ಬೆಂಗಳೂರು, ಮಾ,28: ಮೈಸೂರು ರಾಜು ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ನಿರಾಕರಿಣೆ
ಬೆಂಗಳೂರು.ಮಾ.28: ವಿಧಾನಸಭೆಯಲ್ಲಿಂದು ಬಿಜೆಪಿಯ ಸಿ.ಟಿ.ರವಿ ಅವರು ನಿಯಮ 69ರ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರ ನೀಡಿ, ಈಗಾಗಲೇ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆಯಲ್ಲಿ ಸಾಕಷ್ಟು ಪ್ರಗತಿಯಾಗಿದೆ. ಶೀಘ್ರದಲ್ಲೇ ಹಂತಕರನ್ನು ಬಂಧಿಸಲಾಗುವುದು ಎಂದರು.
ಬಿಜೆಪಿಯವರ ಒತ್ತಾಯದಂತೆ ರಾಜು ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಕೊಡಲು ನಿಯಮಾವಳಿಗಳಲ್ಲಿ ಅವಕಾಶವಿಲ್ಲ. ಈಗಾಗಲೇ ರಾಜು ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ. ರಾಜು ಅವರ ಪತ್ನಿಗೆ ಉದ್ಯೋಗ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
Next Story