Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆನೋಶ: ಪ್ರತಿಭಟನಕಾರರ ಮೇಲೆ ಗುಂಡು ಓರ್ವ...

ಕೆನೋಶ: ಪ್ರತಿಭಟನಕಾರರ ಮೇಲೆ ಗುಂಡು ಓರ್ವ ಸಾವು, ಇಬ್ಬರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ26 Aug 2020 10:24 PM IST
share
ಕೆನೋಶ: ಪ್ರತಿಭಟನಕಾರರ ಮೇಲೆ ಗುಂಡು ಓರ್ವ ಸಾವು, ಇಬ್ಬರಿಗೆ ಗಾಯ

 ಕೆನೋಶ (ಅಮೆರಿಕ), ಆ. 26: ಇತ್ತೀಚೆಗೆ ಅಮೆರಿಕದ ವಿಸ್ಕೋನ್ಸಿನ್ ರಾಜ್ಯದ ಕೆನೋಶ ನಗರದಲ್ಲಿ ಕರಿಯ ವ್ಯಕ್ತಿಯೊಬ್ಬರ ಬೆನ್ನಿಗೆ ಪೊಲೀಸರು ಮನಬಂದಂತೆ ಗುಂಡು ಹಾರಿಸಿರುವುದನ್ನು ವಿರೋಧಿಸಿ ಕೆನೋಶ ನಗರದಲ್ಲಿ ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ತಂಡವೊಂದು ಗುಂಡಿನ ದಾಳಿ ನಡೆಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಹಾಗೂ ಇಬ್ಬರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ಗುಂಡು ಹಾರಾಟದ ಸದ್ದು ಕೇಳುತ್ತಿರುವಂತೆಯೇ ಜನರು ಕೆನೋಶ ನಗರದ ರಸ್ತೆಗಳಲ್ಲಿ ದಿಕ್ಕಾಪಾಲಾಗಿ ಓಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವೀಡಿಯೊಗಳು ತೋರಿಸಿವೆ. ಗಾಯಗೊಂಡ ಜನರು ರಸ್ತೆಯಲ್ಲಿ ಬಿದ್ದಿರುವುದನ್ನೂ ವೀಡಿಯೊಗಳು ತೋರಿಸಿವೆ.

‘‘ಮೂವರ ಮೇಲೆ ಗುಂಡು ಹಾರಿಸಲಾಗಿದೆ ಹಾಗೂ ಈ ಪೈಕಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ’’ ಎಂದು ಕೆನೋಶ ಕೌಂಟಿಯ ಶೆರಿಫ್ ಡೇವಿಡ್ ಬೆತ್ ತಿಳಿಸಿರುವುದಾಗಿ ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ರವಿವಾರ ಕೆನೋಶದ ಬಿಳಿಯ ಪೊಲೀಸ್ ಅಧಿಕಾರಿಯೊಬ್ಬರು ಜಾಕೋಬ್ ಬ್ಲೇಕ್‌ಗೆ ಏಳು ಬಾರಿ ಗುಂಡು ಹಾರಿಸುವುದನ್ನು ತೋರಿಸುವ ವೀಡಿಯೊವೊಂದನ್ನು ನೋಡಿದ ಬಳಿಕ ಆಕ್ರೋಶಗೊಂಡ ನೂರಾರು ಜನರು, ಪ್ರತಿಭಟನೆಯ ಮೂರನೇ ರಾತ್ರಿಯಾದ ಮಂಗಳವಾರ ಮೆರವಣಿಗೆಯಲ್ಲಿ ತೊಡಗಿದ್ದಾಗ ಗುಂಡು ಹಾರಾಟ ಸಂಭವಿಸಿದೆ.

ಬ್ಲೇಕ್‌ರ ಮೂವರ ಮಕ್ಕಳು ಕಾರಿನಲ್ಲಿದ್ದು, ಅವರು ಕಾರಿಗೆ ಹತ್ತಲು ಯತ್ನಿಸುತ್ತಿದ್ದಾಗ ಪೊಲೀಸರು ಅವರ ಬೆನ್ನಿಗೆ ಗುಂಡು ಹಾರಿಸಿದ್ದರು.

ಭಾರೀ ಶಸ್ತ್ರಸಜ್ಜಿತರಾಗಿದ್ದ ಬಿಳಿಯರ ಒಂದು ಸಣ್ಣ ಗುಂಪು ಮಂಗಳವಾರ ರಾತ್ರಿ ನಗರದಲ್ಲಿತ್ತು. ಪೆಟ್ರೋಲ್ ಪಂಪೊಂದನ್ನು ರಕ್ಷಿಸಲು ನಿಯೋಜಿಸಲ್ಪಟ್ಟಿದ್ದ ಮಾಫಿಯ ತಂಡ ಮತ್ತು ಪ್ರತಿಭಟನಕಾರರ ನಡುವೆ ನಡೆದ ಸಂಘರ್ಷದ ಫಲ ಈ ಗುಂಡು ಹಾರಾಟವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ಇದಕ್ಕೂ ಮೊದಲು, ಪ್ರತಿಭಟನಕಾರರ ಒಂದು ಗುಂಪು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆಯಿತು. ಪ್ರತಿಭಟನಕಾರರು ಪೊಲೀಸರತ್ತ ಪಟಾಕಿಗಳನ್ನು ಎಸೆದರೆ, ಅವರನ್ನು ಚದುರಿಸಲು ಪೊಲೀಸರು ರಬ್ಬರ್ ಗುಂಡುಗಳನ್ನು ಹಾರಿಸಿದರು.

ಬ್ಲೇಕ್ ಸಾವು-ಬದುಕಿನ ಹೋರಾಟದಲ್ಲಿ: ಕುಟುಂಬ

 ವಿಸ್ಕೋನ್ಸಿನ್ ರಾಜ್ಯದ ಕೆನೋಶ ನಗರದಲ್ಲಿ ಪೊಲೀಸರ ಗುಂಡೇಟಿಗೆ ಒಳಗಾಗಿರುವ ಕರಿಯ ವ್ಯಕ್ತಿ ಪಕ್ಷವಾತಕ್ಕೊಳಗಾಗಿದ್ದು, ‘ಸಾವು ಬದುಕಿನ ಹೋರಾಟದಲ್ಲಿದ್ದಾರೆ’ ಎಂದು ಅವರ ಕುಟುಂಬ ಸದಸ್ಯರು ಮತ್ತು ವಕೀಲರು ಮಂಗಳವಾರ ಹೇಳಿದ್ದಾರೆ.

‘‘ಇಬ್ಬರು ಮಹಿಳೆಯರ ನಡುವಿನ ಜಗಳವನ್ನು ನಿಲ್ಲಿಸಲು ಜಾಕೋಬ್ ಬ್ಲೇಕ್ ಯತ್ನಿಸುತ್ತಿದ್ದಾಗ ಅವರತ್ತ 7 ಗುಂಡುಗಳನ್ನು ಹಾರಿಸಲಾಗಿತ್ತು. ಆ ಪೈಕಿ ನಾಲ್ಕು ಗುಂಡುಗಳು ಅವರಿಗೆ ಬಡಿದವು. ಈ ಎಲ್ಲ ಗುಂಡುಗಳನ್ನು ಒಬ್ಬನೇ ಪೊಲೀಸ್ ಅಧಿಕಾರಿ ಹಾರಿಸಿದ್ದಾರೆ. ಅದೂ ಅಲ್ಲದೆ, ಅವರ ಬಳಿ ಆಯುಧವಿದೆ ಎನ್ನುವ ಯಾವುದೇ ಸೂಚನೆಯೂ ಇರಲಿಲ್ಲ’’ ಎಂದು ಬ್ಲೇಕ್ ಕುಟುಂಬದ ಪರವಾಗಿ ವಾದಿಸುತ್ತಿರುವ ನಾಗರಿಕ ಹಕ್ಕುಗಳ ವಕೀಲ ಬೆನ್ ಕ್ರಂಪ್ ಎಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಕ್ರಂಪ್ ಹೇಳಿದರು.

 ‘‘ಅವರು ನನ್ನ ಮಗನ ಮೇಲೆ 7 ಬಾರಿ ಗುಂಡುಗಳನ್ನು ಹಾರಿಸಿದರು! ಅವನಿಗೆ ಮಹತ್ವವೇ ಇಲ್ಲ ಎನ್ನುವಂತೆ’’ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಾಕೋಬ್ ಬ್ಲೇಕ್ ತಂದೆ ಜಾಕೋಬ್ ಬ್ಲೇಕ್ ಸೀನಿಯರ್ ಹೇಳಿದರು. ‘‘ನನ್ನ ಮಗನಿಗೂ ಮಹತ್ವವಿದೆ. ಅವನು ಒಬ್ಬ ಮನುಷ್ಯ ಹಾಗೂ ಅವನಿಗೆ ಮಹತ್ವವಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X