ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಆರೋಪ: ಭಾಸ್ಕರ್ ಪ್ರಸಾದ್ ವಿರುದ್ಧ ದೂರು ದಾಖಲು
ಬೆಂಗಳೂರು, ಜೂ.2: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಭಾಸ್ಕರ್ ಪ್ರಸಾದ್ ವಿರುದ್ಧ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ನಗರದ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿ ಭಾಸ್ಕರ್ ಪ್ರಸಾದ್ ತಮ್ಮ ಫೇಸ್ಬುಕ್ನಲ್ಲಿ ಅಂಕಣಕಾರ ರೋಹಿತ್ ಚಕ್ರತೀರ್ಥ ಹತ್ಯೆಗೆ ದಿನೇಶ್ ಅಮೀನ್ ಮಟ್ಟು ಸುಪಾರಿ ನೀಡಿದ್ದರು ಎಂದು ಬರೆದುಕೊಂಡಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪ-ಪ್ರತ್ಯಾರೋಪಗಳಿಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಭಾಸ್ಕರ್ ಪ್ರಸಾದ್ ಸುಳ್ಳು ಆರೋಪಗಳನ್ನು ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
Next Story