ರೌಡಿಶೀಟರ್ ಕೊಲೆ ಪ್ರಕರಣ: ಆರೋಪಿಗಳ ಬಂಧನ
ಬೆಂಗಳೂರು, ಅ.3: ರೌಡಿ ಶೀಟರ್ ಹರೀಶ್ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಇಲ್ಲಿನ ತಲಘಟ್ಟಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಾದೇಶ್, ಶ್ರೀನಾಥ್, ಸುನೀಲ್, ಆನಂದ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ರೌಡಿಶೀಟರ್ ಹರೀಶ್, ಆರೋಪಿ ಮಾದೇಶನ ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಯ ಬಳಿ ಹಣಕ್ಕಾಗಿ ಪೀಡಿಸುತ್ತಿದ್ದ. ಈ ಬಗ್ಗೆ ಜಗಳ ನಡೆದು ಸೆ. 19 ರಂದು ನೈಸ್ ರಸ್ತೆಯಲ್ಲಿ ಆರೋಪಿಗಳು ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
Next Story