Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್: ಬಾಲಕರ ಮೇಲೆ ರಶ್ಯ ಯೋಧರು...

ಉಕ್ರೇನ್: ಬಾಲಕರ ಮೇಲೆ ರಶ್ಯ ಯೋಧರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ5 May 2022 12:10 AM IST
share
ಉಕ್ರೇನ್: ಬಾಲಕರ ಮೇಲೆ ರಶ್ಯ ಯೋಧರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ ವಿಶ್ವಸಂಸ್ಥೆ

ಶ್ವಸಂಸ್ಥೆ ವಿಶ್ವಸಂಸ್ಥೆ, ಮೇ 4: ಉಕ್ರೇನ್ನಲ್ಲಿ ರಶ್ಯದ ಯೋಧರು ಪುರುಷರು ಮತ್ತು ಬಾಲಕರ ಮೇಲೆ ಅತ್ಯಾಚಾರ ಎಸಗಿರುವ ಆರೋಪವಿದೆ ಎಂದು ವಿಶ್ವಸಂಸ್ಥೆ ಹಾಗೂ ಉಕ್ರೇನ್ ಅಧಿಕಾರಿಗಳು ಹೇಳಿದ್ದಾರೆ.

ಈ ಕುರಿತ ವರದಿ ತನ್ನ ಕೈಸೇರಿದೆ. ಆದರೆ ವರದಿಯನ್ನು ಇನ್ನೂ ಪರಿಶೀಲಿಸಿಲ್ಲ . ಪುರುಷ ಅತ್ಯಾಚಾರಿ ಸಂತ್ರಸ್ತರಿಗೆ ತಮ್ಮ ಮೇಲಿನ ಅಪರಾಧದ ಬಗ್ಗೆ ದೂರು ನೀಡುವುದು ಅತ್ಯಂತ ಸವಾಲಿನ ಕಾರ್ಯವಾಗಿದೆ ಎಂದು ಯುದ್ಧದ ಸಂದರ್ಭ ಅತ್ಯಾಚಾರವನ್ನು ಕೊನೆಗೊಳಿಸುವ ಉದ್ದೇಶದ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಪ್ರಮೀಳಾ ಪ್ಯಾಟನ್ ಹೇಳಿದ್ದಾರೆ.ಕಳಂಕದ ಭೀತಿ ಸಹಿತ ಇತರ ಕೆಲವು ಕಾರಣಗಳಿಂದಾಗಿ ಮಹಿಳಾ ಸಂತ್ರಸ್ತರಿಗೆ ತಮ್ಮ ಮೇಲಿನ ಅತ್ಯಾಚಾರದ ಬಗ್ಗೆ ದೂರು ನೀಡಲು ಕಷ್ಟವಾಗುತ್ತದೆ. ಆದರೆ ಪುರುಷರಿಗೆ ಇದು ಇನ್ನಷ್ಟು ಕಠಿಣ ಸವಾಲಾಗುತ್ತದೆ. ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡುವ ಸಂತ್ರಸ್ತರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದವರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
 

ಹಲವು ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಪುರುಷರು ಮತ್ತು ಬಾಲಕರ ಅಗತ್ಯಗಳಿಗೆ ಸ್ಪಂದಿಸುವ ಸೇವೆಯ ಕೊರತೆಯನ್ನು ಮನಗಂಡಿದ್ದು ಇಂತಹ ಸೇವೆಯನ್ನು ಖಾತರಿಪಡಿಸಲು ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿರುವುದಾಗಿ ಅವರು ಹೇಳಿದ್ದಾರೆ. ಅತ್ಯಾಚಾರ ಸಂತ್ರಸ್ತರು ಹಿಂಜರಿಕೆ ಬಿಟ್ಟು ಮುಂದೆ ಬಂದು ದೂರು ನೀಡಬೇಕು. ಅಂತರಾಷ್ಟ್ರೀಯ ಕಾನೂನು ಎಂಬುದು ಪೊಳ್ಳು ಭರವಸೆಯಲ್ಲ. ಇವತ್ತು ದೂರು ನೀಡಿದರೆ ನಾಳೆ ಶಿಕ್ಷೆಯಾಗಬಹುದು. ಯುದ್ಧ ಆರಂಭಗೊಂಡೊಡನೆ ನಿಮ್ಮ ಹಕ್ಕುಗಳು ಕೊನೆಯಾದವು ಎಂದು ಭಾವಿಸಬಾರದು ಎಂದ ಪ್ರಮೀಳಾ ಪ್ಯಾಟನ್, ಯುದ್ಧ ಆರಂಭಗೊಂಡೊಡನೆ ಮಹಿಳೆಯರ ಹಕ್ಕು ಅಂತ್ಯವಾಗುವುದಿಲ್ಲ. ನಿಮ್ಮ ದೇಹವು ಯುದ್ಧರಂಗವಲ್ಲ ಮತ್ತು ಅದು ಯುದ್ಧರಂಗದ ಭಾಗ ಎಂದು ಪರಿಗಣಿಸಬಾರದು ಎಂದು ಹೇಳಿದರು.

  ಸುದ್ಧಿಗೋಷ್ಟಿಯಲ್ಲಿ ಉಪಸ್ಥಿತರಿದ್ದು ಉಕ್ರೇನ್ನ ಉಪಪ್ರಧಾನಿ ಓಲ್ಹಾ ಸ್ಟೆಫಾನಿಶಿನಾ, ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಶ್ಯದ ಯೋಧರು ಬಾಲಕರ ಮತ್ತು ಪುರುಷರ ಮೇಲೆಯೂ ಅತ್ಯಾಚಾರ ಎಸಗಿ ಕ್ರೌರ್ಯ ಮೆರೆದಿದ್ದಾರೆ. ಅತ್ಯಾಚಾರವು ಯುದ್ಧದಲ್ಲಿ ಅತ್ಯಂತ ಮೌನರೂಪದ ಅಪರಾಧವಾಗಿದೆ. ಆದ್ದರಿಂದ ಸರಿಯಾದ ಅಂಕಿಅಂಶ ಸಂಗ್ರಹಿಸುವುದು ಕಷ್ಟದ ಕೆಲಸ ಎಂದರು.ಶರಣಾಗುವಂತೆ ಉಕ್ರೇನ್ ಮೇಲೆ ಒತ್ತಡ ಹಾಕಲು ಅವರು (ರಶ್ಯನ್ನರು) ಎಲ್ಲಾ ತಂತ್ರಗಳನ್ನೂ ನಡೆಸುತ್ತಿದ್ದಾರೆ. ನಾಗರಿಕರನ್ನು ಬೆದರಿಸುವುದು ಇದರಲ್ಲಿ ಒಂದು ಅಂಶವಾಗಿದೆ. ಅತ್ಯಾಚಾರವನ್ನು ಉದ್ದೇಶಪೂರ್ವಕವಾಗಿ ತನ್ನ ಕಾರ್ಯಯೋಜನೆಯಲ್ಲಿ ರಶ್ಯ ಸೇರಿಸಿಕೊಂಡಿದೆ ಎಂದು ಉಕ್ರೇನ್ನ ಪ್ರಾಸಿಕ್ಯೂಟರ್ ಜನರಲ್ ಇರಿನಾ ವೆನೆಡಿಕ್ಟೋವ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X