Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 140 ‘ತಪ್ಪು, ಮಾನಹಾನಿಕರ’ ಸಂಗತಿಗಳನ್ನು...

140 ‘ತಪ್ಪು, ಮಾನಹಾನಿಕರ’ ಸಂಗತಿಗಳನ್ನು ವರದಿ ಮಾಡಬೇಡಿ: ಪತ್ರಕರ್ತರಿಗೆ ವಿಕಿಲೀಕ್ಸ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jan 2019 10:26 PM IST
share
140 ‘ತಪ್ಪು, ಮಾನಹಾನಿಕರ’ ಸಂಗತಿಗಳನ್ನು ವರದಿ ಮಾಡಬೇಡಿ: ಪತ್ರಕರ್ತರಿಗೆ ವಿಕಿಲೀಕ್ಸ್ ಸೂಚನೆ

ಲಂಡನ್, ಜ. 7: ತನ್ನ ಸ್ಥಾಪಕ ಜೂಲಿಯನ್ ಅಸಾಂಜ್ ಕುರಿತ 140 ವಿವಿಧ ‘ತಪ್ಪು ಮತ್ತು ಮಾನಹಾನಿಕರ’ ಸಂಗತಿಗಳನ್ನು ವರದಿ ಮಾಡದಂತೆ ಸರಕಾರಗಳ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುವ ವೆಬ್‌ಸೈಟ್ ‘ವಿಕಿಲೀಕ್ಸ್’, ಪತ್ರಕರ್ತರನ್ನು ರವಿವಾರ ಕೋರಿದೆ.

ಅಸಾಂಜ್ ಲಂಡನ್‌ನಲ್ಲಿರುವ ಇಕ್ವೆಡಾರ್ ರಾಯಭಾರ ಕಚೇರಿಯಲ್ಲಿ 2012 ಜೂನ್‌ನಿಂದ ಅಡಗಿಕೊಂಡಿದ್ದಾರೆ. ಸ್ವೀಡನ್‌ನಲ್ಲಿ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಆಕ್ರಮಣ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಬಂಧನದಿಂದ ಪಾರಾಗಲು ಅವರು ರಾಯಭಾರ ಕಚೇರಿಯಲ್ಲಿ ಆಶ್ರಯ ಪಡೆದಿದ್ದಾರೆ.

ರಾಯಭಾರ ಕಚೇರಿಯಿಂದ ಹೊರಬಂದರೆ, ಬ್ರಿಟನ್ ತನ್ನನ್ನು ಬಂಧಿಸಿ ಅಮೆರಿಕಕ್ಕೆ ಗಡಿಪಾರು ಮಾಡಬಹುದು ಎಂಬ ಭೀತಿಯನ್ನು ಅವರು ಹೊಂದಿದ್ದಾರೆ.

ಅಮೆರಿಕವು ತನ್ನ ಮಿತ್ರದೇಶಗಳೂ ಸೇರಿದಂತೆ ಜಗತ್ತಿನ ದೇಶಗಳ ವಿರುದ್ಧ ಬೇಹುಗಾರಿಕೆ ನಡೆಸುತ್ತಿರುವುದಕ್ಕೆ ಸಂಬಂಧಿಸಿದ ಸರಕಾರಿ ಮಾಹಿತಿಗಳನ್ನು ಸೋರಿಕೆ ಮಾಡುವ ಮೂಲಕ ಅಸಾಂಜ್ ಅಮೆರಿಕದ ಕೆಂಗಣ್ಣಿಗೆ ಗುರಿಯಾಗಿರುವುದನ್ನು ಸ್ಮರಿಸಬಹುದಾಗಿದೆ.

ಅಸಾಂಜ್ ಬಗ್ಗೆ ತಪ್ಪು ಮಾಹಿತಿ ಹರಡುವ ವಾತಾವರಣ

ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡಲು ವಿಕಿಲೀಕ್ಸ್‌ಗೆ ಪ್ರೇರಣೆ ನೀಡಿದ ಅಂಶ ಯಾವುದು ಎನ್ನುವುದು ತಕ್ಷಣಕ್ಕೆ ಗೊತ್ತಾಗಿಲ್ಲವಾದರೂ, ಅಸಾಂಜ್ ಬಗ್ಗೆ ತಪ್ಪು ವರದಿಯನ್ನು ಪ್ರಕಟಿಸಿದೆ ಎನ್ನಲಾದ ಬ್ರಿಟನ್‌ನ ‘ಗಾರ್ಡಿಯನ್’ ಪತ್ರಿಕೆಯನ್ನು ಅದು ಮುಖ್ಯವಾಗಿ ಗುರಿಯಾಗಿಸಿದೆ.

‘‘ವಿಕಿಲೀಕ್ಸ್ ಮತ್ತು ಜೂಲಿಯನ್ ಅಸಾಂಜ್ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವ ವಾತಾವರಣವೊಂದು ಸೃಷ್ಟಿಯಾಗಿದೆ. ಅವರ ಬಗ್ಗೆ ಉದ್ದೇಶಪೂರ್ವಕವಾಗಿ ಕಪೋಲಕಲ್ಪಿತ ಸಂಗತಿಗಳನ್ನು ದೊಡ್ಡ ಹಾಗೂ ‘ಪ್ರತಿಷ್ಠಿತ’ ಮಾಧ್ಯಮಗಳಲ್ಲಿ ಹರಡಲಾಗುತ್ತಿದೆ’’ ಎಂದು ಮಾಧ್ಯಮಗಳಿಗೆ ಕಳುಹಿಸಿರುವ ಇಮೇಲ್‌ನಲ್ಲಿ ವಿಕಿಲೀಕ್ಸ್ ಹೇಳಿದೆ. ‘‘ಇದು ಗುಪ್ತ ಕಾನೂನು ಸಂವಹನ. ಪ್ರಕಟನೆಗಾಗಿ ಅಲ್ಲ’’ ಎಂಬುದಾಗಿಯೂ ಇಮೇಲ್‌ನಲ್ಲಿ ಸೂಚಿಸಲಾಗಿದೆ.

5,000 ಪದಗಳ ಇಮೇಲ್‌ನಲ್ಲಿ ವಿಕಿಲೀಕ್ಸ್ 140 ಹೇಳಿಕೆಗಳನ್ನು ಪ್ರಸ್ತಾಪಿಸಿದ್ದು, ಅವುಗಳು ತಪ್ಪು ಹಾಗೂ ಮಾನಹಾನಿಕರ ಎಂದು ವಿಕಿಲೀಕ್ಸ್ ಹೇಳಿದೆ. ‘ಅಸಾಂಜ್ ಯಾವತ್ತೂ ಯಾವುದೇ ಗುಪ್ತಚರ ಸಂಸ್ಥೆಯ ಏಜಂಟ್ ಅಥವಾ ಅಧಿಕಾರಿ ಆಗಿರಲಿಲ್ಲ’ ಎನ್ನುವುದು ಈ ಹೇಳಿಕೆಗಳ ಪೈಕಿ ಒಂದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X