Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: 4 ಕ್ಷಿಪ್ರಕ್ರಾಂತಿ ವಿರೋಧಿ...

ಮ್ಯಾನ್ಮಾರ್: 4 ಕ್ಷಿಪ್ರಕ್ರಾಂತಿ ವಿರೋಧಿ ಹೋರಾಟಗಾರರಿಗೆ ಗಲ್ಲು

ವಾರ್ತಾಭಾರತಿವಾರ್ತಾಭಾರತಿ25 July 2022 10:01 PM IST
share
ಮ್ಯಾನ್ಮಾರ್: 4 ಕ್ಷಿಪ್ರಕ್ರಾಂತಿ ವಿರೋಧಿ ಹೋರಾಟಗಾರರಿಗೆ ಗಲ್ಲು

ಯಾಂಗನ್ (ಮ್ಯಾನ್ಮಾರ್), ಜು. 25: ಮ್ಯಾನ್ಮಾರ್ನ ಸೇನಾ ಸರಕಾರವು ನಾಲ್ವರು ಕ್ಷಿಪ್ರಕ್ರಾಂತಿ ವಿರೋಧಿ ಹೋರಾಟಗಾರರನ್ನು ಗಲ್ಲಿಗೇರಿಸಿದೆ. ದೇಶದ ಮಾಜಿ ನಾಯಕಿ ಹಾಗೂ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂ ಕಿಯ ಆಪ್ತರೊಬ್ಬರೂ ಗಲ್ಲಿಗೇರಿಸಲ್ಪಟ್ಟವರಲ್ಲಿ ಸೇರಿದ್ದಾರೆ.

‘‘ಭೀಕರ ಹಾಗೂ ಅಮಾನವೀಯ ಭಯೋತ್ಪಾದನಾ ಕೃತ್ಯಗಳನ್ನು ಸಂಘಟಿಸಿರುವುದಕ್ಕಾಗಿ ಈ ನಾಲ್ವರು ವ್ಯಕ್ತಿಗಳನ್ನು ಗಲ್ಲಿಗೇರಿಸಲಾಗಿದೆ’’ ಎಂದು ಸರಕಾರಿ ಒಡೆತನದ ಪತ್ರಿಕೆ ‘ಗ್ಲೋಬಲ್ ನ್ಯೂ ಲೈಟ್ ಆಫ್ ಮ್ಯಾನ್ಮಾರ್’ ಸೋಮವಾರ ವರದಿ ಮಾಡಿದೆ.

ಸೀನಿಯರ್ ಜನರಲ್ ಮಿನ್ ಆಂಗ್ ಹಲೈಂಗ್ ನೇತೃತ್ವದಲ್ಲಿ ಮ್ಯಾನ್ಮಾರ್ ಸೇನೆಯು 2021 ಫೆಬ್ರವರಿಯಲ್ಲಿ ಕ್ಷಿಪ್ರಕ್ರಾಂತಿ ನಡೆಸಿ ಚುನಾಯಿತ ಸರಕಾರದಿಂದ ಅಧಿಕಾರವನ್ನು ವಹಿಸಿಕೊಂಡಿತ್ತು.

ಸೇನೆಯ ವಿರುದ್ಧ ಹೋರಾಡಲು ಮಿಲಿಶಿಯಗಳಿಗೆ ನೆರವು ನೀಡಿದ್ದಾರೆ ಎಂಬ ಆರೋಪವನ್ನು ಈ ನಾಲ್ವರ ವಿರುದ್ಧ ಹೊರಿಸಲಾಗಿತ್ತು. ಜನವರಿಯಲ್ಲಿ ಅವರ ರಹಸ್ಯ ವಿಚಾರಣೆ ನಡೆದು ಮರಣ ದಂಡನೆ ವಿಧಿಸಲಾಗಿತ್ತು. ಇದರೊಂದಿಗೆ, ಮ್ಯಾನ್ಮಾರ್ನಲ್ಲಿ ದಶಕಗಳಲ್ಲೇ ಮೊದಲ ಬಾರಿಗೆ ಮರಣ ದಂಡನೆಯನ್ನು ಜಾರಿಗೊಳಿಸಿದಂತಾಗಿದೆ. ದೇಶದ ಕೊನೆಯ ಮರಣ ದಂಡನೆಗಳು 1980ರ ದಶಕದ ಕೊನೆಯಲ್ಲಿ ಜಾರಿಯಾಗಿದ್ದವು ಎಂದು ರಾಜಕೀಯ ಕೈದಿಗಳ ಸಂಘ ತಿಳಿಸಿದೆ.

‘ಕ್ರೌರ್ಯದ ಪರಮಾವಧಿ’

ಪ್ರಜಾಪ್ರಭುತ್ವ ಮತ್ತು ಮಾನವಹಕ್ಕುಗಳಿಗೆ ಸೋಮವಾರ ‘ಕರಾಳ ದಿನ’ವಾಗಿದೆ ಎಂದು ಮ್ಯಾನ್ಮಾರ್ ನ ದೇಶಭ್ರಷ್ಟ ರಾಷ್ಟ್ರೀಯ ಏಕತಾ ಸರಕಾರದ ವಕ್ತಾರ ಡಾ. ಸಾಸ ಹೇಳಿದ್ದಾರೆ.

‘‘ಭಯೋತ್ಪಾದನೆಯ ಈ ಕೃತ್ಯಗಳಿಂದ ನಾವು ಸರ್ವನಾಶವಾಗಿದ್ದೇವೆ’’ ಎಂದು ‘ಅಲ್ ಜಝೀರ’ದೊಂದಿಗೆ ಮಾತನಾಡಿದ ಅವರು ಹೇಳಿದರು. ‘‘ಮ್ಯಾನ್ಮಾರ್ನ ಸೇನಾ ಜನರಲ್ಗಳು ಅವರ ದೇಹಗಳನ್ನು ನಾಶಪಡಿಸಬಹುದು, ಆದರೆ ಪ್ರಜಾಪ್ರಭುತ್ವದ ಈ ಹುತಾತ್ಮರ ಚಿಂತನೆಗಳನ್ನು ನಾಶಪಡಿಸಲು ಅವರಿಗೆ ಸಾಧ್ಯವಿಲ್ಲ’’ ಎಂದು ಅವರು ಹೇಳಿದರು.

‘‘ಪ್ರಜಾಪ್ರಭುತ್ವ ಹೋರಾಟಗಾರರ ಮರಣ ದಂಡನೆಯಿಂದ ನಾನು ಆಕ್ರೋಶಿತನಾಗಿದ್ದೇನೆ ಮತ್ತು ಕುಂದಿ ಹೋಗಿದ್ದೇನೆ. ಈ ಅನಾಗರಿಕ ಕೃತ್ಯಗಳು ಅಂತರ್ರಾಷ್ಟ್ರೀಯ ಸಮುದಾಯಕ್ಕೆ ಎಚ್ಚರಿಕೆಯ ಕರೆಗಂಟೆಯಾಗಬೇಕು’’ ಎಂದು ಮ್ಯಾನ್ಮಾರ್ನಲ್ಲಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಶೇಷ ಸಮನ್ವಯಕಾರ ಥಾಮಸ್ ಆ್ಯಂಡ್ರೂಸ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X