Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಮೋಚನೆಗಾಗಿ ತಾಯಿ- ಮಗನ ಮ್ಯಾರಥಾನ್ !

ವಿಮೋಚನೆಗಾಗಿ ತಾಯಿ- ಮಗನ ಮ್ಯಾರಥಾನ್ !

ವಾರ್ತಾಭಾರತಿವಾರ್ತಾಭಾರತಿ24 Feb 2019 9:55 AM IST
share
ವಿಮೋಚನೆಗಾಗಿ ತಾಯಿ- ಮಗನ ಮ್ಯಾರಥಾನ್ !

ಸಿರಿಯಾ, ಫೆ. 24: ಇದು ಪುಟ್ಟ ಮಗನನ್ನು ಕಂಕುಳಲ್ಲಿ ಕಟ್ಟಿಕೊಂಡ ಮಹಿಳೆಯ 53 ಗಂಟೆಗಳ ಸತತ ಮ್ಯಾರಥಾನ್ ನಡಿಗೆ. ವಿಮೋಚನೆಗಾಗಿ ಈ ಹರಸಾಹಸ.

ಇಂಥ ಸಾಹಸಕ್ಕೆ ಮಹಿಳೆ ಕೈಹಾಕಿದ್ದು, ಇದೇ ಮೊದಲಲ್ಲ; ಐದನೇ ಬಾರಿ. ಇಸ್ಲಾಮಿಕ್ ಸ್ಟೇಟ್‌ನಿಂದ ತಪ್ಪಿಸಿಕೊಳ್ಳುವ ಹಿಂದಿನ ನಾಲ್ಕು ಪ್ರಯತ್ನಗಳು ವಿಫಲವಾಗಿದ್ದರೂ, ಈ ದಿಟ್ಟೆ ಪ್ರಯತ್ನ ಬಿಟ್ಟಿಲ್ಲ. ಆದರೆ ಉಗ್ರಗಾಮಿಗಳ ಕೈಗೆ ಸಿಕ್ಕಿದರೆ ಸ್ಥಳದಲ್ಲೇ ಗುಂಡಿಟ್ಟು ಸಾಯಿಸುತ್ತಾರೆ ಎಂಬ ವಾಸ್ತವದ ಅರಿವಿದ್ದರೂ, ಇಂಥ ಸಾಹಸಕ್ಕೆ ಕೈಹಾಕಿದ್ದಾರೆ. !

ಕಡುಗತ್ತಲಲ್ಲಿ ಹೆಣಗಳನ್ನು ದಾಟಿಕೊಂಡು ಬಂದಿದ್ದಾರೆ. ದಣಿವಿನಿಂದ ಕಾಲುಗಳು ಸೋತಾಗ ದೂಳಿನ ಮಾರ್ಗದಲ್ಲೇ ನಿದ್ದೆ ಹೋಗಿದ್ದಾರೆ. ಈ ಮಧ್ಯೆ ದಾರಿಯುದ್ದಕ್ಕೂ ಅಳುತ್ತಿರುವ ಐದು ವರ್ಷದ ಪುಟ್ಟ ಕಂದನನ್ನು ಫರ್ಯಾಲ್ ಸಂತೈಸಿದ್ದಾರೆ. ಅಜ್ಜ- ಅಜ್ಜಿ ನಿನಗಾಗಿ ಕಾಯುತ್ತಿದ್ದಾರೆ ಎಂದು ಆತನನ್ನು ರಮಿಸಿದ್ದಾಳೆ. ಇಸ್ಲಾಮಿಕ್ ಸ್ಟೇಟ್‌ನಲ್ಲಿ ನಾಲ್ಕು ವರ್ಷಗಳ ಜೈಲುವಾಸದಿಂದ ಹೊರಬಂದು ಅಂತಿಮವಾಗಿ ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ ಪುಟ್ಟ ಬಾಲಕ ತಾಯಿಯ ಮಾತನ್ನು ನಂಬುವ ಸ್ಥಿತಿಯಲ್ಲಿಲ್ಲ.

"ಆತನಿಗೆ ತೀರಾ ಭಯವಾಗಿತ್ತು. ನಾನು ಆತನ ಕೈ ಹಿಡಿದುಕೊಂಡು ನಡೆಯುತ್ತಲೇ ಇದ್ದೆ" ಎಂದು ತನ್ನ ಸಾಹಸಯಾತ್ರೆಯ ಅನುಭವವನ್ನು ಫರ್ಯಾಲ್ ಬಿಚ್ಚಿಡುತ್ತಾರೆ.

ಇರಾಕ್‌ನ ಯಝೀದಿ ಅಲ್ಪಸಂಖ್ಯಾತದ ಸಮುದಾಯಕ್ಕೆ ಸೇರಿದ ಇವರು ಖುರ್ದಿಷ್ ಭಾಷೆ ಮಾತನಾಡುತ್ತಾರೆ. ಭಯಾನಕ "ಜನಾಂಗೀಯ ಹತ್ಯೆ"ಯಿಂದ ತಪ್ಪಿಸಿಕೊಂಡು ಬಂದಿದ್ದು, 2014ರ ಆಗಸ್ಟ್‌ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಸಾವಿರಾರು ಮಂದಿ ಯಝೀದಿಗಳನ್ನು ಒಂದೇ ದಿನ ಅಪಹರಿಸಿದ್ದರು. ಪುರುಷನ್ನು ನಿರ್ದಯವಾಗಿ ಹತ್ಯೆ ಮಾಡಿ, ಸಾಮೂಹಿಕವಾಗಿ ಹೂತುಹಾಕಿ, ಮಹಿಳೆಯರನ್ನು ಲೈಂಗಿಕ ದಾಸ್ಯಕ್ಕೆ ತಳ್ಳಿದ್ದರು ಎಂದು ವರದಿಯಾಗಿದ್ದು, ಇಂಥ ಮೃತ್ಯುಕೂಪದಿಂದ ಈ ತಾಯಿ- ಮಗ ತಪ್ಪಿಸಿಕೊಂಡಿದ್ದಾರೆ.

ಬಂಧನದ ಅವಧಿಯಲ್ಲಿ ಫರ್ಯಾಲ್ ಆರು ಮಾಲೀಕರ ಕೈಕೆಳಗೆ ದುಡಿದಿದ್ದಾರೆ. ಆ ರಾಕ್ಷಸರು ನಮ್ಮನ್ನು ಪ್ರಾಣಿಗಳಂತೆ ನೋಡುತ್ತಿದ್ದರು ಎಂದು ಭಯಾನಕ ಅನುಭವ ಬಿಚ್ಚಿಡುತ್ತಾರೆ ಫರ್ಯಾಲ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X