Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭೂಮಿ ಬಿಸಿಯಾಗುವ ದರದಲ್ಲಿ ಹೆಚ್ಚಳ:...

ಭೂಮಿ ಬಿಸಿಯಾಗುವ ದರದಲ್ಲಿ ಹೆಚ್ಚಳ: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಅಂತರ್-ಸರಕಾರಿ ಸಮಿತಿ ವರದಿ

ವಾರ್ತಾಭಾರತಿವಾರ್ತಾಭಾರತಿ9 Aug 2021 10:28 PM IST
share
ಭೂಮಿ ಬಿಸಿಯಾಗುವ ದರದಲ್ಲಿ ಹೆಚ್ಚಳ: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಅಂತರ್-ಸರಕಾರಿ ಸಮಿತಿ ವರದಿ

ಹೊಸದಿಲ್ಲಿ, ಆ. 9: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಅಂತರ್-ಸರಕಾರಿ ಸಮಿತಿಯು ತನ್ನ ಆರನೇ ಅಧ್ಯಯನ ವರದಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಸಮಿತಿಯ 195 ಸದಸ್ಯ ದೇಶಗಳ ಪೈಕಿ ಭಾರತವೂ ಒಂದಾಗಿದೆ.

ಭೂಮಿಯ ಹವಾಮಾನದಲ್ಲಿನ ಬದಲಾವಣೆಯನ್ನು ವಿಜ್ಞಾನಿಗಳು ಪ್ರತಿಯೊಂದು ಪ್ರದೇಶದಲ್ಲಿ ಮತ್ತು ಇಡೀ ಹವಾಮಾನ ವ್ಯವಸ್ಥೆಯಲ್ಲಿ ವೀಕ್ಷಿಸುತ್ತಿದ್ದಾರೆ. ಸಾಗರ ಮಟ್ಟದಲ್ಲಿನ ನಿರಂತರ ಏರಿಕೆ ಮುಂತಾದ ಈಗಾಗಲೇ ಆರಂಭಗೊಂಡಿರುವ ಕೆಲವು ಬದಲಾವಣೆಗಳನ್ನು ಇನ್ನು ಲಕ್ಷಾಂತರ ವರ್ಷಗಳ ಅವಧಿಯಲ್ಲಿ ನಿಲ್ಲಿಸಲು ಸಾಧ್ಯವಿಲ್ಲ. ಆದರೂ, ಇಂಗಾಲದ ಡೈ ಆಕ್ಸೈಡ್ ಮತ್ತು ಭೂಮಿಯ ತಾಪಮಾನಕ್ಕೆ ಕಾರಣವಾಗುವ ಅನಿಲಗಳ ಉತ್ಪಾದನೆಯಲ್ಲಿ ಬೃಹತ್ ಪ್ರಮಾಣದ ಹಾಗೂ ಕ್ಷಿಪ್ರ ಕಡಿತವು ಹವಾಮಾನ ಬದಲಾವಣೆಯನ್ನು ಸೀಮಿತಗೊಳಿಸಬಲ್ಲವು. ಆದರೆ, ಇದನ್ನು ಮಾಡಲು ದೇಶಗಳು ಮನಸ್ಸು ಮಾಡಬೇಕಾಗಿದೆ ಎಂದು ವರದಿ ಹೇಳಿದೆ.

ಭೂಮಿಯು ವೇಗವಾಗಿ ಬಿಸಿಯಾಗುತ್ತಿದೆ ಎಂದು ಹೇಳಿರುವ ವರದಿಯು 2030ರ ವೇಳೆಗೆ ಭೂಮಿಯು ಕೈಗಾರಿಕಾಪೂರ್ವ ಮಟ್ಟಕ್ಕಿಂತ 1.5 ಡಿಗ್ರಿ ಸೆಲ್ಸಿಯಸ್ ಹೆಚ್ಚು ಬಿಸಿಯಾಗಲಿದೆ ಎಂದಿದೆ. ಈ ಮಟ್ಟದ ಉಷ್ಣತೆಯು 2018ರಲ್ಲಿ ಊಹಿಸಿರುವುದಕ್ಕಿಂತ ಒಂದು ದಶಕದ ಮೊದಲೇ ಸಂಭವಿಸಲಿದೆ.

‘‘ಸಮುದ್ರ ಮಟ್ಟವು ವೇಗವಾಗಿ ಏರುತ್ತಿದೆ. 1901 ಮತ್ತು 1971ರ ನಡುವಿನ ಅವಧಿಯಲ್ಲಿ ಸಮುದ್ರ ಮಟ್ಟ ಏರಿಕೆಯ ಸರಾಸರಿ ದರ ವರ್ಷಕ್ಕೆ 1.3 ಮಿಲಿಮೀಟರ್ ಆಗಿತ್ತು. ಇದು 2006-2018ರ ನಡುವಿನ ಅವಧಿಯಲ್ಲಿ ದ್ವಿಗುಣಕ್ಕಿಂತಲೂ ಹೆಚ್ಚಾಗಿ ವರ್ಷಕ್ಕೆ 3.7 ಮಿ.ಮೀಟರ್ ಆಗಿದೆ. 1901 ಮತ್ತು 2018ರ ನಡುವಿನ ಅವಧಿಯಲ್ಲಿ ಜಾಗತಿಕ ಸರಾಸರಿ ಸಮುದ್ರ ಮಟ್ಟವು 0.20 ಮೀಟರ್ ಏರಿದೆ’’ ಎಂದು ವರದಿ ಹೇಳಿದೆ.
‌
‘‘ನಗರಗಳು ಜಾಗತಿಕ ತಾಪಮಾನದ ಕೇಂದ್ರ ಬಿಂದುಗಳಾಗಿವೆ. ಯಾಕೆಂದರೆ ನಗರಗಳು ಉಷ್ಣತೆಯನ್ನು ಹಿಡಿದಿಟ್ಟುಕೊಳ್ಳುತ್ತವೆ ಹಾಗೂ ಅಲ್ಲಿ ನೀರು ಮತ್ತು ಸಸ್ಯರಾಶಿ ಮುಂತಾದ ತಂಪು ಪ್ರದೇಶಗಳು ಇಲ್ಲ’’ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X