ವಿಷ ಸೇವಿಸಿ ಆಟೊ ಚಾಲಕ ಆತ್ಮಹತ್ಯೆ
ಬೆಂಗಳೂರು, ಮಾ.5: ಜೀವನದಲ್ಲಿ ಜಿಗುಪ್ಸೆಗೊಂಡ ಗೂಡ್ಸ್ ಆಟೊ ಚಾಲಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರು ಮೂಲದ ತೀರ್ಥಕುಮಾರ್(32) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.
ಹುಣಸಮಾರನಹಳ್ಳಿ ಸಮೀಪದ ಸೊಣ್ಣಪ್ಪನಹಳ್ಳಿಯಲ್ಲಿ ತೀರ್ಥಕುಮಾರ್ ವಾಸವಾಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತೀರ್ಥಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಚಿಕ್ಕಜಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story