Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ನಿಂದ ಪತ್ರಕರ್ತೆ ಶಿರೀನ್...

ಇಸ್ರೇಲ್ ನಿಂದ ಪತ್ರಕರ್ತೆ ಶಿರೀನ್ ಉದ್ದೇಶಪೂರ್ವಕ ಹತ್ಯೆ: ತನಿಖಾ ವರದಿ

ವಾರ್ತಾಭಾರತಿವಾರ್ತಾಭಾರತಿ27 May 2022 9:27 PM IST
share
ಇಸ್ರೇಲ್ ನಿಂದ ಪತ್ರಕರ್ತೆ ಶಿರೀನ್ ಉದ್ದೇಶಪೂರ್ವಕ ಹತ್ಯೆ: ತನಿಖಾ ವರದಿ

ರಮಲ್ಲಾ, ಮೇ 27: ಅಲ್ಜಝೀರಾದ ಪತ್ರಕರ್ತೆ ಶಿರೀನ್‌ರನ್ನು ಇಸ್ರೇಲ್ ಪಡೆ ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿರುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೆಲೆಸ್ತೀನ್ ಅಧಿಕಾರಿಗಳು ಗುರುವಾರ ಘೋಷಿಸಿದ್ದಾರೆ.

2 ವಾರದ ಹಿಂದೆ ಪ್ರಕಟಿಸಿದ ಪ್ರಾಥಮಿಕ ತನಿಖಾ ವರದಿಯ ಫಲಿತಾಂಶವನ್ನೇ ಅಂತಿಮ ವರದಿಯೂ ಪ್ರತಿಧ್ವನಿಸಿದೆ. ಆದರೆ ವರದಿಯನ್ನು ತಳ್ಳಿಹಾಕಿರುವ ಇಸ್ರೇಲ್‌ನ ರಕ್ಷಣಾ ಸಚಿವ ಬೆನ್ನಿ ಗಾಂಟ್ಸ್, ಇದು ಮತ್ತೊಂದು ನಿರ್ಲಜ್ಜ ಸುಳ್ಳು ಎಂದಿದ್ದಾರೆ. ಆಕ್ರಮಿತ ಪಶ್ಚಿಮದಂಡೆಯ ಜೆನಿನ್ ನಗರದಲ್ಲಿ ಮೇ 11ರಂದು ಇಸ್ರೇಲ್ ಸೇನೆ ನಡೆಸಿದ ದಾಳಿ ಮತ್ತು ಶೋಧ ಕಾರ್ಯಾಚರಣೆ ಸಂದರ್ಭ ಶಿರೀನ್ ಗುಂಡೇಟಿಗೆ ಬಲಿಯಾಗಿದ್ದರು. ಇಸ್ರೇಲ್ ಸೇನೆಯ ಗುಂಡಿನಿಂದ ಅವರು ಹತರಾಗಿರುವುದಾಗಿ ಪ್ರತ್ಯಕ್ಷದರ್ಶಿಗಳು ಹಾಗೂ ಪೆಲೆಸ್ತೀನ್ ಅಧಿಕಾರಿಗಳು ಹೇಳಿದ್ದರೆ, ಪೆಲೆಸ್ತೀನ್ ಬೆಂಬಲಿತ ಉಗ್ರ ಸಂಘಟನೆಯ ಗುಂಡೇಟಿನಿಂದ ಶಿರೀನ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಪ್ರತಿಪಾದಿಸಿತ್ತು.

ಪಶ್ಚಿಮದಂಡೆಯ ರಮಲ್ಲಾ ನಗರದಲ್ಲಿ ಸುದ್ಧಿಗೋಷ್ಟಿಯಲ್ಲಿ ತನಿಖೆಯ ಫಲಿತಾಂಶ ಘೋಷಿಸಿದ ಪೆಲೆಸ್ತೀನ್‌ನ ಅಟಾರ್ನಿ ಜನರಲ್ ಅಕ್ರಮ್ ಅಲ್ ಖತೀಬ್, ಶಿರೀನ್ ಇದ್ದ ಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಸಂಘಟನೆಯ ಸದಸ್ಯರು ಇರಲಿಲ್ಲ. ಮತ್ತು ಆಕ್ರಮಿತ ಪಡೆ(ಇಸ್ರೇಲ್) ಮಾತ್ರ ಗುಂಡು ಹಾರಿಸಿರುವುದು ದೃಢಪಟ್ಟಿದೆ. ಶಿರೀನ್ ‘ಮಾಧ್ಯಮ’ ಎಂದು ಬರೆದಿದ್ದ ಜಾಕೆಟ್ ತೊಟ್ಟಿದ್ದರು ಹಾಗೂ ಹೆಲ್ಮೆಟ್ ಧರಿಸಿದ್ದರು. ಮಾಧ್ಯಮದ ವರದಿಗಾರ್ತಿ ಎಂದು ತಿಳಿದಿದ್ದರೂ ಇಸ್ರೇಲ್ ಪಡೆ ಅವರತ್ತ ಗುಂಡು ಹಾರಿಸಿದಾಗ ಅವರು ಅಲ್ಲಿಂದ ಓಡಿಹೋಗಲು ಪ್ರಯತ್ನಿಸಿದ್ದಾರೆ. ಆದರೆ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆ, ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮತ್ತು ವಿಧಿವಿಜ್ಞಾನ ವೈದ್ಯಕೀಯ ವರದಿಯ ಆಧಾರದಲ್ಲಿ ತನಿಖೆ ನಡೆದಿದೆ ಎಂದವರು ಹೇಳಿದ್ದಾರೆ.

ಶಿರೀನ್ ದೇಹ ಹೊಕ್ಕಿದ್ದ ಬುಲೆಟ್ ಪ್ರಮುಖ ಸಾಕ್ಷಿಯಾಗಿದೆ. ಆದರೆ ಅದನ್ನು ಪರಿಶೀಲನೆಗೆಂದು ಇಸ್ರೇಲ್‌ಗೆ ಹಸ್ತಾಂತರಿಸುವುದಿಲ್ಲ. ಯಾಕೆಂದರೆ ಅವರು(ಇಸ್ರೇಲ್) ಮತ್ತೊಂದು ಸುಳ್ಳನ್ನು ಸೃಷ್ಟಿಸಬಹುದು ಎಂದು ಅಕ್ರಮ್ ಹೇಳಿದ್ದಾರೆ. ಬುಲೆಟ್ ಯಾರು ಹಾರಿಸಿದ್ದು ಎಂಬುದು ತಿಳಿದಿಲ್ಲ . ಅಲ್ಲಿ ಏನು ನಡೆದಿದೆ ಎಂಬುದನ್ನು ದೃಢಪಡಿಸಿಕೊಳ್ಳಬೇಕಿದ್ದರೆ ಪೆಲೆಸ್ತೀನೀಯರು ತಮ್ಮೊಂದಿಗೆ ಸಹಕರಿಸಬೇಕು. ಒಂದಂತೂ ಸತ್ಯ, ಯಾವುದೇ ಯೋಧ ಪತ್ರಕರ್ತರ ಮೇಲೆ ಗುಂಡು ಹಾರಿಸುವುದಿಲ್ಲ. ನಾವು ಅದನ್ನು ವಿಚಾರಣೆ ನಡೆಸಿ ಅಂತಿಮಗೊಳಿಸಿದ್ದೇವೆ. ಬೇರೇನೂ ಎಲ್ಲ ಎಂದು ಇಸ್ರೇಲ್ ಸೇನೆಯ ಮುಖ್ಯಸ್ಥ ಲೆ.ಜ ಅವೀವ್ ಕೊಹಾವಿ ಹೇಳಿದ್ದಾರೆ. ಅಮೆರಿಕದ ಪಾಲ್ಗೊಳ್ಳುವಿಕೆಯಲ್ಲಿ, ಪೆಲೆಸ್ತೀನ್ ಜತೆ ಜಂಟಿ ತನಿಖೆಗೆ ಸಿದ್ಧ ಎಂದು ಇಸ್ರೇಲ್ ಹೇಳಿದ್ದರೆ, ಜಂಟಿ ತನಿಖೆಯಲ್ಲಿ ವಿಶ್ವಾಸವಿಲ್ಲ ಎಂದು ಪೆಲೆಸ್ತೀನ್ ಪ್ರತಿಕ್ರಿಯಿಸಿದೆ.

ವರದಿಯ ಪ್ರತಿ ಅಮೆರಿಕಕ್ಕೆ

ತನಿಖಾ ವರದಿಯ ಪ್ರತಿಯನ್ನು ಅಮೆರಿಕಕ್ಕೆ ಒದಗಿಸಲಾಗುವುದು ಎಂದು ಆಕ್ರಮಿತ ಪಶ್ಚಿಮ ದಂಡೆಯ ಉನ್ನತ ಪೆಲೆಸ್ತೀನ್ ಅಧಿಕಾರಿ ಹುಸೈನ್ ಅಲ್ ಶೇಖ್ ಹೇಳಿದ್ದಾರೆ. ಅಲ್ಲದೆ ಅಲ್ಜಝೀರಾಕ್ಕೆ, ಶಿರೀನ್ ಅವರ ಕುಟುಂಬಕ್ಕೂ ವರದಿಯ ಪ್ರತಿಯನ್ನು ನೀಡಲಿದ್ದೇವೆ ಎಂದವರು ಹೇಳಿದ್ದಾರೆ.

ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಸಂಘಟನೆಗಳಿಗೂ ವರದಿಯನ್ನು ರವಾನಿಸಲಾಗುವುದು ಎಂದು ಪೆಲೆಸ್ತೀನ್ ಹೇಳಿದೆ. ಇಸ್ರೇಲ್‌ನ ಸಂಭಾವ್ಯ ಯುದ್ಧಾಪರಾಧದ ಬಗ್ಗೆ ಐಸಿಸಿ ಕಳೆದ ವರ್ಷ ವಿಚಾರಣೆ ಆರಂಭಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X