ಬೆಂಗಳೂರು: ಮೊಬೈಲ್ ಕಸಿದು ಪರಾರಿ
ಬೆಂಗಳೂರು, ಸೆ.1: ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಎಂಬುವವರು ಹೊಟೇಲ್ ಕಾರ್ಮಿಕರಾಗಿದ್ದು, ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದರು. ಮಿನರ್ವ ವೃತ್ತದ ಮಾರ್ಗವಾಗಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಇವರನ್ನು ಅಡ್ಡಗಟ್ಟಿ ಬೆದರಿಸಿ ಅವರ ಕೈಲಿದ್ದ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story