Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಲೆಗಳನ್ನು ತೆರೆಯುವುದಕ್ಕೂ ಕೊರೋನ...

ಶಾಲೆಗಳನ್ನು ತೆರೆಯುವುದಕ್ಕೂ ಕೊರೋನ ಹರಡುವುದಕ್ಕೂ ಸಂಬಂಧವಿಲ್ಲ: ವಿಶ್ವಬ್ಯಾಂಕ್ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ16 Jan 2022 11:12 PM IST
share
ಶಾಲೆಗಳನ್ನು ತೆರೆಯುವುದಕ್ಕೂ ಕೊರೋನ ಹರಡುವುದಕ್ಕೂ ಸಂಬಂಧವಿಲ್ಲ: ವಿಶ್ವಬ್ಯಾಂಕ್ ಅಧಿಕಾರಿ

ವಾಷಿಂಗ್ಟನ್, ಜ.16: ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚುವುದಕ್ಕೆ ಯಾವುದೇ ಸಮರ್ಥನೆ ಇಲ್ಲ ಮತ್ತು ಹೊಸ ಅಲೆಗಳಿದ್ದರೂ ಕೂಡಾ ಶಾಲೆಗಳನ್ನು ಮುಚ್ಚುವುದು ಅಂತಿಮ ಆಯ್ಕೆಯಾಗಿರಬೇಕು ಎಂದು ವಿಶ್ವಬ್ಯಾಂಕ್‌ನ ಜಾಗತಿಕ ಶಿಕ್ಷಣ ನಿರ್ದೇಶಕ ಜೈಮ್ ಸಾವೆದ್ರ ಹೇಳಿದ್ದಾರೆ.

    ಶಾಲೆಗಳನ್ನು ಮತ್ತೆ ತೆರೆದಿರುವುದು ಕೊರೋನ ಸೋಂಕು ಪ್ರಕರಣ ಉಲ್ಬಣಿಸಲು ಕಾರಣವಾಗಿದೆ ಮತ್ತು ಶಾಲೆಗಳು ಸುರಕ್ಷಿತ ಪ್ರದೇಶವಲ್ಲ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಶಾಲೆಗಳನ್ನು ತೆರೆಯುವುದಕ್ಕೂ ಕೊರೋನ ಸೋಂಕು ಹರಡುವುದಕ್ಕೂ ಯಾವುದೇ ಸಂಬಂಧವಿಲ್ಲ . ಮಕ್ಕಳಿಗೆ ಲಸಿಕೆ ಹಾಕಿದ ಬಳಿಕ ಶಾಲೆಗಳನ್ನು ತೆರೆಯಬೇಕು ಎಂಬುದು ವಿವೇಚನಾರಹಿತ ಸಲಹೆಯಾಗಿದೆ ಮತ್ತು ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಎಂದವರು ಹೇಳಿದ್ದಾರೆ. ಸಾವೆದ್ರ ಮತ್ತವರ ತಂಡ ಶೈಕ್ಷಣಿಕ ಕ್ಷೇತ್ರದ ಮೇಲೆ ಕೊರೋನ ಸೋಂಕಿನ ಪರಿಣಾಮದ ಬಗ್ಗೆ ಅಧ್ಯಯನ ನಡೆಸುತ್ತಿದೆ.

ವಿಶ್ವಬ್ಯಾಂಕ್ ನಡೆಸಿದ ಹಲವು ಅಧ್ಯಯನಗಳ ಪ್ರಕಾರ, ಶಾಲೆಗಳನ್ನು ತೆರೆದರೆ ಮಕ್ಕಳ ಆರೋಗ್ಯದ ಮೇಲಾಗುವ ಪರಿಣಾಮ ಅತ್ಯಲ್ಪ, ಆದರೆ ಮುಚ್ಚಿದರೆ ಆಗುವ ತೊಂದರೆ ಅಪಾರ ಎಂದು ಕಂಡುಬಂದಿದೆ. ರೆಸ್ಟಾರೆಂಟ್, ಬಾರ್‌ಗಳನ್ನು ತೆರೆದಿಟ್ಟು ಶಾಲೆಗಳನ್ನು ಮುಚ್ಚುವುದು ವಿವೇಚನಾರಹಿತ ನಿರ್ಧಾರವಾಗಿದೆ. ಇದಕ್ಕೆ ಯಾವುದೇ ಸಮರ್ಥನೆಯಿಲ್ಲ ವಾಷಿಂಗ್ಟನ್‌ನಿಂದ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

   2020ರಲ್ಲಿ ನಾವು ಅಜ್ಞಾನವೆಂಬ ಸಾಗರದಲ್ಲಿ ಪ್ರಯಾಣಿಸುತ್ತಿದ್ದೆವು. ಸೋಂಕನ್ನು ಎದುರಿಸುವ ಅತ್ಯುತ್ತಮ ವಿಧಾನ ಯಾವುದು ಎಂಬುದು ಯಾರಿಗೂ ತಿಳಿದಿರಲಿಲ್ಲ ಮತ್ತು ವಿಶ್ವದ ಬಹುತೇಕ ದೇಶಗಳ ತಕ್ಷಣದ ಪ್ರತಿಕ್ರಿಯೆ ಎಂದರೆ ಶಾಲೆಗಳನ್ನು ಮುಚ್ಚಿಬಿಡುವುದು. ಆ ಬಳಿಕ ಸಮಯ ಮುಂದೆ ಸಾಗಿದೆ ಮತ್ತು 2020 ಹಾಗೂ 2021ರಲ್ಲಿ ಸೋಂಕಿನ ಹಲವು ಅಲೆಗಳು ಎದ್ದರೂ ವಿಶ್ವದಲ್ಲಿ ಹಲವು ದೇಶಗಳು ಶಾಲೆಗಳನ್ನು ತೆರೆದಿದ್ದವು. ಶಾಲೆಗಳನ್ನು ತೆರೆಯುವುದರಿಂದ ವೈರಸ್ ಪ್ರಸಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ನಾವು ನಡೆಸಿದ ಅಧ್ಯಯದಲ್ಲಿ ತಿಳಿದುಬಂದಿದೆ. ಶಾಲೆಗಳನ್ನು ಮುಚ್ಚಿದ್ದರೂ ಹಲವು ದೇಶಗಳಲ್ಲಿ ಸೋಂಕಿನ ಹಲವು ಅಲೆಗಳು ಎದ್ದಿದ್ದವು ಎಂಬುದನ್ನು ಗಮನಿಸಬೇಕು ಎಂದವರು ಹೇಳಿದ್ದಾರೆ.

   ಮಕ್ಕಳು ಸೋಂಕಿಗೆ ಒಳಗಾಗಬಹುದಾದರೂ ಸಾವಿನ ಪ್ರಕರಣ ಮತ್ತು ಗಂಭೀರ ಕಾಯಿಲೆಯ ಲಕ್ಷಣ ಬಹಳ ಅಪರೂಪವಾಗಿದೆ. ಮಕ್ಕಳಿಗೆ ಅಪಾಯದ ಪ್ರಮಾಣ ಅಲ್ಪವಾಗಿದೆ ಆದರೆ, ಶಾಲೆಗಳನ್ನು ಮುಚ್ಚಿದರೆ ಆಗುವ ತೊಂದರೆ ಅಪಾರವಾಗಿದೆ. ಮಕ್ಕಳು ಲಸಿಕೆ ಪಡೆದ ಬಳಿಕವೇ ಶಾಲೆ ಆರಂಭಿಸುವುದಾಗಿ ಷರತ್ತು ಮುಂದಿರಿಸಿದ ಯಾವುದೇ ದೇಶಗಳಿಲ್ಲ. ಯಾಕೆಂದರೆ ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಮತ್ತು ಸಾರ್ವಜನಿಕ ನೀತಿಯ ದೃಷ್ಟಿಕೋನದಲ್ಲಿ ಇದಕ್ಕೆ ಯಾವುದೇ ಅರ್ಥವಿಲ್ಲ ಎಂದು ಜೈಮ್ ಸಾವೆದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X