Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಧಾನ ಮಾತುಕತೆ ಯಶಸ್ವಿ: ಗಾಝಾದಲ್ಲಿ ಕದನ...

ಸಂಧಾನ ಮಾತುಕತೆ ಯಶಸ್ವಿ: ಗಾಝಾದಲ್ಲಿ ಕದನ ವಿರಾಮಕ್ಕೆ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ8 Aug 2022 10:03 PM IST
share
ಸಂಧಾನ ಮಾತುಕತೆ ಯಶಸ್ವಿ: ಗಾಝಾದಲ್ಲಿ ಕದನ ವಿರಾಮಕ್ಕೆ ಒಪ್ಪಿಗೆ

ಜೆರುಸಲೇಂ, ಆ.8: ಗಾಝಾ ಪಟ್ಟಿಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಸಂಷರ್ಘಕ್ಕೆ ಅಂತ್ಯಹಾಡಲು ಈಜಿಪ್ಟ್ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು ಕದನ ವಿರಾಮಕ್ಕೆ ಇಸ್ರೇಲ್ ಮತ್ತು ಪೆಲೆಸ್ತೀನ್ ಹೋರಾಟಗಾರರು ಸಮ್ಮತಿಸಿದ್ದಾರೆ ಎಂದು ವರದಿಯಾಗಿದೆ.

ಇದರೊಂದಿಗೆ ಗಾಝಾ ಗಡಿಯಲ್ಲಿ ಕಳೆದ ಒಂದು ವರ್ಷದಲ್ಲಿ ತಲೆದೋರಿದ ಅತ್ಯಂತ ಗಂಭೀರವಾದ ಉದ್ವಿಗ್ನತೆ ಶಮನಗೊಳ್ಳುವ ಎಲ್ಲಾ ಸಾಧ್ಯತೆಗಳೂ ಗೋಚರಿಸಿವೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಗಾಝಾ ಗಡಿಭಾಗದಲ್ಲಿ ಸುಮಾರು 3 ದಿನ ನಡೆದ ಘರ್ಷಣೆ, ಹಿಂಸಾಚಾರದಲ್ಲಿ ಪೆಲೆಸ್ತೀನ್ನ ಕನಿಷ್ಟ 44 ಮಂದಿ(ಇದರಲ್ಲಿ ಅರ್ಧದಷ್ಟು ನಾಗರಿಕರು ಮತ್ತು ಮಕ್ಕಳು) ಮೃತಪಟ್ಟಿದ್ದು 311 ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲ್ಗೂ ವ್ಯಾಪಕ ನಾಶ-ನಷ್ಟವಾಗಿದ್ದು ಗಾಝಾ ಪ್ರದೇಶದಿಂದ ಹಾರಿಬಂದ ಕ್ಷಿಪಣಿಗಳು ಇಸ್ರೇಲ್ನ ನಾಗರಿಕರಲ್ಲಿ ಭೀತಿ ಹುಟ್ಟಿಸಿದ್ದು ಟೆಲ್ಅವೀವ್ ಮತ್ತು ಅಶ್ಕೆಲಾನ್ ಸೇರಿದಂತೆ ಹಲವು ನಗರಗಳಲ್ಲಿನ ನಿವಾಸಿಗಳನ್ನು ಆಶ್ರಯತಾಣಕ್ಕೆ ರವಾನಿಸಲಾಗಿದೆ ಎಂದು ಗಾಝಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಸ್ರೇಲ್ ಮತ್ತು ಪೆಲೆಸ್ತೀನ್ ಹೋರಾಟಗಾರರು ಪ್ರತ್ಯೇಕ ಹೇಳಿಕೆಗಳಲ್ಲಿ ಕದನ ವಿರಾಮವನ್ನು ಘೋಷಿಸಿದ್ದು ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಈಜಿಪ್ಟ್ ಧನ್ಯವಾದ ಅರ್ಪಿಸಿದ್ದಾರೆ. ರವಿವಾರ ರಾತ್ರಿಯಿಂದ ಕದನ ವಿರಾಮ ಜಾರಿಗೆ ಬಂದಿರುವುದಾಗಿ ಹೇಳಿಕೆ ತಿಳಿಸಿದೆ. ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಮುಖಂಡ ಝಿಯಾದ್ ಅಲ್-ನಖಾಲ, ಇಸ್ರೇಲ್ ವಶದಲ್ಲಿರುವ ಅಲ್ಸಾದಿಯ ಸುರಕ್ಷಿತ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಈಜಿಪ್ಟ್ ವಾಗ್ದಾನ ನೀಡಿದೆ ಎಂದು ಹೇಳಿದ್ದಾರೆ.

 ಮೂರು ದಿನ ನಡೆದಿದ್ದ ಘರ್ಷಣೆ, ಈ ಹಿಂದಿನಂತೆ ಗಾಝಾ ಯುದ್ಧಕ್ಕೆ ಮುನ್ನುಡಿ ಬರೆಯಲಿದೆ ಎಂಬ ಆತಂಕವಿತ್ತು. ಆದರೆ ಈ ಬಾರಿಯ ಸಂಘರ್ಷದಲ್ಲಿ ಪೆಲೆಸ್ತೀನ್ ಹೋರಾಟಗಾರರು ಮಾತ್ರ ಪಾಲ್ಗೊಂಡಿದ್ದು, ಗಾಝಾ ಪಟ್ಟಿಯಲ್ಲಿ ಆಡಳಿತ ನಡೆಸುತ್ತಿರುವ ಹಮಾಸ್ ಸಂಘಟನೆ ಇದರಿಂದ ದೂರ ಉಳಿದಿತ್ತು. ಆಕ್ರಮಿತ ಪಶ್ಚಿಮದಂಡೆಯಲ್ಲಿ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಮುಖ್ಯಸ್ಥ ಬಸಾಮ್ ಅಲ್ಸಾದಿಯನ್ನು ಇಸ್ರೇಲ್ ಸೇನೆ ಬಂಧಿಸಿದ ಬಳಿಕ ಸಂಘಟನೆ ಪ್ರತೀಕಾರಕ್ಕೆ ಮುಂದಾಗಬಹುದು ಎಂಬ ಕಾರಣಕ್ಕೆ ಇಸ್ರೇಲ್ ಸೇನೆ ಆ ಪ್ರದೇಶದಲ್ಲಿ ಪೂರ್ವಭಾವಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು.

ಇದನ್ನು ವಿರೋಧಿಸಿದ್ದ ಸಂಘಟನೆ ಇಸ್ರೇಲ್ ನತ್ತ ಕ್ಷಿಪಣಿಗಳ ಸುರಿಮಳೆ ನಡೆಸಿತ್ತು. ಬಳಿಕ ಇಸ್ರೇಲ್ನಿಂದ ತೀವ್ರ ವಾಯುದಾಳಿ ಆರಂಭವಾಗಿತ್ತು. ಈ ಮಧ್ಯೆ, ಇಸ್ರೇಲ್- ಪೆಲೆಸ್ತೀನ್ ಹೋರಾಟಗಾರರ ಮಧ್ಯೆ ಕದನ ವಿರಾಮಕ್ಕಾಗಿ ಈಜಿಪ್ಟ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಯುತ್ತಿರುವಂತೆಯೇ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ರವಿವಾರ ಮತ್ತೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ 5 ಮಂದಿ ಮೃತಪಟ್ಟಿರುವುದಾಗಿ ಪೆಲೆಸ್ತೀನ್ ಆರೋಗ್ಯ ಇಲಾಖೆ ಹೇಳಿದೆ.

ಕದನವಿರಾಮಕ್ಕೆ ಸ್ವಾಗತ: ಬೈಡನ್

 ಇಸ್ರೇಲ್ ಹಾಗೂ ಪೆಲೆಸ್ತೀನ್ ಹೋರಾಟಗಾರರ ಮಧ್ಯೆ ಗಾಝಾದಲ್ಲಿ ಕದನ ವಿರಾಮ ಏರ್ಪಟ್ಟಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರತಿಕ್ರಿಯಿಸಿದ್ದಾರೆ. ಬಿಕ್ಕಟ್ಟು ಪರಿಹಾರಗೊಂಡು ಶಾಂತಿ ನೆಲೆಸುವಂತಾಗಲು ಅಮೆರಿಕವು ಇಸ್ರೇಲ್ ಸರಕಾರ, ಪೆಲೆಸ್ತೀನ್ ಅಥಾರಿಟಿ(ಪಿಎ) ಹಾಗೂ ಈ ವಲಯದ ವಿವಿಧ ದೇಶಗಳೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸಿದೆ.

ಇದೀಗ ಕದನವಿರಾಮವನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸಬೇಕಾಗಿದೆ. ಸಂಘರ್ಷ ಕಡಿಮೆಯಾಗುತ್ತಿದ್ದಂತೆ ಆ ಪ್ರದೇಶಕ್ಕೆ ಇಂಧನ ಹಾಗೂ ಇತರ ಮಾನವೀಯ ನೆರವಿನ ಉಪಕ್ರಮಗಳ ಸಮರ್ಪಕ ಪೂರೈಕೆಯನ್ನು ಖಚಿತಪಡಿಸಬೇಕಿದೆ . ಜತೆಗೆ, ಸಂಘರ್ಷದಲ್ಲಿ ಆಗಿರುವ ನಾಗರಿಕ ಸಾವುನೋವುಗಳ ಬಗ್ಗೆ ತನಿಖೆ ನಡೆಯಬೇಕು ಎಂದು ಬೈಡನ್ ಹೇಳಿದ್ದಾರೆ. ಈ ಮಧ್ಯೆ, ಒಂದು ವೇಳೆ ಪೆಲೆಸ್ತೀನ್ ಕಡೆಯಿಂದ ಕದನ ವಿರಾಮದ ಉಲ್ಲಂಘನೆಯಾದರೆ ಅತ್ಯಂತ ಕಠಿಣ ಪ್ರತ್ಯುತ್ತರ ನೀಡಲಾಗುವುದು ಎಂದು ಇಸ್ರೇಲ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X