ಫೆಲೆಸ್ತೀನ್ ನಿರಾಶ್ರಿತರ ಸಂಸ್ಥೆಗೆ ದೇಣಿಗೆ ಹೆಚ್ಚಿಸಿ: ಭಾರತ
ವಿಶ್ವಸಂಸ್ಥೆ, ನ. 13: ವಿಶ್ವಸಂಸ್ಥೆಯ ಫೆಲೆಸ್ತೀನ್ ನಿರಾಶ್ರಿತರ ಸಂಸ್ಥೆಗೆ ನೀಡುತ್ತಿರುವ ದೇಣಿಗೆಗಳನ್ನು ಹೆಚ್ಚಿಸುವಂತೆ ಭಾರತ ಜಾಗತಿಕ ಸಮುದಾಯಕ್ಕೆ ಕರೆ ನೀಡಿದೆ.
ಈ ನೆರವು ಫೆಲೆಸ್ತೀನ್ ನಿರಾಶ್ರಿತರಿಗೆ ಬೆಂಬಲ ಸೂಚಿಸುವ ಪ್ರಾಯೋಗಿಕ ವಿಧಾನ ಎಂಬುದಾಗಿ ವಿಶ್ವಸಂಸ್ಥೆಯ ಭಾರತೀಯ ನಿಯೋಗದ ಪ್ರಥಮ ಕಾರ್ಯದರ್ಶಿ ಮಹೇಶ್ ಕುಮಾರ್ ಸೋಮವಾರ ಹೇಳಿದ್ದಾರೆ.
ಅವರು ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾಮಗಾರಿ ಸಂಸ್ಥೆಯ ಕುರಿತ ವಿಶ್ವಸಂಸ್ಥೆ ಮಹಾಧಿವೇಶನದ ನಾಲ್ಕನೇ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು.
Next Story