Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಪುರಾವೆ’ ಸರಿ ಇಲ್ಲದಿದ್ದರೆ ವೀಸಾ...

‘ಪುರಾವೆ’ ಸರಿ ಇಲ್ಲದಿದ್ದರೆ ವೀಸಾ ಅರ್ಜಿಯೇ ವಜಾ

ಟ್ರಂಪ್ ಅಮೆರಿಕದ ವೀಸಾ ನೀತಿ ಇನ್ನಷ್ಟು ಕಠಿಣ

ವಾರ್ತಾಭಾರತಿವಾರ್ತಾಭಾರತಿ17 July 2018 12:01 AM IST
share
‘ಪುರಾವೆ’ ಸರಿ ಇಲ್ಲದಿದ್ದರೆ ವೀಸಾ ಅರ್ಜಿಯೇ ವಜಾ

ಪುರಾವೆ’ ವಾಶಿಂಗ್ಟನ್, ಜು. 16: ವೀಸಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಿರುವ ಅಮೆರಿಕದ ಟ್ರಂಪ್ ಆಡಳಿತ, ಕೆಲವೊಂದು ನಿರ್ದಿಷ್ಟ ಸನ್ನಿವೇಶಗಳಲ್ಲಿ ವೀಸಾ ಅರ್ಜಿಗಳನ್ನು ತಿರಸ್ಕರಿಸಲು ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರಗಳನ್ನು ನೀಡಿದೆ.

ಅರ್ಜಿದಾರರು ಅಗತ್ಯದ ‘ಆರಂಭಿಕ ಪುರಾವೆ’ಯನ್ನು ಸಲ್ಲಿಸದಿದ್ದರೆ ಅಥವಾ ಕೋರಲಾದ ವೀಸಾಕ್ಕೆ ಅರ್ಹತೆಯನ್ನು ಸಾಬೀತುಪಡಿಸಲು ವಿಫಲರಾದರೆ ಅರ್ಜಿಗಳನ್ನು ತಿರಸ್ಕರಿಸಬಹುದಾಗಿದೆ.

ಸೆಪ್ಟಂಬರ್ 11ರಿಂದ ಜಾರಿಗೆ ಬರಲಿರುವ ನೂತನ ನಿಯಮವು ಎಚ್-1ಬಿ ಉದ್ಯೋಗಿಗಳನ್ನು ಪ್ರಾಯೋಜಿಸುವ ಕಂಪೆನಿಗಳ ಮೇಲೆ ಪರಿಣಾಮ ಬೀರುತ್ತದೆ.

ಹೆಚ್ಚಿನ ದಾಖಲೆಗಳನ್ನು ಸಲ್ಲಿಸಲು ಅಥವಾ ಕೋರಲಾದ ವೀಸಾಕ್ಕೆ ಅರ್ಹತೆಯನ್ನು ಸಾಬೀತುಪಡಿಸುವ ವಿವರಣೆಗಳನ್ನು ನೀಡಲು ಕಂಪೆನಿಗಳಿಗೆ ಎರಡನೇ ಅವಕಾಶ ಲಭಿಸುವ ಸಾಧ್ಯತೆ ಕಡಿಮೆ.

ಕೆಲವು ಪ್ರಕರಣಗಳಲ್ಲಿ, ವೀಸಾ ಅರ್ಜಿಯ ಸಾರಾಸಗಟು ತಿರಸ್ಕಾರ (ಉದಾಹರಣೆಗೆ; ಎಚ್-1ಬಿ ವೀಸಾ ವಿಸ್ತರಣೆ ಕೋರುವ ಅರ್ಜಿ)ವು ಉದ್ಯೋಗಿಯ ಗಡಿಪಾರಿಗೂ ಕಾರಣವಾಗಬಹುದು.

 ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆ (ಯುಎಸ್‌ಸಿಐಎಸ್)ಯು ನೂತನ ನೀತಿಯನ್ನು ಜುಲೈ 13ರಂದು ಘೋಷಿಸಿದೆ.

ವಿವರಣೆಯಲ್ಲಿ ಗೊಂದಲ

 ‘‘ಮೊದಲು, ಅರ್ಜಿದಾರನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ಒಂದು ಅವಕಾಶ ಕೊಡದೆ ಅವರ ವೀಸಾ ಅರ್ಜಿಯನ್ನು ತಿರಸ್ಕರಿಸಲು ಅಧಿಕಾರಿಗಳಿಗೆ ಅಧಿಕಾರವಿರಲಿಲ್ಲ. ಈಗ ಯಾವುದೇ ವಿಚಾರಣೆಯಿಲ್ಲದೆ ವೀಸಾ ಅರ್ಜಿಗಳನ್ನು ತಿರಸ್ಕರಿಸುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ. ಪುರಾವೆಗಳಿಗೆ ಕೋರಿಕೆ ಸಲ್ಲಿಸದೆ ವೀಸಾ ಅರ್ಜಿಗಳನ್ನು ತಿರಸ್ಕರಿಸುವ ಅಧಿಕಾರವನ್ನು ಪರಿಷ್ಕೃತ ನೀತಿಯು ಅಧಿಕಾರಿಗಳಿಗೆ ನೀಡುತ್ತದೆ. ಆದರೆ, ಅಗತ್ಯ ‘ಆರಂಭಿಕ ಪುರಾವೆ’ಗಳನ್ನು ಅರ್ಜಿದಾರ ಸಲ್ಲಿಸದಿದ್ದರೆ ಮಾತ್ರ ಹೀಗೆ ಮಾಡಬಹುದಾಗಿದೆ. ಆದರೆ, ‘ಆರಂಭಿಕ ಪುರಾವೆ’ಗೆ ಯಾವ ವಿವರಣೆ ನೀಡಲಾಗುತ್ತದೆ ಎನ್ನುವುದು ಸ್ಪಷ್ಟವಿಲ್ಲ’’ ಎಂದು ವಲಸೆ ಕಾನೂನುಗಳಲ್ಲಿ ಪರಿಣತಿ ಹೊಂದಿರುವ ಜಾಗತಿಕ ಸಂಸ್ಥೆ ‘ಫ್ರಾಗೊಮನ್’ ಹೇಳುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X