Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಗ್ದಾದ್‌ನಲ್ಲಿ ಇರಾನ್- ಸೌದಿ ಮಧ್ಯೆ 5ನೇ...

ಬಗ್ದಾದ್‌ನಲ್ಲಿ ಇರಾನ್- ಸೌದಿ ಮಧ್ಯೆ 5ನೇ ಸುತ್ತಿನ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ23 April 2022 10:06 PM IST
share
ಬಗ್ದಾದ್‌ನಲ್ಲಿ ಇರಾನ್- ಸೌದಿ ಮಧ್ಯೆ 5ನೇ ಸುತ್ತಿನ ಮಾತುಕತೆ

ಟೆಹ್ರಾನ್, ಎ.23: ಇರಾಕ್ ರಾಜಧಾನಿ ಬಗ್ದಾದ್‌ನಲ್ಲಿ ಇರಾನ್ ಮತ್ತು ಸೌದಿ ಅರೆಬಿಯಾದ ಮಧ್ಯೆ 5ನೇ ಸುತ್ತಿನ ನೇರ ಮಾತುಕತೆ ನಡೆದಿದೆ ಎಂದು ಇರಾನ್‌ನ ಭದ್ರತಾ ಪಡೆಗಳಿಗೆ ನಿಕಟವಾಗಿರುವ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇರಾನ್‌ನ ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್(ಎಸ್‌ಎನ್‌ಎಸ್‌ಸಿ)ಯ ಉನ್ನತ ಅಧಿಕಾರಿ ಹಾಗೂ ಸೌದಿ ಅರೆಬಿಯಾದ ಗುಪ್ತಚರ ವಿಭಾಗದ ಮುಖ್ಯಸ್ಥ ಖಾಲಿದ್ ಬಿನ್ ಅಲಿ ಅಲ್ ಹುಮೈದನ್ ಮಾತುಕತೆಯಲ್ಲಿ ಪಾಲ್ಗೊಂಡಿದ್ದರು ಎಂದು ಎಸ್‌ಎನ್‌ಎಸ್‌ಸಿಗೆ ನಿಕಟವಾಗಿರುವ ನೂರ್‌ನ್ಯೂಸ್ ವರದಿ ಮಾಡಿದೆ.

ಉಭಯ ದೇಶಗಳ ನಡುವಿನ ಸಂಬಂಧವನ್ನು ಮರುಸ್ಥಾಪಿಸಲು ಅಡ್ಡಿಯಾಗಿರುವ ಪ್ರಮುಖ ಸವಾಲುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ . ಧನಾತ್ಮಕ ರೀತಿಯಲ್ಲಿ ನಡೆದಿರುವ ಸಭೆಯು ದ್ವಿಪಕ್ಷೀಯ ಸಂಬಂಧದ ಉತ್ತಮ ಭವಿಷ್ಯವನ್ನು ತೆರೆದಿಟ್ಟಿದೆ. ಈ ಸಭೆಯು ಮುಂದಿನ ಹಂತದಲ್ಲಿ ಉಭಯ ದೇಶಗಳ ವಿದೇಶ ಸಚಿವರ ಮಟ್ಟದ ಸಭೆಗೆ ಹಾದಿ ಸುಗಮಗೊಳಿಸಿದೆ ಎಂದು ವರದಿ ಹೇಳಿದೆ.

    2016ರಲ್ಲಿ ಟೆಹ್ರಾನ್‌ನಲ್ಲಿನ ಸೌದಿ ಅರೆಬಿಯಾ ದೂತಾವಾಸದ ಮೇಲೆ ಜನರ ತಂಡವೊಂದು ದಾಳಿ ನಡೆಸಿದ ಬಳಿಕ ಇರಾನ್ ಮತ್ತು ಸೌದಿ ಅರೆಬಿಯಾ ನಡುವಿನ ರಾಜತಾಂತ್ರಿಕ ಬಾಂಧವ್ಯ ರದ್ದಾಗಿದೆ. ಆ ಬಳಿಕ ಯೆಮನ್‌ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಲ್ಲಿ ಇರಾನ್ ಮತ್ತು ಸೌದಿ ಅರೆಬಿಯಾ ಎದುರಾಳಿ ತಂಡದಲ್ಲಿ ಗುರುತಿಸಿಕೊಂಡಿವೆ. ಯೆಮನ್‌ನ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಸರಕಾರವನ್ನು ಪ್ರತಿನಿಧಿಸುತ್ತಿರುವ ಸೇನೆಯನ್ನು ಸೌದಿ ಅರೆಬಿಯಾ ಬೆಂಬಲಿಸಿದರೆ, ಹೌದಿ ಬಂಡುಗೋರರಿಗೆ ಇರಾನ್ ಬೆಂಬಲ ನೀಡುತ್ತಿದೆ. ಇದೀಗ ವಿಶ್ವಸಂಸ್ಥೆಯ ಮಧ್ಯಸ್ಥಿಕೆಯ ಬಳಿಕ ಯೆಮನ್‌ನಲ್ಲಿ 2 ತಿಂಗಳ ಯುದ್ಧವಿರಾಮ ಜಾರಿಯಲ್ಲಿದೆ.

 ನೇರ ಮಾತುಕತೆಯಿಂದ ದ್ವಿಪಕ್ಷೀಯ ಸಂಬಂಧ ಸುಧಾರಿಸಲಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆ ಕಡಿಮೆಯಾಗಲಿದೆ ಎಂದು ಉಭಯ ದೇಶಗಳೂ ಆ ಬಳಿಕ ಪ್ರತಿಪಾದಿಸುತ್ತಾ ಬಂದಿದ್ದವು. ಇದೀಗ ಇರಾಕ್ ಹಾಗೂ ಒಮನ್ ಆಸಕ್ತಿ ವಹಿಸಿ ಉಭಯ ದೇಶಗಳ ನಡುವಿನ ನೇರ ಮಾತುಕತೆಗೆ ವೇದಿಕೆ ಕಲ್ಪಿಸಿದೆ. ಜಿದ್ದಾದಲ್ಲಿರುವ ಆರ್ಗನೈಸೇಷನ್ ಆಫ್ ಇಸ್ಲಾಮಿಕ್ ಕೋಆಪರೇಷನ್(ಒಐಸಿ)ಯಲ್ಲಿ ಇರಾನ್‌ನ ರಾಜತಾಂತ್ರಿಕ ಕಚೇರಿ ಆರಂಭಿಸುವ ನಿಟ್ಟಿನಲ್ಲಿ ಮಾತುಕತೆಯಲ್ಲಿ ಸಾಕಷ್ಟು ಪ್ರಗತಿಯಾಗಿದೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X