ಬಾಂಗ್ಲಾ: ಪ್ರತಿಭಟನಕಾರರ ಮೇಲೆ ಗೋಲಿಬಾರ್; 4 ಸಾವು
ಢಾಕಾ, ಅ. 22: ಪ್ರವಾದಿ ಮುಹಮ್ಮದ್ ವಿರುದ್ಧ ನಿಂದನಾತ್ಮಕ ಬರಹಗಳನ್ನು ಫೇಸ್ಬುಕ್ನಲ್ಲಿ ಹಾಕಿದ್ದಾರೆನ್ನಲಾದ ವ್ಯಕ್ತಿಯನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಭಾರೀ ಸಂಖ್ಯೆಯ ಜನರನ್ನು ನಿಯಂತ್ರಿಸಲು ರವಿವಾರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಹಾಗೂ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಭೋಲಾ ದ್ವೀಪದಲ್ಲಿ ವಾಸಿಸುವ ಹಿಂದೂ ವ್ಯಕ್ತಿಯನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ರವಿವಾರ 20,000ಕ್ಕೂ ಅಧಿಕ ಮಂದಿ ಪ್ರತಿಭಟನೆ ನಡೆಸಿದರು. ಈ ವ್ಯಕ್ತಿಯು ಫೇಸ್ಬುಕ್ನಲ್ಲಿ ಹಾಕಿದ ಸಂದೇಶವು ಪ್ರವಾದಿ ಮುಹಮ್ಮದ್ರನ್ನು ನಿಂದಿಸುತ್ತದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.
ಫೇಸ್ಬುಕ್ನಲ್ಲಿ ನಿಂದನಾತ್ಮಕ ಬರಹ ಹಾಕಿದ್ದಾರೆನ್ನಲಾದ ವ್ಯಕ್ತಿಯ ವಿರುದ್ಧ ಪೊಲೀಸರು ಧಾರ್ಮಿಕ ಉದ್ವಿಗ್ನತೆಯನ್ನು ಪ್ರಚೋದಿಸಿದ ಆರೋಪವನ್ನು ಹೊರಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಸೋಮವಾರವೂ ಸಾವಿರಾರು ಮಂದಿ ದೇಶಾದ್ಯಂತ ಪ್ರತಿಭಟನೆ ನಡೆಸಿದರು.
Next Story