ಬೆಂಗಳೂರು ನಗರ ದಕ್ಷಿಣ ವಿಭಾಗದ ನೂತನ ಡಿಸಿಪಿ ಆಗಿ ಅಣ್ಣಾಮಲೈ ಅಧಿಕಾರ ಸ್ವೀಕಾರ
ಬೆಂಗಳೂರು, ಅ.22: ಬೆಂಗಳೂರು ನಗರದ ದಕ್ಷಿಣ ವಿಭಾಗದ ನೂತನ ಡಿಸಿಪಿ ಆಗಿ ಕೆ.ಅಣ್ಣಾಮಲೈ ಅವರು ಅಧಿಕಾರ ವಹಿಸಿಕೊಂಡರು.
ಸೋಮವಾರ ನಗರದ ಸೌತ್ ಎಂಡ್ ವೃತ್ತದಲ್ಲಿರುವ ಡಿಸಿಪಿ ಕಚೇರಿಯಲ್ಲಿ ಈ ಹಿಂದಿನ ಡಿಸಿಪಿ ಡಾ.ಶರಣಪ್ಪ ಅವರಿಂದ ಅಣ್ಣಾಮಲೈ ಅಧಿಕಾರ ಸ್ವೀಕಾರ ಮಾಡಿದರು.
ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಎಂದಿನಂತೆ ಪೂರ್ಣ ಪ್ರಮಾಣದಲ್ಲಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.
ಸದ್ಯ ನಾನು ಈಗ ಮಗುವಾಗಿದ್ದೇನೆ. ಮಗು ಹುಟ್ಟಿದಾಗ ಹೇಗೆ ಇರುತ್ತೋ ಹಾಗೇ ಇದ್ದೇನೆ. ನನಗೆ ಬೆಂಗಳೂರು ಬಗ್ಗೆ ಏನೂ ಗೊತ್ತಿಲ್ಲ. ಒಂದು ವಾರದಲ್ಲಿ ಬೆಂಗಳೂರಿನ ಬಗ್ಗೆ ತಿಳಿದುಕೊಳ್ಳುತ್ತೇನೆ. ಈ ಹಿಂದಿನ ಡಿಸಿಪಿ ಶರಣಪ್ಪ ಅವರ ನಂತರ ನಾನು ಅಧಿಕಾರ ಸ್ವೀಕರಿಸುತ್ತಿರುವುದು ನನಗೆ ಖುಷಿ ತಂದಿದೆ ಎಂದರು.
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ಕೆ.ಅಣ್ಣಾಮಲೈ ಅವರನ್ನು ಇತ್ತೀಚಿಗೆ ರಾಜ್ಯ ಸರಕಾರವು ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು.