Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂದೋರ್‌ ದೇವಾಲಯ ದುರಂತ: ಉಪವಾಸದ ನಡುವೆ...

ಇಂದೋರ್‌ ದೇವಾಲಯ ದುರಂತ: ಉಪವಾಸದ ನಡುವೆ ಜನರನ್ನು ರಕ್ಷಿಸಿದ ಖಾಝಿ ಮಜೀದ್‌ ಫಾರೂಕಿ

1 April 2023 11:16 PM IST
share
ಇಂದೋರ್‌ ದೇವಾಲಯ ದುರಂತ: ಉಪವಾಸದ ನಡುವೆ ಜನರನ್ನು ರಕ್ಷಿಸಿದ ಖಾಝಿ ಮಜೀದ್‌ ಫಾರೂಕಿ

ಇಂದೋರ್: ರಾಮ ನವಮಿಯ ಸಂದರ್ಭದಲ್ಲಿ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಇದುವರೆಗೆ 35 ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ವೇಳೆ ಅಲ್ಲಿಗೆ ಸಹಾಯಕ್ಕೆ ಧಾವಿಸಿ ಬಂದ ಮುಸ್ಲಿಂ ಉಪವಾಸಿಗರೊಬ್ಬರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. 

ಅಪಘಾತದ ಮಾಹಿತಿ ತಿಳಿದ ತಕ್ಷಣ ಖಾಝೀ ಅಬ್ದುಲ್ ಮಜೀದ್ ಫಾರೂಕಿ ಸ್ಥಳಕ್ಕೆ ಆಗಮಿಸಿ, ತಮ್ಮ ಉಪವಾಸವನ್ನೂ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಆ ಮೂಲಕ ಹಲವು ಜನರನ್ನು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.  

ಅಪಘಾತದ ಸುದ್ದಿ ಬಂದಾಗ ನಾನು ತೋಟದಲ್ಲಿದ್ದೆ ಎಂದು ಖಾಝಿ ಅಬ್ದುಲ್ ಮಜೀದ್ ಫಾರೂಕಿ ತಿಳಿಸಿದ್ದಾರೆ. ಸ್ಥಳದಿಂದ ಕಿರುಚಾಟ ಕೇಳಿಸಿತು. ಸ್ವಲ್ಪ ಸಮಯದ ನಂತರ ದೇವಸ್ಥಾನದಲ್ಲಿ ಅವಘಡ ಸಂಭವಿಸಿರುವುದು ತಿಳಿಯಿತು. ಅಪಘಾತದ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ತಡೆಯಲಾರದೆ ನನ್ನ ತಂಡದೊಂದಿಗೆ ಸ್ಥಳಕ್ಕೆ ತಲುಪಿದೆ. ನಮ್ಮೊಂದಿಗೆ ಅನೇಕ ನಾಗರಿಕ ರಕ್ಷಣಾ ಸಿಬ್ಬಂದಿ ಇದ್ದರು. ಜನಸಂದಣಿಯನ್ನು ತೆರವುಗೊಳಿಸಿ ರಕ್ಷಣಾ ಕಾರ್ಯ ಆರಂಭಿಸಿದೆವು ಎಂದು ಸ್ವತಃ ನಾಗರಿಕ ರಕ್ಷಣಾ ಕಾರ್ಯಕರ್ತರಾಗಿರುವ ಮಜೀದ್ ಫಾರೂಕಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಪೋಲೀಸರ ಆಗಮನದ ಮೊದಲು ಸ್ಥಳದಲ್ಲಿ ಹಾಜರಾಗಿದ್ದ ಮಜೀದ್‌ 

ಅಪಘಾತದ ಬಗ್ಗೆ ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕೆ ತಲುಪುವ ಮೊದಲೇ ಅಬ್ದುಲ್ ಮಜೀದ್ ಫಾರೂಕಿ ಸ್ಥಳಕ್ಕೆ ತಲುಪಿದ್ದರು. ನಾವು ಸ್ಥಳವನ್ನು ತಲುಪಿದಾಗ ಅಲ್ಲಿ ನೂಕುನುಗ್ಗಲಿತ್ತು, ಕಾಲ್ತುಳಿತ ಸಂಭವಿಸಿದೆ ಎಂದು ಅಲ್ಲಿದ್ದವರು ತಿಳಿಸಿದರು. ಜನರ ಗುಂಪನ್ನು ತೆರವುಗೊಳಿಸುವ ಮೂಲಕ ರಕ್ಷಣೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು ಎಂದು ಭಾವುಕರಾಗಿ ಮಜೀದ್‌ ಹೇಳಿದ್ದಾರೆ. ಘಟನೆಯ ಭೀಕರತೆ ಅವರಿಗೆ ತಾಕಿದ ರೀತಿ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿದ್ದವು.   
 
ರಾಮ ನವಮಿಯ ಸಂಭ್ರಮದಲ್ಲಿ ಇಂದೋರ್‌ನ ಬೆಳೇಶ್ವರ ಮಹಾದೇವ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಸುಮಾರು 50 ಜನರು ಈ ಮೇಲ್ಛಾವಣಿಯಲ್ಲಿ ನಿಂತಿದ್ದರು, ಜನಸಂದಣಿ ಹೆಚ್ಚಾಗಿ ಬಾವಿಯ ಮೇಲೆ ನಿರ್ಮಿಸಲಾಗಿದ್ದ ಮೇಲ್ಛಾವಣಿ ಕುಸಿದು ಬಿದ್ದಿದೆ. ಆರತಿ ಮತ್ತು ಹವನ ಮಾಡುತ್ತಿದ್ದಂತೆ ಮೇಲ್ಛಾವಣಿ ಕುಸಿದಿದ್ದು, ಮೇಲೆ ನಿಂತಿದ್ದ ಜನರು ಬಾವಿಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಈವರೆಗೆ 35 ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

share
Next Story
X