ಬೆಂಗಳೂರು: ಆನೆ ದಂತ ಚೋರರ ಬಂಧನ
ಬೆಂಗಳೂರು, ಜೂ.28: ಕಾನೂನು ಬಾಹಿರವಾಗಿ ಆನೆ ದಂತಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸುವಲ್ಲಿ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ತಮಿಳುನಾಡು ಮೂಲದ ಧರ್ಮಪುರಿ ಜಿಲ್ಲೆಯ ನವೀನ್, ಪ್ರಕಾಶ, ಖಾದರ್ ಬಾಷಾ, ಝಾವೀದ್, ಶಬರೀನಾಥನ್ ಹಾಗೂ ಸತೀಶ್ಕುಮಾರ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ
ಬುಧವಾರ ಇಲ್ಲಿನ ಕೆಂಪೇಗೌಡ ಲೇಔಟ್ ರಿಂಗ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಕೆಲ ಆಸಾಮಿಗಳು ಆನೆ ದಂತಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳಿಂದ ಒಟ್ಟು 12 ತುಂಡು ಆನೆ ದಂತಗಳನ್ನು ವಶಕ್ಕೆ ಪಡೆದು, ಇಲ್ಲಿನ ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣೆಯಲ್ಲಿ ವನ್ಯಜೀವಿಗಳ ಸಂರಕ್ಷಣೆ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
Next Story