ಸತೀಶ್ ಜಾರಕಿಹೊಳಿ ಜತೆ ವೇಣುಗೋಪಾಲ್ ಸಂಧಾನ
ಬೆಂಗಳೂರು, ಜ.30: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಜತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಂಧಾನ ಮಾತುಕತೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಬುಧವಾರ ತಮ್ಮ ಬೆಂಬಲಿಗ ಮುಖಂಡರ ಸಭೆಯನ್ನು ಸತೀಶ್ ಜಾರಕಿಹೊಳಿ ಕರೆದಿರುವ ಹಿನ್ನೆಲೆಯಲ್ಲಿ, ಅವರೊಂದಿಗೆ ಸಂಧಾನ ಮಾತುಕತೆಗೆ ಮುಂದಾದ ವೇಣುಗೋಪಾಲ್ ಸುಮಾರು ಒಂದು ಗಂಟೆಗಳ ಕಾಲ ಚರ್ಚೆಸಿ, ಆನಂತರ ಮುಖ್ಯಮಂತ್ರಿ ಜತೆ ಮಾತುಕತೆಗೆ ಕರೆದುಕೊಂಡು ಹೋದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸತೀಶ್ ಜಾರಕಿಹೊಳಿ ಮನವೊಲಿಸಲು ಪ್ರಯತ್ನಿಸಿರುವ ವೇಣುಗೋಪಾಲ್, ಮುಖ್ಯಮಂತ್ರಿಯ ಅಧಿಕೃತ ನಿವಾಸ ಕಾವೇರಿಗೆ ಸತೀಶ್ ಜಾರಕಿಹೊಳಿ ಜತೆ ಭೇಟಿ ನೀಡಿ ಮಾತುಕತೆ ನಡೆಸಿದರು.
Next Story