ಅಗಲಿದ ಗಣ್ಯರಿಗೆ ಸಿಎಂ ನೇತೃತ್ವದ ಸಭೆಯಲ್ಲಿ ಶ್ರದ್ಧಾಂಜಲಿ
ಬೆಂಗಳೂರು, ನ.27: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಇಂದು ಕರೆದಿದ್ದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಮಾಜಿ ಸಚಿವರಾದ ಅಂಬರೀಶ್, ಜಾಫರ್ ಶರೀಫ್ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರಿಗೆ ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇದೇ ವೇಳೆ ಸಂವಿಧಾನ ಸಭೆಯ ದಿನದ ಅಂಗವಾಗಿ ಪ್ರಸ್ತಾವವನ್ನು ಮುಖ್ಯಮಂತ್ರಿ ಅಧಿಕಾರಿಗಳಿಗೆ ಬೋಧಿಸಿದರು.
Next Story