ಅ.2: ಬೆಂಗಳೂರು ವಿವಿಯಲ್ಲಿ ಗಾಂಧಿ ಜಯಂತಿ
ಬೆಂಗಳೂರ, ಅ.1: ಗಾಂಧಿ ಅಧ್ಯಯನ ಕೇಂದ್ರ ವತಿಯಿಂದ ಅ.2ರಂದು ಬೆಳಗ್ಗೆ 11ಕ್ಕೆ ನಗರದ ಗಾಂಧಿ ಭವನದಲ್ಲಿ ಗಾಂಧಿ ಜಯಂತಿಯನ್ನು ಆಯೋಜಿಸಲಾಗಿದೆ. ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕುಲಸಚಿವ ಪ್ರೊ.ಬಿ.ಕೆ.ರವಿ, ಗಾಂಧಿವಾದಿ ಪ್ರೊ.ಕೆ.ಸಿ.ಮಿಶ್ರಾ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಇದೇ ವೇಳೆ ಜಿ.ಚನ್ನಕೇಶವ ನಿರ್ದೇಶನದಲ್ಲಿ ಕವಿ ಕಂಡ ಗಾಂಧೀಜಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಕಣ್ಣಲ್ಲಿ ಗಾಂಧೀಜಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ವಿದ್ಯಾರ್ಥಿಗಳಿಂದ ಕಲಾವಿದರು ಕಂಡಂತೆ ಗಾಂಧೀಜಿ ನಾಟಕಗಳನ್ನು ಆಯೋಜಿಸಲಾಗಿದೆ ಎಂದು ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನಟರಾಜ್ ಹುಳಿಯಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story