Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 'ನೀವೊಬ್ಬ ಮೂರ್ಖ' ಎಂದು ಆಕ್ರೋಶ...

'ನೀವೊಬ್ಬ ಮೂರ್ಖ' ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು: ಆಸ್ಟ್ರೇಲಿಯಾ ಪ್ರಧಾನಿ ಮಾಡಿದ್ದೇನು ಗೊತ್ತಾ?

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ3 Jan 2020 5:19 PM IST
share
ನೀವೊಬ್ಬ ಮೂರ್ಖ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು: ಆಸ್ಟ್ರೇಲಿಯಾ ಪ್ರಧಾನಿ ಮಾಡಿದ್ದೇನು ಗೊತ್ತಾ?

ಮೆಲ್ಬರ್ನ್, ಜ. 3: ಕಾಡ್ಗಿಚ್ಚಿನಿಂದ ಸುಟ್ಟು ಹೋದ ಪಟ್ಟಣವೊಂದಕ್ಕೆ ಗುರುವಾರ ಭೇಟಿ ನೀಡಿದ ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮೊರಿಸನ್ ಜನರ ಆಕ್ರೋಶವನ್ನು ಎದುರಿಸಬೇಕಾಯಿತು.

ಕೆಲವು ತಿಂಗಳಿಂದ ಆಸ್ಟ್ರೇಲಿಯದಾದ್ಯಂತ ದಾಂಧಲೆಗೈಯುತ್ತಿರುವ ಕಾಡ್ಗಿಚ್ಚಿಗೆ ಈಗಾಗಲೇ ಕನಿಷ್ಠ 18 ಮಂದಿ ಬಲಿಯಾಗಿದ್ದಾರೆ.

ನ್ಯೂಸೌತ್‌ವೇಲ್ಸ್ ರಾಜ್ಯದಲ್ಲಿರುವ ಕೊಬಾರ್ಗೊ ಪಟ್ಟಣಕ್ಕೆ ಪ್ರಧಾನಿ ಭೇಟಿ ನೀಡಿದಾಗ ಅವರ ಕೈಕುಲುಕಲು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ನಿರಾಕರಿಸಿದ ಪ್ರಸಂಗವೂ ನಡೆಯಿತು. ಅಗ್ನಿಶಾಮಕನ ಕೈಕುಲುಕಲು ಮೊರಿಸನ್ ಯತ್ನಿಸಿದಾಗ ಆ ವ್ಯಕ್ತಿಯು ಎದ್ದು ದೂರ ನಡೆದುದನ್ನು ವೀಡಿಯೊ ತುಣುಕೊಂದು ತೋರಿಸಿದೆ. ಇದಕ್ಕಾಗಿ ಪ್ರಧಾನಿ ಕ್ಷಮೆಯನ್ನೂ ಕೋರಿದರು.

ಆ ಅಗ್ನಿಶಾಮಕನು ಇತರರ ಮನೆಗಳನ್ನು ರಕ್ಷಿಸುತ್ತಿದ್ದಾಗ ಆತನ ಮನೆಯು ಕಾಡ್ಗಿಚ್ಚಿನಲ್ಲಿ ಸುಟ್ಟು ಹೋಗಿತ್ತು ಎಂದು ಸ್ಥಳೀಯ ಅಗ್ನಿಶಾಮಕ ಅಧಿಕಾರಿಯೊಬ್ಬರು ಬಳಿಕ ವಿವರಿಸಿದ್ದಾರೆ.

ಅದೇ ವೇಳೆ, ಹೊಸ ವರ್ಷದ ಮುನ್ನಾ ದಿನದಂದು ಕಾಡ್ಗಿಚ್ಚು ದಾಂಧಲೆಗೈಯುತ್ತಾ ಹೊಸ ಹೊಸ ಸ್ಥಳಗಳನ್ನು ಆಪೋಷಣ ತೆಗೆದುಕೊಳ್ಳುತ್ತಿದ್ದ ವೇಳೆ, ತನ್ನ ಅಧಿಕೃತ ನಿವಾಸ ಕಿರಿಬಿಲ್ಲಿ ಹೌಸ್‌ನಿಂದ ಸಿಡ್ನಿ ಹಾರ್ಬರ್‌ನ ಆಕಾಶದಲ್ಲಿ ಸುಡುಮದ್ದು ಪ್ರದರ್ಶನವನ್ನು ವೀಕ್ಷಿಸಿರುವುದಕ್ಕಾಗಿ ಇನ್ನೋರ್ವ ವ್ಯಕ್ತಿಯು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡರು.

 ‘‘ಇಲ್ಲಿ ನಿಮಗೆ ಯಾರ ಮತವೂ ಬೀಳುವುದಿಲ್ಲ. ನೀವೊಬ್ಬ ಮೂರ್ಖ’’ ಎಂದು ಆ ವ್ಯಕ್ತಿ ಹೇಳಿದರು.

ವೈಯಕ್ತಿಕವಾಗಿ ತೆಗೆದುಕೊಂಡಿಲ್ಲ; ಅದು ಜನರ ಹತಾಶೆಯಷ್ಟೆ: ಮೊರಿಸನ್

ನನ್ನ ವಿರುದ್ಧದ ವರ್ತನೆ ಮತ್ತು ವಾಗ್ದಾಳಿಗಳನ್ನು ನಾನು ವೈಯಕ್ತಿಕವಾಗಿ ತೆಗೆದುಕೊಂಡಿಲ್ಲ ಎಂದು ಮೊರಿಸನ್ ಶುಕ್ರವಾರ ಹೇಳಿದ್ದಾರೆ.

‘‘ಅವುಗಳು ಈ ನೈಸರ್ಗಿಕ ದುರಂತಗಳ ಭೀಕರತೆಯ ಬಗ್ಗೆ ಜನರಲ್ಲಿ ತುಂಬಿರುವ ಹತಾಶೆ, ನೋವು, ನಷ್ಟ ಮತ್ತು ಕೋಪಗಳ ಪ್ರತಿಫಲನ ಎಂಬುದಾಗಿ ನಾನು ಭಾವಿಸಿದ್ದೇನೆ’’ ಎಂದು ಪೂರ್ವ ವಿಕ್ಟೋರಿಯ ರಾಜ್ಯದ ಬೇರ್ನ್ಸ್‌ಡೇಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಸ್ಟ್ರೇಲಿಯ ಪ್ರಧಾನಿ ಹೇಳಿದರು.

‘‘ನಾನು ಅದನ್ನು ಅರ್ಥ ಮಾಡಿಕೊಂಡಿದ್ದೇನೆ. ಜನರಿಗೆ ಅಗತ್ಯವಾಗಿರುವ ಸಮಾಧಾನ ಮತ್ತು ಬೆಂಬಲವನ್ನು ಯಾವುದೆಲ್ಲ ರೀತಿಯಲ್ಲಿ ಕೊಡಲು ಸಾಧ್ಯವೋ ಹಾಗೆ ಕೊಡುತ್ತೇವೆ’’ ಎಂದರು.

ಭಾರತ ಪ್ರವಾಸ ರದ್ದುಪಡಿಸುವ ಬಗ್ಗೆ ಚಿಂತನೆ: ಸ್ಕಾಟ್ ಮೊರಿಸನ್

ಆಸ್ಟ್ರೇಲಿಯದಲ್ಲಿ ಹಬ್ಬುತ್ತಿರುವ ಕಾಡ್ಗಿಚ್ಚು ನಿಯಂತ್ರಣದ ಉಸ್ತುವಾರಿ ನೋಡಿಕೊಳ್ಳುವುದಕ್ಕಾಗಿ ಈ ತಿಂಗಳಿಗೆ ನಿಗದಿಯಾಗಿರುವ ಭಾರತ ಪ್ರವಾಸವನ್ನು ರದ್ದುಪಡಿಸುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಆ ದೇಶದ ಪ್ರಧಾನಿ ಸ್ಕಾಟ್ ಮೊರಿಸನ್ ಶುಕ್ರವಾರ ಹೇಳಿದ್ದಾರೆ.

ಇಂಥ ಪರಿಸ್ಥಿತಿಯಲ್ಲಿ ದೇಶವನ್ನು ಬಿಟ್ಟು ಹೋಗುವುದು ಸರಿಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸ್ಕಾಟ್ ಮೊರಿಸನ್, ‘‘ಈ ಪ್ರವಾಸಕ್ಕೆ ಹೋಗದಿರುವ ಬಗ್ಗೆ ನಾನು ಯೋಚಿಸುತ್ತಿದ್ದೇನೆ’’ ಎಂದರು.

ಜನವರಿ 13ರಿಂದ 16ರವರೆಗೆ ಸ್ಕಾಟ್ ಮೊರಿಸನ್‌ರ ಭಾರತ ಭೇಟಿ ನಿಗದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X