡ ಮಡಚಬಹುದಾದ ಕೊಡೆಯನ್ನು ಅಳವಡಿಸುವ ಕಾರ್ಯ ಉತ್ತರ ಕಂಟ್ರಿಯಾರ್ಡ್‌ನ ಮಕ್ಕಾದ ಪವಿತ್ರ ಮಸೀದಿಯಲ್ಲಿ ಆರಂಭವಾಗಿದೆ.

ಎಂಟು ಹೈಟೆಕ್ ದೈತ್ಯ ಕೊಡೆಗಳು ಹಾಗೂ 54 ಪುಟ್ಟ ಕೊಡೆಗಳನ್ನು ಮುಂದಿನ ಆರು ತಿಂಗಳಲ್ಲಿ ಅಳವಡಿಸುವ ಕಾರ್ಯಕ್ಕೆ ಇದೀಗ ಚಾಲನೆ ಸಿಕ್ಕಿದೆ.

ಜರ್ಮನಿಯಲ್ಲಿ ತಯಾರಾದ ಈ ದೈತ್ಯ ಕೊಡೆಗಳಲ್ಲಿ ಬೃಹತ್ ಗಡಿಯಾರ, ಯಾತ್ರಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸ್ಕ್ರೀನ್, ಹವಾನಿಯಂತ್ರಣ ಯಂತ್ರ ಹಾಗೂ ಕಣ್ಗಾವಲು ಕ್ಯಾಮೆರಾ ಇರುತ್ತದೆ. ಪ್ರತಿ ಕೊಡೆಗಳು 45 ಮೀಟರ್ ಎತ್ತರವಿದ್ದು, 16 ಟನ್ ತೂಕವಿದೆ. ಈ ಕೊಡೆ ತೆರೆದಾಗ 2400 ಚದರ ಮೀಟರ್ ಪ್ರದೇಶಕ್ಕೆ ನೆರಳು ನೀಡಲಿದೆ.


ಈ ಎಲೆಕ್ಟ್ರಾನಿಕ್ ಕಾರ್ಯಾಚರಣೆ ವ್ಯವಸ್ಥೆಯನ್ನು ಅಳವಡಿಸುವ ಕಾರ್ಯದಲ್ಲಿ ಜರ್ಮನಿಯಿಂದ ಆಗಮಿಸಿದ 25 ಮಂದಿ ಎಂಜಿನಿಯರ್‌ಗಳು, ವಿಶೇಷ ತಂತ್ರಜ್ಞರು ಹಾಗೂ ಸುರಕ್ಷಾ ತಜ್ಞರು ಮೇಲುಸ್ತುವಾರಿ ವಹಿಸಿದ್ದಾರೆ. ಇದಕ್ಕೆ ಪೂರಕವಾಗಿ 54 ಸಣ್ಣ ಕೊಡೆಗಳನ್ನು ಈ ಪ್ರದೇಶದಲ್ಲಿ ಅಳವಡಿಸಲು ನಿರ್ಧರಿಸಲಾಗಿದ್ದು, ಒಟ್ಟು 19200 ಚದರ ಮೀಟರ್ ಪ್ರದೇಶಕ್ಕೆ ನೆರಳಿನ ವ್ಯವಸ್ಥೆಯಾಗಲಿದೆ. ಇದರ ಜತೆಗೆ ಆರಾಧಕರಿಗೆ ವಿಶ್ರಾಂತಿಗಾಗಿ 122 ಬೆಂಚುಗಳನ್ನು ಅಳವಡಿಸುವ ಹಾಗೂ ಸೇವಾ ಕೊಠಡಿಗಳನ್ನೂ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ.


ಕಿಂಗ್ ಫಹ್ದ್ ವಿಸ್ತರಣಾ ಪ್ರದೇಶದಿಂದ ಕಿಂಗ್ ಅಬ್ದುಲ್ಲಾ ವಿಸ್ತರಣಾ ಪ್ರದೇಶದವರೆಗೆ ಹಬ್ಬಿರುವ ಇಡೀ ಉತ್ತರ ಪ್ಲಾಝಾಗೆ ನೆರಳಿನ ವ್ಯವಸ್ಥೆಯಾಗಲಿದೆ. ಇದು ಪೂರ್ಣಗೊಂಡ ಬಳಿಕ ಸುಮಾರು ನಾಲ್ಕು ಲಕ್ಷ ಯಾತ್ರಾರ್ಥಿಗಳಿಗೆ ಇಲ್ಲಿ ನೆರಳಿನ ವ್ಯವಸ್ಥೆಯಾದಂತಾಗುತ್ತದೆ.


ಈ ಎರಡು ಪವಿತ್ರ ಮಸೀದಿಗಳ ವ್ಯವಹಾರ ಹೊಣೆ ಹೊತ್ತಿರುವ ಜನರಲ್ ಪ್ರೆಸಿಡೆನ್ಸಿ, ಯೋಜನೆಯ ಮೇಲುಸ್ತುವಾರಿ ವಹಿಸಿದೆ. ಶಿಕ್ಷಣ ಸಚಿವಾಲಯದ ವಿಶೇಷ ತಜ್ಞರು ಹಾಗೂ ಗುತ್ತಿಗೆ ಏಜೆನ್ಸಿಯ ತಜ್ಞರು, ಇಸ್ಲಾಂ ಧರ್ಮೀಯರ ಪವಿತ್ರ ಮಸೀದಿ ವಿಸ್ತರಣೆ ಕಾರ್ಯದಲ್ಲಿ ಶ್ರಮಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X