Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟೆಲ್ಅವೀವ್, ವೆಸ್ಟ್ ಬ್ಯಾಂಕ್ ನಲ್ಲಿ...

ಟೆಲ್ಅವೀವ್, ವೆಸ್ಟ್ ಬ್ಯಾಂಕ್ ನಲ್ಲಿ ಮಾರಣಾಂತಿಕ ದಾಳಿಗೆ 3 ಮಂದಿ ಮೃತ್ಯು; ಸೇನೆ ಸಜ್ಜುಗೊಳಿಸಿದ ಇಸ್ರೇಲ್

8 April 2023 10:08 PM IST
share
ಟೆಲ್ಅವೀವ್, ವೆಸ್ಟ್ ಬ್ಯಾಂಕ್ ನಲ್ಲಿ ಮಾರಣಾಂತಿಕ ದಾಳಿಗೆ 3 ಮಂದಿ ಮೃತ್ಯು; ಸೇನೆ ಸಜ್ಜುಗೊಳಿಸಿದ ಇಸ್ರೇಲ್

ಟೆಲ್ಅವೀವ್, ಎ.8: ವೆಸ್ಟ್ ಬ್ಯಾಂಕ್ ಮತ್ತು ಟೆಲ್ಅವೀವ್ ನಲ್ಲಿ ಶುಕ್ರವಾರ ಪ್ರತ್ಯೇಕ ಘಟನೆಗಳಲ್ಲಿ ಇಟಾಲಿಯನ್ ಪ್ರವಾಸಿ ಸಹಿತ 3 ಮಂದಿ ಮೃತಪಟ್ಟಿದ್ದು ಇಸ್ರೇಲ್-ಫೆಲೆಸ್ತೀನ್ ನಡುವಿನ ಉದ್ವಿಗ್ನತೆ ಹೆಚ್ಚಿರುವಂತೆಯೇ ಪೊಲೀಸ್ ಮತ್ತು ಸೇನೆಯ ಮೀಸಲು ಪಡೆಯನ್ನು ಸಜ್ಜುಗೊಳಿಸುವಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆದೇಶಿಸಿದ್ದಾರೆ.

ಶುಕ್ರವಾರ ಟೆಲ್ಅವೀವ್ ಮತ್ತು ಆಕ್ರಮಿತ ವೆಸ್ಟ್ಬ್ಯಾಂಕ್ ನಲ್ಲಿ ಫೆಲೆಸ್ತೀನೀಯರು ನಡೆಸಿದ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇಸ್ರೇಲ್ ನ ವಾಣಿಜ್ಯ ಕೇಂದ್ರ ಟೆಲ್ಅವೀವ್ ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಕಾರೊಂದು ನುಗ್ಗಿ 30 ವರ್ಷದ ಇಸ್ರೇಲ್ ಪ್ರಜೆ ಮೃತಪಟ್ಟಿದ್ದು 7 ಬ್ರಿಟನ್ ಪ್ರವಾಸಿಗರು ಗಾಯಗೊಂಡಿದ್ದಾರೆ. ಅಪಘಾತ ಎಸಗಿದ ಕಾರಿನ ಚಾಲಕನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದು ಆತನನ್ನು ಇಸ್ರೇಲ್ ನಿವಾಸಿ ಫೆಲೆಸ್ತೀನ್ ಪ್ರಜೆ ಎಂದು ಗುರುತಿಸಲಾಗಿದೆ. ದಾಳಿಯನ್ನು ಖಂಡಿಸಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ `ತಮ್ಮ ದೇಶ ಇಸ್ರೇಲ್ ಜತೆ ದೃಢವಾಗಿ ನಿಲ್ಲಲಿದೆ' ಎಂದಿದ್ದಾರೆ.

ಆಕ್ರಮಿತ ವೆಸ್ಟ್ಬ್ಯಾಂಕ್ ನ ಜೋರ್ಡಾನ್ ವ್ಯಾಲಿಯ ಇಸ್ರೇಲಿ ವಸಾಹತು ಪ್ರದೇಶದ ಬಳಿ ಇಬ್ಬರು ಬ್ರಿಟಿಷ್-ಇಸ್ರೇಲಿ ಮಹಿಳೆಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು ಅವರ ತಾಯಿ ಗುಂಡಿನ ದಾಳಿಯಲ್ಲಿ  ಗಾಯಗೊಂಡಿದ್ದಾರೆ. ಈ ದಾಳಿಗೆ ಹಮಾಸ್ ಹೊಣೆ ಎಂದು ಇಸ್ರೇಲ್ ದೂಷಿಸಿದೆ.

ಸಂಯಮ ವಹಿಸುವಂತೆ ಅಂತರಾಷ್ಟ್ರೀಯ ಸಮುದಾಯದ ಮನವಿಯ ಹೊರತಾಗಿಯೂ, ಬುಧವಾರ ಅಲ್-ಅಕ್ಸಾ ಮಸೀದಿಯ ಆವರಣದಲ್ಲಿ ಇಸ್ರೇಲಿ ಪೊಲೀಸರು ಫೆಲೆಸ್ತೀನೀಯರ ಜತೆ ಘರ್ಷಣೆ ನಡೆಸಿದ ನಂತರ ಹಿಂಸಾಚಾರ ಭುಗಿಲೆದ್ದಿದೆ.

ಶುಕ್ರವಾರ ಬೆಳಗ್ಗೆ ಇಸ್ರೇಲ್ ಪಡೆ ನಡೆಸಿದ್ದ ವಾಯುದಾಳಿಯಲ್ಲಿ  ದಕ್ಷಿಣ ಲೆಬನಾನ್ ನಲ್ಲಿ ಹಮಾಸ್ ಉಗ್ರ ಸಂಘಟನೆಯ ನೆಲೆಗಳಿಗೆ ಹಾನಿಯಾಗಿದೆ. ಲೆಬನಾನ್ ನ ಟಿಯರೆ ವಲಯದಲ್ಲಿ ಮತ್ತು ಗಾಝಾದಲ್ಲಿ ಸ್ಫೋಟ ಕೇಳಿಬಂದಿದೆ ಎಂದು ಎಎಫ್ಪಿ  ಸುದ್ಧಿಸಂಸ್ಥೆ ವರದಿ ಮಾಡಿದೆ. ಗಾಝಾದಲ್ಲಿ ಹಮಾಸ್ಗೆ ಸೇರಿದ ಎರಡು ಶಸ್ತ್ರಾಸ್ತ್ರ ಉತ್ಪಾದನಾ ಕಾರ್ಖಾನೆಗಳು ಹಾಗೂ ಉಗ್ರರು ಬಳಸುತ್ತಿದ್ದ ಸುರಂಗ ಮಾರ್ಗವನ್ನು ಧ್ವಂಸಗೊಳಿಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. ಎರಡೂ ಕಡೆಯವರು ಗರಿಷ್ಟ ಸಂಯಮ ವಹಿಸುವಂತೆ ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೊ ಗುಟೆರಸ್ ಆಗ್ರಹಿಸಿದ್ದಾರೆ.

ಯಾವುದೇ ದೇಶದ ಅಮಾಯಕ ಪ್ರಜೆಗಳನ್ನು ಗುರಿಯಾಗಿಸಿ ನಡೆಸುವ ದಾಳಿಯನ್ನು ಸಮರ್ಥಿಸಲಾಗದು ಎಂದು ಅಮೆರಿಕ ಹೇಳಿದ್ದು, ತಾನು ಇಸ್ರೇಲ್ ಜತೆ ದೃಢವಾಗಿ ನಿಲ್ಲುವುದಾಗಿ ಘೋಷಿಸಿದೆ.

ಇಸ್ರೇಲ್ನ ಭದ್ರತೆ ಮತ್ತು ಲೆಬನಾನ್ನ ಸ್ಥಿರತೆ ಹಾಗೂ ಸಾರ್ವಭೌಮತ್ವಕ್ಕೆ ತನ್ನ ಅಚಲ ಬೆಂಬಲವನ್ನು ಫ್ರಾನ್ಸ್ ಪುನರುಚ್ಚರಿಸಿದೆ. ಯೆಹೂದಿ ಆಡಳಿತದ ಆಕ್ರಮಣವನ್ನು ಖಂಡಿಸುವುದಾಗಿ ಇರಾನ್ ಪ್ರತಿಕ್ರಿಯಿಸಿದ್ದರೆ ಶಾಶ್ವತ ಕದನವಿರಾಮ ಜಾರಿಗೆ ರಶ್ಯ ಕರೆ ನೀಡಿದೆ.  

ಖತರ್ ಮಧ್ಯಸ್ಥಿಕೆ

ಉದ್ವಿಗ್ನತೆಯನ್ನು ತಗ್ಗಿಸಲು ಮತ್ತು ಇಸ್ರೇಲ್-ಫೆಲೆಸ್ತೀನೀಯರು ಸಂಯಮ ವಹಿಸುವಂತೆ ಮನವೊಲಿಸಲು ಮಧ್ಯಸ್ಥಿಕೆ ವಹಿಸುವುದಾಗಿ ಖತರ್ ಘೋಷಿಸಿದೆ. ಎರಡೂ ಕಡೆಯವರು ಸಂಯಮ ವಹಿಸುವಂತೆ ಲೆಬನಾನ್ಲ್ಲಿರುವ ವಿಶ್ವಸಂಸ್ಥೆಯ ಮಧ್ಯಂತರ ಪಡೆ(ಯುಎನ್ಐಎಫ್ಐಎಲ್) ಕರೆ ನೀಡಿದೆ.

ಈ ಮಧ್ಯೆ, ಲೆಬನಾನ್ ಕಡೆಯಿಂದ ಇಸ್ರೇಲ್ನ ವಾಯುಪ್ರದೇಶದತ್ತ ಬರುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. ಗಾಝಾ ಸಿಟಿಯಲ್ಲಿನ ಅಲ್-ದೊರಾ ಮಕ್ಕಳ ಆಸ್ಪತ್ರೆಗೆ ಆಂಶಿಕ ಹಾನಿಯಾಗಿದೆ ಎಂದು ಫೆಲೆಸ್ತೀನ್ ಆರೋಗ್ಯ ಇಲಾಖೆ ಹೇಳಿದೆ. ಭಯಾನಕ ಇಸ್ರೇಲ್ ದಾಳಿ ಖಂಡನೀಯ. ಇದರ ಪರಿಣಾಮಗಳಿಗೆ  ಇಸ್ರೇಲ್ ಸಂಪೂರ್ಣ ಹೊಣೆಯಾಗಿದೆ ಎಂದು ಹಮಾಸ್ ಪ್ರತಿಕ್ರಿಯಿಸಿದೆ. ಇಸ್ರೇಲ್ನ ಆಕ್ರಮಣ ಮತ್ತು ವಾಯುದಾಳಿ ನಿಲ್ಲುವವರೆಗೂ ರಾಕೆಟ್ ದಾಳಿ ಮುಂದುವರಿಯಲಿದೆ ಎಂದು ಹಮಾಸ್ ಹೇಳಿರುವುದಾಗಿ ವರದಿಯಾಗಿದೆ.

share
Next Story
X