Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ ಗ್ರೀಸ್ ಅರ್ಥವ್ಯವಸ್ಥೆಯ ಮೇಲಿನ...

​ ಗ್ರೀಸ್ ಅರ್ಥವ್ಯವಸ್ಥೆಯ ಮೇಲಿನ ಯುರೋಪಿಯನ್‌ ಯೂನಿಯನ್ ನಿಗಾ ವ್ಯವಸ್ಥೆ ಅಂತ್ಯ‌

ವಾರ್ತಾಭಾರತಿವಾರ್ತಾಭಾರತಿ20 Aug 2022 10:15 PM IST
share

ಅಥೆನ್ಸ್, ಆ.20: ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ಗ್ರೀಸ್ ದೇಶಕ್ಕೆ ಆರ್ಥಿಕ ನೆರವು ಮುಂದುವರಿಸುವಾಗ ಯುರೋಪಿಯನ್ ಯೂನಿಯನ್(ಇಯು) ಒಡ್ಡಿದ್ದ ಅರ್ಥವ್ಯವಸ್ಥೆಯ ಮೇಲಿನ ನಿಗಾ ವ್ಯವಸ್ಥೆಯ ಷರತ್ತು 12 ವರ್ಷದ ಬಳಿಕ ಅಂತ್ಯಗೊಂಡಿದೆ ಎಂದು ವರದಿಯಾಗಿದೆ. ತನ್ನ ಬಜೆಟ್ ಕೊರತೆಯಲ್ಲಿ ತೀವ್ರ ಹೆಚ್ಚಳವಾಗಿರುವುದನ್ನು 2009ರ ನವೆಂಬರ್ನಲ್ಲಿ ಗ್ರೀಸ್ ಬಹಿರಂಗಪಡಿಸಿತ್ತು ಮತ್ತು ಇದು ಯುರೋ ವಲಯದಾದ್ಯಂತ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು ಮತ್ತು ದಶಕಗಳ ಕಾಲ ಗ್ರೀಕ್ ಅರ್ಥವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿತ್ತು. ಆರ್ಥಿಕತೆ 25%ಕ್ಕೂ ಅಧಿಕ ಕುಸಿತ ಕಂಡಿದ್ದರೆ ನಿರುದ್ಯೋಗ ಸುಮಾರು 28% ಹೆಚ್ಚಿತ್ತು ಮತ್ತು ನುರಿತ ವೃತ್ತಿಪರರು ಸಾಮೂಹಿಕವಾಗಿ ವಲಸೆ ಹೋದರು.

ಗ್ರೀಸ್ ಪಾವತಿಸಬೇಕಿದ್ದ 289 ಶತಕೋಟಿ ಯುರೋ ಮೊತ್ತದ ಸಾಲದ ಪಾವತಿಯನ್ನು ಮುಂದೂಡಲು ಮತ್ತು ಯುರೋ ವಲಯದಿಂದ ಗ್ರೀಸ್ ಹೊರಬೀಳದಂತೆ ತಡೆಯುವ ನಿಟ್ಟಿನಲ್ಲಿ ಅಂತರಾಷ್ಟೀಯ ಹಣಕಾಸು ಸಂಸ್ಥೆ(ಐಎಂಎಫ್), ಯುರೋಪಿಯನ್ ಯೂನಿಯನ್ ಮತ್ತು ಯುರೋಪಿಯನ್ ಯೂನಿಯನ್ ಸೆಂಟ್ರಲ್ ಬ್ಯಾಂಕ್ ರೂಪಿಸಿದ ವ್ಯವಸ್ಥೆಯು ಗ್ರೀಸ್ನಲ್ಲಿ ವ್ಯಾಪಕ ಆರ್ಥಿಕ ಸುಧಾರಣೆಗೆ ಸೂಚಿಸಿತ್ತು.

ಸರಕಾರಿ ಖರ್ಚು ವೆಚ್ಚದ ಮೇಲೆ ನಿಯಂತ್ರಣ, ವೇತನ ಕಡಿತ, ತೆರಿಗೆ ಹೆಚ್ಚಳ, ಖಾಸಗೀಕರಣ ಸೇರಿದಂತೆ ಹಲವು ವ್ಯಾಪಕ ಸುಧಾರಣಾ ಕ್ರಮ ಇದರಲ್ಲಿ ಸೇರಿದೆ. ಹೀಗೆ ಗ್ರೀಸ್ ದೇಶದ ಅರ್ಥವ್ಯವಸ್ಥೆ ಚೇತರಿಸಿಕೊಳ್ಳಲು ಅದನ್ನು ಯುರೋಪಿಯನ್ ಯೂನಿಯನ್ನ ನಿಗಾ ವ್ಯವಸ್ಥೆಯಡಿ ತರಲಾಯಿತು. ನಾಗರಿಕರಿಗೆ ನೋವು ತಂದ, ಆರ್ಥಿಕತೆಯನ್ನು ನಿಶ್ಚಲಗೊಳಿಸಿದ ಮತ್ತು ಸಮಾಜವನ್ನು ವಿಭಜಿಸಿದ 12 ವರ್ಷಗಳ ಆವರ್ತವು ಮುಗಿದಿದೆ ಎಂದು ಪ್ರಧಾನಿ ಕಿರಿಯಾಕೋಸ್ ಮಿತ್ಸೊಟಕಿಸ್ ಹೇಳಿದ್ದಾರೆ.

ಇಂದಿನ ಗ್ರೀಸ್ ವಿಭಿನ್ನ ಗ್ರೀಸ್ ಆಗಿದೆ. ಪ್ರಗತಿ, ಏಕತೆ ಮತ್ತು ಸಮೃದ್ಧಿಯಿಂದ ಕೂಡಿದ ಹೊಸ ದಿಗಂತವು ನಮ್ಮೆಲ್ಲರಿಗೆ ಹೊರಹೊಮ್ಮಲಿದೆ. ನಾವು ಸಶಕ್ತ ಬೆಳವಣಿಗೆಯನ್ನು ದಾಖಲಿಸಿದ್ದೇವೆ ಮತ್ತು ನಿರುದ್ಯೋಗ ಪ್ರಮಾಣದಲ್ಲಿ ಕಳೆದ ವರ್ಷದಿಂದ 3%, 2019ರಿಂದ 5% ಕುಸಿತ ದಾಖಲಾಗಿದೆ ಎಂದವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X