Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ...

ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ಕಂಡಲ್ಲಿ ಗುಂಡು; 90ಕ್ಕೂ ಅಧಿಕ ಸಾವು

ವಾರ್ತಾಭಾರತಿವಾರ್ತಾಭಾರತಿ27 March 2021 9:25 PM IST
share
ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ಕಂಡಲ್ಲಿ ಗುಂಡು; 90ಕ್ಕೂ ಅಧಿಕ ಸಾವು

ಯಾಂಗನ್ (ಮ್ಯಾನ್ಮಾರ್), ಮಾ. 27: ಮ್ಯಾನ್ಮಾರ್‌ನ ಆಡಳಿತವನ್ನು ಸೇನೆ ವಶಪಡಿಸಿಕೊಂಡಿರುವುದನ್ನು ಪ್ರತಿಭಟಿಸುತ್ತಿರುವ ಜನರ ಮೇಲೆ ದಾಳಿ ನಡೆಸಿರುವ ದೇಶದ ಸೇನೆಯು ಶನಿವಾರ 90ಕ್ಕೂ ಅಧಿಕ ಜನರನ್ನು ಕೊಂದಿದೆ.

ಫೆಬ್ರವರಿ 1ರಂದು ದೇಶದ ಆಡಳಿತವನ್ನು ವಹಿಸಿಕೊಂಡ ಬಳಿಕ ನಡೆದ ಅತಿ ದೊಡ್ಡ ರಕ್ತಪಾತಗಳಲ್ಲಿ ಇದು ಒಂದಾಗಿದೆ.

 ಭೀಕರ ರಕ್ತಪಾತವು ದೇಶದ ಸಶಸ್ತ್ರ ಪಡೆಗಳ ದಿನದಂದು ಸಂಭವಿಸಿದೆ. ಈ ಸಂದರ್ಭದಲ್ಲಿ ರಾಜಧಾನಿ ನೇಪಿಟಾವ್‌ನಲ್ಲಿ ನಡೆದ ಕವಾಯತಿನಲ್ಲಿ ಭಾಗವಹಿಸಿ ಮಾತನಾಡಿದ ಸೇನಾಡಳಿತದ ಮುಖ್ಯಸ್ಥ ಸೀನಿಯರ್ ಜನರಲ್ ಮಿನ್ ಆಂಗ್ ಹಲಯಂಗ್, ಸೇನೆಯು ಜನರನ್ನು ರಕ್ಷಿಸುವುದು ಹಾಗೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುವುದು ಎಂದರು.

ಜನರು ಪ್ರತಿಭಟನೆ ನಡೆಸಿದರೆ ಅವರ ತಲೆ ಮತ್ತು ಬೆನ್ನಿಗೆ ಗುಂಡು ಬೀಳುವ ಅಪಾಯವಿದೆ ಎಂಬುದಾಗಿ ಸರಕಾರಿ ಟೆಲಿವಿಶನ್ ಶುಕ್ರವಾರ ಎಚ್ಚರಿಸಿತ್ತು. ಇದರ ಹೊರತಾಗಿಯೂ ಸೇನಾ ಸರಕಾರವನ್ನು ವಿರೋಧಿಸಿ ಜನರು ಯಾಂಗನ್, ಮಾಂಡಲೇ ಮತ್ತು ಇತರ ನಗರಗಳ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.

ದೇಶಾದ್ಯಂತ ಭದ್ರತಾ ಪಡೆಗಳು 91 ಜನರನ್ನು ಗುಂಡು ಹಾರಿಸಿ ಕೊಂದಿವೆ ಎಂದು ‘ಮ್ಯಾನ್ಮಾರ್ ನೌ’ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ.

ಮಾಂಡಲೇಯಲ್ಲಿ ಕನಿಷ್ಠ 29 ಮಂದಿ ಮೃತಪಟ್ಟಿದ್ದು, ಮೃತಪಟ್ಟವರಲ್ಲಿ ಐದು ವರ್ಷದ ಒಂದು ಮಗುವೂ ಸೇರಿದೆ. ಯಾಂಗನ್‌ನಲ್ಲಿ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ ಎಂದು ‘ಮ್ಯಾನ್ಮಾರ್ ನೌ’ ಹೇಳಿದೆ.

ಇದರೊಂದಿಗೆ ಈವರೆಗೆ ಸೈನಿಕರ ಗುಂಡಿಗೆ ಬಲಿಯಾದ ನಾಗರಿಕರ ಸಂಖ್ಯೆ 400 ಮೀರಿದೆ.

ಸೈನಿಕರಿಗೆ ಅವಮಾನಕಾರಿ ದಿನ:  ‘‘ಇಂದು ಸಶಸ್ತ್ರ ಪಡೆಗಳಿಗೆ ಅತ್ಯಂತ ಅವಮಾನಕರ ದಿನವಾಗಿದೆ’’ ಎಂದು ಪದಚ್ಯುತ ಸಂಸದರು ಸ್ಥಾಪಿಸಿರುವ ಸೇನಾಡಳಿತ ವಿರೋಧಿ ಗುಂಪು ಸಿಆರ್‌ಪಿಎಚ್‌ನ ವಕ್ತಾರ ಡಾ. ಸಾಸ ಹೇಳಿದ್ದಾರೆ.

‘‘ಅವರು ನಮ್ಮನ್ನು ಹಕ್ಕಿಗಳು ಮತ್ತು ಕೋಳಿಗಳಂತೆ ಕೊಲ್ಲುತ್ತಿದ್ದಾರೆ. ನಮ್ಮ ಮನೆಗಳಿಗೆ ನುಗ್ಗಿಯೂ ಕೊಲ್ಲುತ್ತಿದ್ದಾರೆ’’ ಎಂದು ಮ್ಯಿಂಗ್‌ಯಾನ್ ಎಂಬ ಪಟ್ಟಣದ ನಿವಾಸಿಯೊಬ್ಬರು ಹೇಳಿದರು.

‘‘ಏನೇ ಆದರೂ ನಾವು ಪ್ರತಿಭಟನೆಯನ್ನು ಮುಂದುವರಿಸುತ್ತೇವೆ... ಸೇನಾ ಸರಕಾರ ಉರುಳುವವರೆಗೂ ನಾವು ಹೋರಾಡಬೇಕು’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X