Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಕ್ಕಿಂ ಗಡಿಯಲ್ಲಿ ಭಾರತದಿಂದ ವಿಶ್ವಾಸ...

ಸಿಕ್ಕಿಂ ಗಡಿಯಲ್ಲಿ ಭಾರತದಿಂದ ವಿಶ್ವಾಸ ದ್ರೋಹ: ಚೀನಾ ಆರೋಪ

ವಾರ್ತಾಭಾರತಿವಾರ್ತಾಭಾರತಿ3 July 2017 6:51 PM IST
share
ಸಿಕ್ಕಿಂ ಗಡಿಯಲ್ಲಿ ಭಾರತದಿಂದ ವಿಶ್ವಾಸ ದ್ರೋಹ: ಚೀನಾ ಆರೋಪ

ಬೀಜಿಂಗ್, ಜು. 3: ಸಿಕ್ಕಿಂನಲ್ಲಿ ಭಾರತದೊಂದಿಗೆ ತಾನು ಹೊಂದಿರುವ ಗಡಿಯನ್ನು ಸರಿಯಾಗಿಯೇ ಗುರುತಿಸಲಾಗಿದೆ ಹಾಗೂ ಭಾರತೀಯ ಸೇನೆಯು ಕಳೆದ ತಿಂಗಳು ಅಲ್ಲಿ ತೆಗೆದುಕೊಂಡ ಕ್ರಮವು ಈ ಹಿಂದಿನ ಭಾರತೀಯ ಸರಕಾರಗಳು ತೆಗೆದುಕೊಂಡ ನಿಲುವಿನ ಉಲ್ಲಂಘನೆಯಾಗಿದೆ ಎಂದು ಚೀನಾ ಇಂದು ಹೇಳಿದೆ.

‘‘ಸಿಕ್ಕಿಂ ಕುರಿತ 1890ರ ಚೀನಾ-ಬ್ರಿಟಿಶ್ ಒಪ್ಪಂದವನ್ನು ಅನುಮೋದಿಸಿ ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ 1959ರಲ್ಲಿ ಚೀನಾ ಪ್ರಧಾನಿ ಝೂ ಎನ್‌ಲೈ ಅವರಿಗೆ ಪತ್ರವೊಂದನ್ನು ನೀಡಿದ್ದರು. ಭಾರತದಲ್ಲಿ ಆ ನಂತರ ಬಂದ ಸರಕಾರಗಳೂ ಇದನ್ನು ಅನುಮೋದಿಸಿವೆ’’ ಎಂದು ಚೀನಾದ ವಿದೇಶ ಸಚಿವಾಲಯದ ವಕ್ತಾರ ಗೆಂಗ್ ಶುವಂಗ್ ಪತ್ರಿಕಾಗೋಷ್ಠಿಯೊಂದರಲ್ಲಿ ಹೇಳಿದರು.

ಭಾರತದ ಈ ಒಪ್ಪಂದವನ್ನು ಪರಿಶೀಲಿಸಿ ಡೋಕ್ಲಂ ಪ್ರದೇಶದಿಂದ ತನ್ನ ಪಡೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕಾದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚೀನಾ ಹಿಮಾಲಯದ ಗಡಿಯಲ್ಲಿ ನಿರ್ಮಿಸುತ್ತಿರುವ ನೂತನ ರಸ್ತೆಯ ಕಾಮಗಾರಿಯನ್ನು ನಿಲ್ಲಿಸಲು ಭಾರತೀಯ ಪಡೆಗಳು ಒಂದು ತಿಂಗಳ ಹಿಂದೆ ವಾಸ್ತವಿಕ ನಿಯಂತ್ರಣ ರೇಖೆಯೆಂಬ ವಾಸ್ತವಿಕ ಗಡಿಯನ್ನು ದಾಟಿ ಬಂದಿವೆ ಎಂದು ಚೀನಾ ಆರೋಪಿಸಿದೆ. ಇದು ‘ಗಂಭೀರ ಭದ್ರತಾ’ ಕಳವಳವನ್ನು ಹುಟ್ಟುಹಾಕಿದೆ ಎಂದರು.

 ಭಾರತ, ಚೀನಾ ಮತ್ತು ಭೂತಾನ್‌ಗಳ ಗಡಿಗಳು ಸಂಧಿಸುವ ದುರ್ಗಮ ಭೂಭಾಗದಲ್ಲಿ ಹೊಸ ಸಂಘರ್ಷ ತಲೆದೋರಿದೆ.

ಬೀಜಿಂಗ್ ಕಳೆದ ವಾರ ಔಪಚಾರಿಕ ಪ್ರತಿಭಟನೆ ಸಲ್ಲಿಸಿತ್ತು. ರಸ್ತೆ ಕಾಮಗಾರಿ ನಿಲ್ಲಿಸಲು ಭಾರತೀಯ ಗಡಿ ಸೈನಿಕರು ಸಿಕ್ಕಿಂ ರಾಜ್ಯದಿಂದ ಗಡಿ ದಾಟಿ ತನ್ನ ಟಿಬೆಟ್ ಭೂಭಾಗಕ್ಕೆ ಬಂದಿದ್ದಾರೆ ಎಂದು ಅದು ಆರೋಪಿಸಿತ್ತು.

ಆದರೆ ಶುಕ್ರವಾರ ಇದಕ್ಕೆ ಪ್ರತಿಕ್ರಿಯಿಸಿದ ಭಾರತ, ಏಕಪಕ್ಷೀಯವಾಗಿ ರಸ್ತೆ ನಿರ್ಮಿಸುವುದಕ್ಕಾಗಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಈ ಪ್ರದೇಶವನ್ನು ಪ್ರವೇಶಿಸಿದೆ ಎಂದು ಹೇಳಿದೆ.

ಬಿಕ್ಕಟ್ಟು ಇತ್ಯರ್ಥಗೊಳ್ಳದಿದ್ದರೆ ಯುದ್ಧವೂ ಸಾಧ್ಯ; ಚೀನಾ ಚಿಂತಕರ ಎಚ್ಚರಿಕೆ

ಭಾರತದೊಂದಿಗಿನ ಗಡಿ ಸಂಘರ್ಷಗಳಲ್ಲಿ ಯುದ್ಧದ ಬೆಲೆ ತೆತ್ತಾದರೂ ಚೀನಾವು ತನ್ನ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುತ್ತದೆ ಎಂದ ಅಭಿಪ್ರಾಯವನ್ನು ಚೀನಾದ ಮಾಧ್ಯಮಗಳು ಮತ್ತು ಚೀನಾ ಪರ ಚಿಂತಕರು ವ್ಯಕ್ತಪಡಿಸಿದ್ದಾರೆ.

ಭಾರತ ಮತ್ತು ಚೀನಾಗಳ ನಡುವಿನ ಸಂಘರ್ಷವನ್ನು ಸರಿಯಾಗಿ ನಿಭಾಯಿಸದೆ ಹೋದರೆ ಯುದ್ಧ ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಹೇಳುತ್ತಾರೆ.

ಸಿಕ್ಕಿಂ ಗಡಿಯ ಡೋಕ್ಲಮ್‌ನಲ್ಲಿ ಏರ್ಪಟ್ಟಿರುವ ಬಿಕ್ಕಟ್ಟು ಮೂರನೆ ವಾರಕ್ಕೆ ಮುಂದುವರಿದಿರುವಂತೆಯೇ ಈ ಎಚ್ಚರಿಕೆ ವ್ಯಕ್ತವಾಗಿದೆ.

‘‘ಚೀನಾ ಕೂಡ 1962ಕ್ಕಿಂತ ಭಿನ್ನವಾಗಿದೆ’’ ಎಂದು ಅಂತಾರಾಷ್ಟ್ರೀಯ ಅಧ್ಯಯನಗಳ ಶಾಂೈ ಮುನಿಸಿಪಲ್ ಸೆಂಟರ್‌ನಲ್ಲಿ ಪ್ರೊಫೆಸರ್ ಆಗಿರುವ ವಾಂಗ್ ಡೆಹುವ ಹೇಳಿದ್ದಾರೆ ಎಂದು ಸರಕಾರಿ ಒಡೆತನದ ‘ಗ್ಲೋಬಲ್ ಟೈಮ್ಸ್’ ಹೇಳಿದೆ.

2017ರ ಭಾರತವು 1962ರ ಭಾರತಕ್ಕಿಂತ ಭಿನ್ನವಾಗಿದೆ ಎಂಬ ರಕ್ಷಣಾ ಸಚಿವ ಅರುಣ್ ಜೇಟ್ಲಿಯ ಹೇಳಿಕೆಗೆ ಅವರು ಪ್ರತಿಕ್ರಿಯಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X