Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ...

​ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಒಪ್ಪಂದ ಮಾಡಿಕೊಂಡಿದ್ದ ಕೈಲಾಸ

ನಿತ್ಯಾನಂದನ ಕಾಲ್ಪನಿಕ ದೇಶದ ಜೊತೆಗಿನ ಸಹೋದರಿ ನಗರ ಒಪ್ಪಂದ ರದ್ದುಪಡಿಸಿದ ನೆವಾರ್ಕ್ ನಗರ

18 March 2023 10:51 PM IST
share
​ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಒಪ್ಪಂದ ಮಾಡಿಕೊಂಡಿದ್ದ ಕೈಲಾಸ
ನಿತ್ಯಾನಂದನ ಕಾಲ್ಪನಿಕ ದೇಶದ ಜೊತೆಗಿನ ಸಹೋದರಿ ನಗರ ಒಪ್ಪಂದ ರದ್ದುಪಡಿಸಿದ ನೆವಾರ್ಕ್ ನಗರ

ನ್ಯೂಯಾರ್ಕ್,ಮಾ.18; ತಲೆಮರೆಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ವು ಈವರೆಗೆ ಅಮೆರಿಕದ 30 ನಗರಗಳ ಜೊತೆ ಸಾಂಸ್ಕೃತಿಕ ಪಾಲುದಾರಿಕೆಯ ಒಪ್ಪಂದಕ್ಕೆ ಸಹಿಹಾಕಿರುವುದಾಗಿ ಫಾಕ್ಸ್ ಸುದ್ದಿಸಂಸ್ಥೆಯ ವರದಿಯೊಂದು ತಿಳಿಸಿದೆ. ಕಾಲ್ಪನಿಕ ‘ಕೈಲಾಸ’ ದೇಶದ ಜೊತೆಗೆ ತಾನು ಏರ್ಪಡಿಸಿಕೊಂಡಿದ್ದ ‘ಸಹೋದರಿ ನಗ’ ಒಪ್ಪಂವನ್ನು ರದ್ದುಪಡಿಸಿರುವುದಾಗಿ ಅಮೆರಿಕದ ನ್ಯೂಜೆರ್ಸಿ ರಾಜ್ಯದ ನೆವಾರ್ಕ್ ನಗರ ಘೋಷಿಸಿದ ಕೆಲವು ದಿನಗಳ ಬಳಿಕ ಈ ವರದಿ ಪ್ರಕಟವಾಗಿದೆ.

ನೆವಾರ್ಕ್ ನಗರ ಹಾಗೂ ನಕಲಿ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ದ ನಡುವೆ ಈ ವರ್ಷದ ಜನವರಿ 12ರಂದು ಸಹೋದರಿ ನಗರ ಒಪ್ಪಂದ ಏರ್ಪಟ್ಟಿತ್ತು. ನೆವಾರ್ಕ್ನ ಸಿಟಿ ಹಾಲ್ ನಲ್ಲಿ ಸಹಿ ಸಮಾರಂಭ ನಡೆದಿತ್ತು.

ನಿತ್ಯಾನಂದನ ಕಾಲ್ಪನಿಕ ರಾಷ್ಟ್ರ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಜೊತೆ 30ಕ್ಕೂ ಅಧಿಕ ನಗರಗಳು ಸಾಂಸ್ಕೃತಿಕ ಪಾಲುದಾರಿಕೆಯ ಒಪ್ಪಂದಕ್ಕೆ ಸಹಿಹಾಕಿವೆ. ಅಮೆರಿಕದ ರಿಚ್ಮಂಡ್, ವರ್ಜಿನಿಯಾ, ಡೇಟನ್, ಬುಯೆನಾ ಪಾರ್ಕ್, ಫ್ಲೊರಿಡಾಗಳು ‘ಕೈಲಾಸ’ದ ಜೊತೆ ಒಪ್ಪಂದಕ್ಕೆ ಸಹಿಹಾಕಿರುವ ನಗರಗಳಲ್ಲಿ ಸೇರಿವೆ ಎಂದು ವರದಿ ಹೇಳಿದೆ.

ಮೇಯರ್ ಗಳು ಅಥವಾ ನಗರ ಮಂಡಳಿಗಳು ಮಾತ್ರವಲ್ಲದೆ ಅಮೆರಿಕದ ಫೆಡರಲ್ ಸರಕಾರವನ್ನು ನಡೆಸುತ್ತಿರುವ ವ್ಯಕ್ತಿಗಳು ಕೂಡಾ ನಿತ್ಯಾನಂದನ ನಕಲಿ ರಾಷ್ಟ್ರಕ್ಕೆ ಮರುಳಾಗಿದ್ದಾರೆ ಎಂದು ವರದಿ ಹೇಳಿದೆ. ಅಮೆರಿಕದ ಕಾಂಗ್ರೆಸ್ನ ಇಬ್ಬರು ಸದಸ್ಯರು ಕೈಲಾಸಕ್ಕೆ ವಿಶೇಷ ಮಾನ್ಯತೆಯನ್ನು ನೀಡಿದ್ದಾರೆ. ಅಎರಿಕ ಕಾಂಗ್ರೆಸ್ನ ವಿನಿಯೋಗ ಸಮಿತಿಯ ಸದಸ್ಯೆಯೂ ಆಗಿರುವ ಕ್ಯಾಲಿಫೋರ್ನಿಯಾದ ಕಾಂಗ್ರೆಸ್ ಸದಸ್ಯೆ ನೊರ್ಮಾ ಟೊರೆಸ್ ಅವರಲ್ಲೊಬ್ಬರು ಎಂದು ವರದಿ ತಿಳಿಸಿದೆ.

‘‘ಹೀಗೆ ನಮ್ಮ ತೆರಿಗೆಯ ಹಣವನ್ನು ಹೇಗೆ ವಿನಿಯೋಗಿಸಬೇಕೆಂಬುದನ್ನು ನಿರ್ಧರಿಸುವ ವ್ಯಕ್ತಿಯು, ನಕಲಿ ರಾಷ್ಟ್ರವೊಂದರ, ಅತ್ಯಾಚಾರ ಆರೋಪಿ ಗುರುವಿನಿಂದ ಮೋಸ ಹೋಗಿದ್ದಾರೆ’’ ಫಾಕ್ಸ್ ಸುದ್ದಿವಾಹಿನಿಯ ನಿರೂಪಕರೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ನೆವಾರ್ಕ್ ನಗರದ ಸಂವಹನದ ಪತ್ರಿಕಾ ಕಾರ್ಯದರ್ಶಿ ಸುಸಾನ್ ಗಾರೊಫಾಲೊ ಪಿಟಿಐ ಸುದ್ದಿಸಂಸ್ಥೆಯ ಜೊತೆ ಮಾತನಾಡುತ್ತಾ, ‘‘ ಕೈಲಾಸವನ್ನು ಆವರಿಸಿಕೊಂಡಿರುವ ವಿವಾದಗಳ ಬಗ್ಗೆ ನಮಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನೆವಾರ್ಕ್ ನಗರವು ತಕ್ಷಣವೇ ಕಾರ್ಯಪ್ರವೃತ್ತಿವಾಗಿದ್ದು,, ಸಹೋದರಿ ನಗರ ಒಪ್ಪಂದವನ್ನು ರದ್ದುಗೊಳಿಸಿದೆ ಎಂದು ಹೇಳಿದ್ದಾರೆ.

share
Next Story
X