Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ನಲ್ಲಿ ರಶ್ಯದಿಂದ ಮಾತೃಭೂಮಿಯ...

ಉಕ್ರೇನ್ನಲ್ಲಿ ರಶ್ಯದಿಂದ ಮಾತೃಭೂಮಿಯ ರಕ್ಷಣೆ: ಪುಟಿನ್

ವಾರ್ತಾಭಾರತಿವಾರ್ತಾಭಾರತಿ10 May 2022 12:03 AM IST
share
ಉಕ್ರೇನ್ನಲ್ಲಿ ರಶ್ಯದಿಂದ ಮಾತೃಭೂಮಿಯ ರಕ್ಷಣೆ: ಪುಟಿನ್

 ಮಾಸ್ಕೊ, ಮೇ 9: ಉಕ್ರೇನ್ನಲ್ಲಿ ಮಾತೃಭೂಮಿಯ ರಕ್ಷಣೆಯಲ್ಲಿ ನಿರತವಾಗಿರುವ ರಶ್ಯದ ಪಡೆಗಳಿಗೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ಬೆದರಿಕೆ ಎದುರಾಗಿದೆ ಎಂದು ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.

ನಾಝಿ ಜರ್ಮನಿಯ ಎದುರು ಸೋವಿಯತ್ ಒಕ್ಕೂಟದ ಗೆಲುವಿನ ವಾರ್ಷಿಕೋತ್ಸವ ವಿಜಯ ದಿನದ ಅಂಗವಾಗಿ ಮಾಸ್ಕೊದ ರೆಡ್ಸ್ಕ್ವೇರ್ (ಕೆಂಪು ವೃತ್ತ)ನಲ್ಲಿ ನಡೆದ ಸೇನಾ ಕವಾಯತು ಅನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಪುಟಿನ್, ಉಕ್ರೇನ್ನಲ್ಲಿ ರಶ್ಯದ ಸೇನೆ ಮಾತೃಭೂಮಿಯ ರಕ್ಷಣೆಗಾಗಿ ಹೋರಾಡುತ್ತಿದೆ. ಈ ಸಂಘರ್ಷವು 2ನೇ ವಿಶ್ವಯುದ್ಧದ ಮುಂದುವರಿಕೆಯಾಗಿದೆ ಎಂದರು. ಉಕ್ರೇನ್ ವಿರುದ್ಧದ ರಶ್ಯದ ಆಕ್ರಮಣವನ್ನು ಸಮರ್ಥಿಸಿಕೊಂಡ ಅವರು ಸಂಘರ್ಷದ ಸ್ಥಿತಿ ನಿರ್ಮಾಣವಾಗಲು ಉಕ್ರೇನ್ ಮತ್ತು ಪಾಶ್ಚಿಮಾತ್ಯ ದೇಶಗಳು ಕಾರಣ ಎಂದು ದೂಷಿಸಿದರು.

 ಬಳಿಕ ಉಕ್ರೇನ್ನಲ್ಲಿ ಯುದ್ಧದಲ್ಲಿ ತೊಡಗಿರುವ ರಶ್ಯ ಯೋಧರನ್ನು ಉಲ್ಲೇಖಿಸಿ ಮಾತನಾಡಿದ ಅವರು ‘ ನೀವು ಮಾತೃಭೂಮಿಗಾಗಿ, ಅದರ ಭವಿಷ್ಯಕ್ಕಾಗಿ ಹೋರಾಡುತ್ತಿದ್ದೀರಿ. ಈ ಮೂಲಕ 2ನೇ ವಿಶ್ವಯುದ್ಧದ ಪಾಠವನ್ನು ಯಾರೂ ಮರೆಯಬಾರದು ಎಂಬ ಸಂದೇಶ ರವಾನಿಸುತ್ತಿದ್ದೀರಿ ಎಂದರು. ತನ್ನ ಭಾಷಣದಲ್ಲಿ ಹಲವು ಬಾರಿ ಉಕ್ರೇನ್ನ ಆಡಳಿತವನ್ನು ನವ-ನಾಝಿಗಳು ಎಂದು ಉಲ್ಲೇಖಿಸಿದ ಅವರು, ಅಲ್ಲಿ ರಶ್ಯದ ಸೇನೆ ಮಹಾ ದೇಶಭಕ್ತಿಯ ಯುದ್ಧದಲ್ಲಿ ತೊಡಗಿದೆ ಎಂದರು. ಉಕ್ರೇನ್ನಲ್ಲಿ ನಮ್ಮ ಸೇನೆ ವಿಶೇಷ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ ಉಕ್ರೇನ್ ಮತ್ತು ಅದರ ಪಶ್ಚಿಮದ ಮಿತ್ರರಾಷ್ಟ್ರಗಳು ನಮ್ಮ ಐತಿಹಾಸಿಕ ಭೂಮಿಯ ಮೇಲೆ ಆಕ್ರಮಣಕ್ಕೆ ಮುಂದಾಗಿದೆ. ಖಂಡಿತಾ ಸ್ವೀಕಾರಾರ್ಹವಲ್ಲದ ಬೆದರಿಕೆಯನ್ನು ನಮ್ಮ ಗಡಿಯ ಮೇಲೆ ನೇರವಾಗಿ ಒಡ್ಡಲಾಗಿದೆ ಎಂದು ನೇಟೊ ದೇಶಗಳು ಉಕ್ರೇನ್ಗೆ ಶಸ್ತ್ರಾಸ್ತ್ರ ಪೂರೈಸುವುದನ್ನು ಪರೋಕ್ಷವಾಗಿ ಉಲ್ಲೇಖಿಸಿ ಪುಟಿನ್ ಹೇಳಿದರು.
ರಶ್ಯಕ್ಕೆ ಪೂರ್ವಭಾವಿ ಪ್ರತಿಕ್ರಿಯೆ ನೀಡದೆ ಬೇರೆ ಆಯ್ಕೆಯೇ ಇರಲಿಲ್ಲ. ಸಾರ್ವಭೌಮ, ಬಲಿಷ್ಟ ಮತ್ತು ಸ್ವತಂತ್ರ ದೇಶಕ್ಕೆ ಇದು ಸೂಕ್ತ ನಿರ್ಧಾರವಾಗಿತ್ತು. ಸಂಘರ್ಷ ಮುಂದುವರಿಸಿಕೊಂಡು ಹೋಗಲು ರಶ್ಯ ಬಯಸುವುದಿಲ್ಲ. ವಿಶ್ವ ಯುದ್ಧದ ಭೀತಿ ಮತ್ತೆ ಎದುರಾಗದಂತೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡುವುದು ಅಗತ್ಯವಾಗಿದೆ. ಕಾರ್ಯಾಚರಣೆಯಲ್ಲಿ ಮೃತಪಟ್ಟ ಯೋಧರ ಕುಟುಂಬಕ್ಕೆ ಸರಿಪಡಿಸಲಾಗದ ಹಾನಿಯಾಗಿದೆ ಎಂಬ ಅರಿವು ಸರಕಾರಕ್ಕೆ ಇದೆ. ಮೃತ ಯೋಧರ ಕುಟುಂಬಕ್ಕೆ ಸರಕಾರ ಸಂಪೂರ್ಣ ನೆರವು ನೀಡಲಿದೆ ಎಂದವರು ಘೋಷಿಸಿದರು.
 

ವಿಜಯ ದಿನದ 77ನೇ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ರೆಡ್ ಸ್ಕ್ವೇರ್ ನಲ್ಲಿ ನಡೆದ ಸೇನಾ ಪಥಸಂಚಲನದಲ್ಲಿ ಸುಮಾರು 11,000 ಯೋಧರು ಮತ್ತು 130ಕ್ಕೂ ಅಧಿಕ ಸೇನಾ ವಾಹನಗಳು ಪಾಲ್ಗೊಂಡಿದ್ದವು. ವಾಯುಪಡೆಯ ಪ್ರಾತ್ಯಕ್ಷಿಕೆಯನ್ನು ಕೆಟ್ಟ ಹವಾಮಾನದ ಕಾರಣ ರದ್ದುಗೊಳಿಸಲಾಯಿತು. ರಕ್ಷಣಾ ಸಚಿವ ಸೆರ್ಗೈ ಶೊಯಿಗು, ರಶ್ಯ ಭೂಸೇನೆಯ ಮುಖ್ಯ ಕಮಾಂಡರ್ ಒಲೆಗ್ ಸಲ್ಯುಕೊವ್ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X