ಕಂಟ್ರೋಲ್ ರೂಂಗೆ ಕರೆ ಮಾಡಿ ಆತ್ಮಹತ್ಯೆ
ಬೆಂಗಳೂರು, ಜ.10: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎನ್ನಲಾಗಿದೆ.
ಅನ್ನಪೂರ್ಣೇಶ್ವರಿ ನಗರದ ಆರ್ಬಿಐ ಲೇಔಟ್ನ ವೆಂಕಟೇಶ್(55) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.
ವೆಂಕಟೇಶ್ ರಿಯಲ್ ಎಸ್ಟೇಟ್ ಉದ್ಯೋಗ ನಡೆಸುತ್ತಿದ್ದರು. ಕೆಲ ವರ್ಷಗಳ ಹಿಂದೆ ಹಲವಾರು ಲೇವಾದೇವಿಗಾರರಿಂದ ಸಾಲ ಪಡೆದಿದ್ದರು. ಅಧಿಕ ಲಾಭ ಪಡೆಯಲು ಸಾಲ ಪಡೆದ ಹಣ ಮತ್ತು ತನ್ನ ಬಳಿಯಿದ್ದ ಹಣವನ್ನು ರಿಯಲ್ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ.
ಈ ಉದ್ಯಮದಲ್ಲಿ ಈತನಿಗೆ ನಷ್ಟ ಉಂಟಾಗಿತ್ತು. ಇದರಿಂದ ಮನನೊಂದ ವೆಂಕಟೇಶ್ ಬುಧವಾರ ಬೆಳಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಸಾಲ ತೀರಿಸಲಾಗದೆ ತಾನು ಆತ್ಮಹತ್ಯೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯ ಬೀಗ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ವೆಂಕಟೇಶ್ಗೆ ಇಬ್ಬರು ಮಕ್ಕಳಿದ್ದು, ಒಬ್ಬ ಮಗಳಿಗೆ ಮದುವೆ ಮಾಡಲು ವರನನ್ನು ಹುಡುಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.