-

ಚೀನಾದಲ್ಲಿ ಅಲ್ಪಸಂಖ್ಯಾತರನ್ನು ಜೀತದಾಳುಗಳಂತೆ ದುಡಿಸುವುದು ಮಾನವೀಯತೆ ವಿರುದ್ಧದ ಅಪರಾಧ: ವಿಶ್ವಸಂಸ್ಥೆ ಟೀಕೆ

-

ಜಿನೆವಾ, ಆ.17: ಚೀನಾದ ಕ್ಸಿನ್ಜಿಯಾಂಗ್ ಪ್ರಾಂತದಲ್ಲಿ ಅಲ್ಪಸಂಖ್ಯಾತರನ್ನು ಕೃಷಿ, ಕೈಗಾರಿಕೆ ಕ್ಷೇತ್ರಗಳಲ್ಲಿ ಜೀತದಾಳುಗಳಂತೆ ದುಡಿಸಿಕೊಳ್ಳುವ ಬಗ್ಗೆ ವಿಶ್ವಸಂಸ್ಥೆಯ ಸ್ವತಂತ್ರ ತಜ್ಞರ ವರದಿಯಲ್ಲಿ ಉಲ್ಲೇಖಿಸಿದ್ದು ಇದು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ ಎಂದು ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಟೀಕಿಸಿದ್ದಾರೆ.

ಕ್ಸಿನ್ಜಿಯಾಂಗ್ ಪ್ರಾಂತದಲ್ಲಿ ಚೀನಾದ ಅಧಿಕಾರಿಗಳು 1 ಮಿಲಿಯನ್ಗೂ ಅಧಿಕ ಉಯಿಗರ್ ಹಾಗೂ ಇತರ ಅಲ್ಪಸಂಖ್ಯಾತ ಮುಸ್ಲಿಮರನ್ನು ಬಂಧನಲ್ಲಿರಿಸಿದ ಹಾಗೂ ಮಹಿಳೆಯರ ಸಂತಾನಶಕ್ತಿ ಹರಣ ಮಾಡಿರುವ ಬಗ್ಗೆ ಆರೋಪವಿದೆ. ಚೀನಾವು ಅಲ್ಪಸಂಖ್ಯಾತರ ಜನಾಂಗೀಯ ಹತ್ಯೆ ನಡೆಸಿದೆ ಎಂದು ಅಮೆರಿಕ ಹಾಗೂ ಇತರ ಪಾಶ್ಚಿಮಾತ್ಯ ದೇಶಗಳು ಆರೋಪಿಸಿವೆ. ಆದರೆ ಚೀನಾ ಇದನ್ನು ನಿರಾಕರಿಸಿದೆ.

ಆಧುನಿಕ ಗುಲಾಮಗಿರಿ ಪ್ರಕರಣಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಟೊಮೊಯಾ ಒಬೊಕಟ ಮಂಗಳವಾರ ಬಿಡುಗಡೆಗೊಳಿಸಿರುವ ವರದಿಯಲ್ಲಿ ಚೀನಾದಲ್ಲಿ ಜೀತಕಾರ್ಮಿಕ ವ್ಯವಸ್ಥೆ ನಡೆದಿರುವ ಸರಕಾರ ನಿರ್ದೇಶಿತ 2 ವಿಭಿನ್ನ ವ್ಯವಸ್ಥೆಗಳನ್ನು ಬೆಟ್ಟು ಮಾಡಿದ್ದು ಇದಕ್ಕೆ ಪೂರಕವಾಗಿ ಚಿಂತಕರ, ಎನ್ಜಿಒ ಸಂಸ್ಥೆಗಳ ಹಾಗೂ ಸಂತ್ರಸ್ತರ ಹೇಳಿಕೆ ಮತ್ತು ವರದಿಯನ್ನೂ ಒದಗಿಸಿದೆ.

ಇದರಲ್ಲಿ ಮೊದಲನೆಯದು ವೃತ್ತಿಪರ ಕೌಶಲ್ಯ ಶಿಕ್ಷಣ ಮತ್ತು ತರಬೇತಿ ಕೇಂದ್ರದ ವ್ಯವಸ್ಥೆಯಾಗಿದ್ದು ಇದರಲ್ಲಿ ಅಲ್ಪಸಂಖ್ಯಾತರನ್ನು ಕೆಲಸದ ನಿಯೋಜನೆಗೆ ಒಳಪಟ್ಟು ವಶಕ್ಕೆ ಪಡೆಯಲಾಗುತ್ತದೆ. ಮತ್ತೊಂದು ಕಾರ್ಮಿಕ ವರ್ಗಾವಣೆಯ ಮೂಲಕ ಬಡತನವನ್ನು ಕಡಿಮೆ ಮಾಡುವ ಪ್ರಯತ್ನ. ಇದರಲ್ಲಿ ಗ್ರಾಮೀಣ ಕಾರ್ಮಿಕರನ್ನು ದ್ವಿತೀಯ ಅಥವಾ ತೃತೀಯ ಕೆಲಸಕ್ಕೆ ವರ್ಗಾಯಿಸಲಾಗುತ್ತದೆ. ಈ ಕಾರ್ಯಕ್ರಮಗಳು ಅಲ್ಪಸಂಖ್ಯಾತರಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸಿ ಅವರ ಆದಾಯವನ್ನು ಹೆಚ್ಚಿಸುವ ಸಾಧ್ಯತೆಯಿದ್ದರೂ, ಪೀಡಿತ ಸಮುದಾಯ ನಿರ್ವಹಿಸಿದ ಕೆಲಸದ ಅನೈಚ್ಛಿಕ ಸ್ವರೂಪವು ಬಲವಂತದ ದುಡಿಮೆಯ ಸೂಚಕಗಳಂತೆ ಹಲವು ಬಾರಿ ಕಂಡುಬಂದಿದೆ ಎಂದು ವಿಶೇಷ ಪ್ರತಿನಿಧಿ ಪರಿಗಣಿಸಿದ್ದಾರೆ’ ಎಂದು ವರದಿ ಹೇಳಿದೆ.

ಕಾರ್ಮಿಕರ ಮೇಲೆ ಪ್ರಯೋಗಿಸಿದ ಅಧಿಕಾರದ ಸ್ವರೂಪ ಮತ್ತು ಪ್ರಮಾಣವು(ಅವರ ಕೆಲಸದ ಮೇಲೆ ಮಿತಿಮೀರಿದ ನಿಗಾ ಇಡುವುದು, ನಿಂದನೆ ಮತ್ತು ಕೆಲಸದ ಪರಿಸ್ಥಿತಿ) ಮನುಷ್ಯತ್ವದ ವಿರುದ್ಧದ ಅಪರಾಧವಾಗಿ ಗುಲಾಮಗಿರಿಗೆ ಕಾರಣವಾಗಬಹುದು. ಈ ವಿಷಯದಲ್ಲಿ ಇನ್ನಷ್ಟು ಸ್ವತಂತ್ರ ವಿಶ್ಲೇಷಣೆಯ ಅಗತ್ಯವಿದೆ . ಇದೇ ರೀತಿಯ ಕಾರ್ಮಿಕ ವರ್ಗಾವಣೆ ಟಿಬೆಟ್ನಲ್ಲೂ ಇದೆ. ಇಲ್ಲಿ ರೈತರು, ಕುರಿಗಾಹಿಗಳು ಹಾಗೂ ಇತರ ಗ್ರಾಮೀಣ ಕಾರ್ಮಿಕರನ್ನು ಕಡಿಮೆ ಕೌಶಲ್ಯದ ಮತ್ತು ಕಡಿಮೆ ಸಂಬಳದ ಕೆಲಸಕ್ಕೆ ವರ್ಗಾಯಿಸಲಾಗಿದೆ ಎಂದು ವರದಿ ಹೇಳಿದೆ.

ಉಗ್ರವಾದವನ್ನು ಎದುರಿಸಲು ವಿನ್ಯಾಸಗೊಳಿಸಿರುವ ವೃತ್ತಿಪರ ತರಬೇತಿ ಕೇಂದ್ರಗಳನ್ನು ಕ್ಸಿಯಾನ್ಜಿಂಗ್ನಲ್ಲಿ ನಡೆಸಲಾಗುತ್ತಿದೆ ಎಂದು ಚೀನಾ ಪ್ರತಿಪಾದಿಸುತ್ತಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top