Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ನಮ್ಮ ಹಣವನ್ನು ನಮಗೆ ನೀಡಿ": ವಿದೇಶದ...

"ನಮ್ಮ ಹಣವನ್ನು ನಮಗೆ ನೀಡಿ": ವಿದೇಶದ ಬ್ಯಾಂಕ್ ಗಳಿಗೆ ತಾಲಿಬಾನ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Oct 2021 9:57 PM IST
share
ನಮ್ಮ ಹಣವನ್ನು ನಮಗೆ ನೀಡಿ: ವಿದೇಶದ ಬ್ಯಾಂಕ್ ಗಳಿಗೆ ತಾಲಿಬಾನ್ ಆಗ್ರಹ

ಕಾಬೂಲ್, ಅ.29: ಅಮೆರಿಕದ ಫೆಡರಲ್ ಬ್ಯಾಂಕ್ ಹಾಗೂ ಯುರೋಪ್ ನ ಸೆಂಟ್ರಲ್ ಬ್ಯಾಂಕ್ನಲ್ಲಿ ಅಫ್ಗಾನಿಸ್ತಾನ ಸರಕಾರದ ಖಾತೆಯಲ್ಲಿ ಮೀಸಲು ನಿಧಿಯಾಗಿರುವ ಕೋಟ್ಯಾಂತರ ಡಾಲರ್ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಅಫ್ಗಾನಿಸ್ತಾನದ ತಾಲಿಬಾನ್ ಸರಕಾರ ತೀವ್ರ ಒತ್ತಡ ಹೇರುತ್ತಿದೆ. ವಿದೇಶದ ಬ್ಯಾಂಕ್ನಲ್ಲಿರುವ ಹಣ ಅಫ್ಗಾನಿಸ್ತಾನಕ್ಕೆ ಸೇರಿದ್ದು. ನಮ್ಮ ಹಣವನ್ನು ಮರಳಿ ನೀಡಿ. ಹಣವನ್ನು ಸ್ಥಂಭನಗೊಳಿಸಿರುವುದು ಅನೈತಿಕ ಮತ್ತು ಎಲ್ಲಾ ಅಂತರಾಷ್ಟ್ರೀಯ ಕಾನೂನುಗಳಿಗೆ ಮತ್ತು ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಅಫ್ಗಾನ್ನ ವಿತ್ತ ಸಚಿವಾಲಯದ ವಕ್ತಾರ ಅಹ್ಮದ್ ವಾಲಿ ಹಕ್ಮಲ್ ಆಗ್ರಹಿಸಿದ್ದಾರೆ. 

ಅಫ್ಗಾನಿಸ್ತಾನದಲ್ಲಿ ಹಣಕಾಸಿನ ತೀವ್ರ ಮುಗ್ಗಟ್ಟು ಎದುರಾಗಿದ್ದು, ಆಹಾರದ ಕೊರತೆ ಮತ್ತು ವಲಸಿಗರ ಸಮಸ್ಯೆ ಹೆಚ್ಚುತ್ತಿದೆ. ಸರಕಾರ ಮಹಿಳೆಯರ ಶಿಕ್ಷಣ ಸಹಿತ ಮಾನವ ಹಕ್ಕುಗಳನ್ನು ಗೌರವಿಸಲು ಬದ್ಧವಾಗಿದೆ. ಈಗ ವಿಶ್ವಸಂಸ್ಥೆ ಒದಗಿಸುತ್ತಿರುವ ಮಾನವೀಯ ನೆರವು ಅಲ್ಪಪ್ರಮಾಣದ್ದಾಗಿದೆ . ಆದ್ದರಿಂದ ವಿದೇಶದ ಬ್ಯಾಂಕ್ಗಳಲ್ಲಿ ಸ್ಥಂಭನಗೊಳಿಸಲಾಗಿರುವ ಕೋಟ್ಯಾಂತರ ಡಾಲರ್ ಮೊತ್ತವನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಎಂದು ವಕ್ತಾರರು ಒತ್ತಾಯಿಸಿದ್ದಾರೆ. 

ಆಗಸ್ಟ್ನಲ್ಲಿ ತಾಲಿಬಾನ್ ಪಡೆಗಳು ಪಾಶ್ಚಿಮಾತ್ಯ ದೇಶಗಳ ಬೆಂಬಲ ಪಡೆದಿದ್ದ ಅಫ್ಗಾನ್ ಸರಕಾರವನ್ನು ಪದಚ್ಯುತಗೊಳಿಸಿ ದೇಶದ ಮೇಲೆ ನಿಯಂತ್ರಣ ಸಾಧಿಸಿದ ಬೆನ್ನಲ್ಲೇ, ವಿದೇಶದ ಬ್ಯಾಂಕ್ಗಳಲ್ಲಿ ಅಫ್ಗಾನ್ ಸರಕಾರ ಮೀಸಲು ನಿಧಿಯಾಗಿರಿಸಿದ್ದ ಕೋಟ್ಯಾಂತರ ಡಾಲರ್ ಮೊತ್ತವನ್ನು ಸ್ಥಂಭನಗೊಳಿಸಲಾಗಿತ್ತು. ಈ ಮಧ್ಯೆ, ಜರ್ಮನಿ ಸಹಿತ ಯುರೋಪ್ ದೇಶಗಳು ತಮ್ಮ ಬ್ಯಾಂಕ್ಲ್ಲಿರುವ ಅಫ್ಗಾನ್ ದೇಶದ ಮೀಸಲು ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಬ್ಯಾಂಕ್ನ ಉನ್ನತ ಅಧಿಕಾರಿಯೊಬ್ಬರು ಶಿಫಾರಸು ಮಾಡಿದ್ದಾರೆ. ಅಫ್ಗಾನ್ ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿರುವುದರಿಂದ ಅಲ್ಲಿಂದ ಬೃಹತ್ ಸಂಖ್ಯೆಯಲ್ಲಿ ವಲಸಿಗರು ಯುರೋಪ್ನತ್ತ ಧಾವಿಸಬಹುದು ಎಂದವರು ಹೇಳಿದ್ದಾರೆ. 

ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಹತಾಶ ಸ್ಥಿತಿಯಿದೆ. ಈ ವರ್ಷಾಂತ್ಯದವರೆಗೆ ಸಾಲುವಷ್ಟು ಹಣ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿದೆ ಎಂದು ಅಫ್ಗಾನ್ ಸೆಂಟ್ರಲ್ ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯ ಶಾ ಮೆಹ್ರಬಿ ಹೇಳಿದ್ದಾರೆ. ಒಂದು ವೇಳೆ ನಮ್ಮ ಹಣವನ್ನು ಮರಳಿಸದಿದ್ದರೆ ಅದರಿಂದ ಯುರೋಪ್ನ ಮೇಲೆ ಅತೀ ಹೆಚ್ಚಿನ ಪರಿಣಾಮ ಉಂಟಾಗಲಿದೆ. ಅಫ್ಗಾನಿಸ್ತಾನದಲ್ಲಿ ಆಹಾರದ ಕೊರತೆಯಾಗಲಿದ್ದು ಜನತೆ ಯುರೋಪ್ನತ್ತ ವಲಸೆ ಹೋಗಬಹುದು ಎಂದವರು ಎಚ್ಚರಿಸಿದ್ದಾರೆ. ಅಫ್ಗಾನಿಸ್ತಾನದಲ್ಲಿ ಸರಕಾರದ ಯೋಜನೆಗಳಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದ ಅಮೆರಿಕ ಮತ್ತು ಅಂತರಾಷ್ಟ್ರೀಯ ದೇಣಿಗೆದಾರರು ಈ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕ ಅವಧಿಯ ಬಳಿಕ ಆರ್ಥಿಕ ನೆರವು ಸ್ಥಗಿತಗೊಳಿಸಿದ್ದರಿಂದ ಅಫ್ಗಾನಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟಿನ ಸ್ಥಿತಿ ನೆಲೆಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X