Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ನ ಸರಕಾರಿ ಕಟ್ಟಡಕ್ಕೆ...

ಉಕ್ರೇನ್ ನ ಸರಕಾರಿ ಕಟ್ಟಡಕ್ಕೆ ಅಪ್ಪಳಿಸಿದ ರಶ್ಯದ ಕ್ಷಿಪಣಿ

ವಾರ್ತಾಭಾರತಿವಾರ್ತಾಭಾರತಿ30 March 2022 12:19 AM IST
share
ಉಕ್ರೇನ್ ನ ಸರಕಾರಿ ಕಟ್ಟಡಕ್ಕೆ ಅಪ್ಪಳಿಸಿದ ರಶ್ಯದ ಕ್ಷಿಪಣಿ

ಕೀವ್, ಮಾ.29: ದಕ್ಷಿಣ ಉಕ್ರೇನ್ನ ಬಂದರು ನಗರ ಮಿಕೊಲೈವ್ನಲ್ಲಿನ ಪ್ರಾದೇಶಿಕ ಆಡಳಿತ ಕಟ್ಟಡಕ್ಕೆ ಮಂಗಳವಾರ ರಶ್ಯದ ಕ್ಷಿಪಣಿಯೊಂದು ಅಪ್ಪಳಿಸಿದ್ದು ಕಟ್ಟಡದಲ್ಲಿ ಬಿರುಕು ಮೂಡಿದೆ. ಕಟ್ಟಡದ ಒಂದು ಭಾಗ ಕುಸಿದಿದ್ದು ಅವಶೇಷಗಳಡಿ ಕನಿಷ್ಟ 11 ಮಂದಿ ಸಿಲುಕಿರುವ ಶಂಕೆಯಿದೆ ಎಂದು ಸ್ಥಳೀಯ ಗವರ್ನರ್ ವಿಟಾಲಿಯ್ ಕಿಮ್ ಹೇಳಿದ್ದಾರೆ.

ಕಟ್ಟಡದ ಒಂದು ಪಾರ್ಶ್ವದಲ್ಲಿ ದೊಡ್ಡದಾದ ರಂಧ್ರ ಉಂಟಾಗಿರುವುದನ್ನು ರಾಯ್ಟರ್ಸ್ ದೃಢಪಡಿಸಿದೆ. ಇಡೀ ಪ್ರದೇಶವನ್ನು ಉಕ್ರೇನ್ನ ಅಧಿಕಾರಿಗಳು ಸುತ್ತುವರಿದಿದ್ದು ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ.
  ಅವರು ಕಟ್ಟಡದ ಅರ್ಧಭಾಗವನ್ನು ನಾಶಗೊಳಿಸಿದ್ದು ನನ್ನ ಕಚೇರಿಗೂ ಹಾನಿಯಾಗಿದೆ. ಕಟ್ಟಡಕ್ಕೆ ವಿದ್ಯುತ್ಪೂರೈಕೆ ಮೊಟಕುಗೊಂಡಿದೆ . ದಾಳಿ ಸಂದರ್ಭ ಕಟ್ಟಡದಲ್ಲಿದ್ದ ಬಹುತೇಕ ಮಂದಿ ಪವಾಡಸದೃಶ ಪಾರಾಗಿದ್ದಾರೆ. ಕುಸಿದು ಬಿದ್ದ ಕಟ್ಟಡದ ಅವಶೇಷಗಳಡಿ 8 ನಾಗರಿಕರು ಹಾಗೂ 3 ಯೋಧರು ಸಿಕ್ಕಿಬಿದ್ದಿದ್ದು ಅವರನ್ನು ಸುರಕ್ಷಿತವಾಗಿ ರಕ್ಷಿಸುವ ಭರವಸೆಯಿದೆ ಎಂದು ಕಿಮ್ ಹೇಳಿದ್ದಾರೆ. ಈ ಮಧ್ಯೆ, ಉಕ್ರೇನ್ನ ಪ್ರಮುಖ ಬಂದರು ನಗರ ಖೆರ್ಸಾನ್, ಒಡೆಸಾ, ಮಿಕೊಲಾಯಿವ್ ಮತ್ತು ಮರಿಯುಪೋಲ್ ಸಹಿತ ದಕ್ಷಿಣ ಪ್ರಾಂತದ ಮೇಲಿನ ಆಕ್ರಮಣವನ್ನು ರಶ್ಯ ತೀವ್ರಗೊಳಿಸಿದ್ದು ಕಪ್ಪು ಸಮುದ್ರ ಮತ್ತು ಉಕ್ರೇನ್ ನಡುವಿನ ಸಂಪರ್ಕವನ್ನು ಕಡಿತಗೊಳಿಸಿ, ರಶ್ಯದಿಂದ ಕ್ರಿಮಿಯಾದವರೆಗೆ ಕಾರಿಡಾರ್ ನಿರ್ಮಿಸುವ ಉದ್ದೇಶವನ್ನು ರಶ್ಯ ಹೊಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಉಕ್ರೇನ್ಗೆ ಸೇರಿದ ಕ್ರಿಮಿಯಾವನ್ನು 2014ರಲ್ಲಿ ರಶ್ಯ ಸ್ವಾಧೀನಪಡಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X