ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ: ಹಿರಿಯ ಅಧಿಕಾರಿಗಳೊಂದಿಗೆ ಮಾ.8 ರಂದು ಸಭೆ
ಬೆಂಗಳೂರು, ಮಾ.7: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿಗೆ ಚೂರಿ ಇರಿತ ಪ್ರಕರಣದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರವು, ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಸಂಬಂಧ ಗುರುವಾರ ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆಯನ್ನು ಕರೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸಭೆ ಕರೆದಿದ್ದು, ಗೃಹ ಸಚಿವ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story