Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಕಾ ಮಾನವಹಕ್ಕು ಪರಿಸ್ಥಿತಿ ಕುರಿತ...

ಲಂಕಾ ಮಾನವಹಕ್ಕು ಪರಿಸ್ಥಿತಿ ಕುರಿತ ವಿಶ್ವಸಂಸ್ಥೆ ವರದಿಯ ಜಾಗರೂಕ ಪರಿಶೀಲನೆ: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ29 Jan 2021 11:41 PM IST
share
ಲಂಕಾ ಮಾನವಹಕ್ಕು ಪರಿಸ್ಥಿತಿ ಕುರಿತ ವಿಶ್ವಸಂಸ್ಥೆ ವರದಿಯ ಜಾಗರೂಕ ಪರಿಶೀಲನೆ: ಅಮೆರಿಕ

ವಾಶಿಂಗ್ಟನ್, ಜ. 29: ಶ್ರೀಲಂಕಾದಲ್ಲಿ ನೆಲೆಸಿರುವ ಮಾನವಹಕ್ಕು ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆ ಸಿದ್ಧಪಡಿಸಿರುವ ವರದಿಯನ್ನು ಜಾಗರೂಕವಾಗಿ ಪರಿಶೀಲಿಸುತ್ತಿರುವುದಾಗಿ ಅಮೆರಿಕ ಹೇಳಿದೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ಶ್ರೀಲಂಕಾದಲ್ಲಿ ಹೆಚ್ಚುತ್ತಿರುವ ಉತ್ತರದಾಯಿತ್ವವಿಲ್ಲದ ಹಿಂಸಾಚಾರ, ಸರಕಾರಿ ಇಲಾಖೆಗಳಲ್ಲಿ ಹೆಚ್ಚುತ್ತಿರುವ ಸೇನಾ ಪ್ರವೇಶ, ಜನಾಂಗೀಯ-ರಾಷ್ಟ್ರೀಯವಾದಿ ಉನ್ಮಾದದ ಹೆಚ್ಚಳ ಮತ್ತು ಮಾನವಹಕ್ಕುಗಳ ಹೋರಾಟಗಾರರು ನಿರಂತರವಾಗಿ ಎದುರಿಸುತ್ತಿರುವ ಬೆದರಿಕೆ ಮುಂತಾದ ಆಘಾತಕಾರಿ ಪ್ರವೃತ್ತಿಗಳನ್ನು ವಿಶ್ವಸಂಸ್ಥೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಶ್ರೀಲಂಕಾದಲ್ಲಿ ಸಂಭವಿಸುತ್ತಿರುವ ಈ ಬೆಳವಣಿಗೆಗಳ ಮೇಲೆ ಅಂತರ್‌ರಾಷ್ಟ್ರೀಯ ಸಮುದಾಯವು ನಿಗಾ ಇಡುವ ಹಾಗೂ ಬಲವಾದ ಪ್ರತಿಬಂಧಕ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.

 ‘‘ಶ್ರೀಲಂಕಾದಲ್ಲಿ ಈಗ ನೆಲೆಸಿರುವ ಪರಿಸ್ಥಿತಿಯು ಗಂಭೀರ ಮಾನವಹಕ್ಕುಗಳ ಉಲ್ಲಂಘನೆಗೆ ಹಾದಿ ಮಾಡಿಕೊಡುವ ನೀತಿಗಳು ಮತ್ತು ಕಾರ್ಯವಿಧಾನಗಳು ಮರಳಲು ಪ್ರಶಸ್ತವಾಗಿದೆ’’ ಎಂದು ವರದಿ ತಿಳಿಸಿದೆ.

‘‘ಶ್ರೀಲಂಕಾದ ಮಾನವಹಕ್ಕು ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಸಿದ್ಧಪಡಿಸಿರುವ ಮಹತ್ವದ ವರದಿಯನ್ನು ನಾವು ಜಾಗರೂಕವಾಗಿ ಪರಿಶೀಲಿಸುತ್ತಿದ್ದೇವೆ’’ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಹೇಳಿದರು.

ಸರಕಾರದಿಂದ ತನಿಖೆ, ವಿಚಾರಣೆಗಳ ಬುಡಮೇಲು: ವಿಶ್ವಸಂಸ್ಥೆ ವರದಿ

ಶ್ರೀಲಂಕಾದಲ್ಲಿನ ಸಶಸ್ತ್ರ ಸಂಘರ್ಷ ಕೊನೆಗೊಂಡ 12 ವರ್ಷಗಳ ಬಳಿಕ, ಗಂಭೀರ ಮಾನವಹಕ್ಕು ಉಲ್ಲಂಘನೆ ಮತ್ತು ದೌರ್ಜನ್ಯಗಳನ್ನು ನಡೆಸಿದವರು ಕಾನೂನಿನ ಭಯವಿಲ್ಲದೆ ಮುಕ್ತವಾಗಿ ಓಡಾಡುತ್ತಿದ್ದಾರೆ ಹಾಗೂ ಇನ್ನಷ್ಟು ದೌರ್ಜನ್ಯಗಳನ್ನು ನಡೆಸುತ್ತಿದ್ದಾರೆ. ಈ ಪ್ರವೃತ್ತಿಯು ದೇಶದಲ್ಲಿ ಈಗ ಸಾಮಾನ್ಯ ಎಂಬಂತಾಗಿದೆ.

   ಮಾನವಹಕ್ಕು ಉಲ್ಲಂಘನೆ ಮತ್ತು ದೌರ್ಜನ್ಯ ಪ್ರಕರಣಗಳ ಬಗ್ಗೆ ನಡೆಯುತ್ತಿರುವ ತನಿಖೆ ಮತ್ತು ವಿಚಾರಣೆಗಳನ್ನು ಬುಡಮೇಲುಗೊಳಿಸುವ ಕೆಲಸವನ್ನು ದ್ವೀಪರಾಷ್ಟ್ರದ ಪ್ರಸಕ್ತ ಸರಕಾರವು ವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿದೆ. ಕೆಲವು ದೌರ್ಜನ್ಯ ಪ್ರಕರಣಗಳಲ್ಲಿ ಈ ಹಿಂದೆ ಏನಾದರೂ ಕಿಂಚಿತ್ ಪ್ರಗತಿ ಆಗಿದ್ದರೂ ಅದನ್ನು ಸರಕಾರ ವಿಫಲಗೊಳಿಸುತ್ತಿದೆ ಎಂಬುದಾಗಿ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯ ವರದಿ ಬೆಟ್ಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X