ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟ ಜೆಡಿಎಸ್
ಬೆಂಗಳೂರು, ಮಾ.25: ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ವಯ ಹಂಚಿಕೆಯಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷವು ಕಾಂಗ್ರೆಸ್ಗೆ ಮತ್ತೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಕೆಪಿಸಿಸಿ ಕರ್ನಾಟಕ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರವನ್ನು ಮತ್ತೆ ನಮಗೆ ಬಿಟ್ಟು ಕೊಟ್ಟಿರುವುದಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಆ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಫೇಸ್ ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಜೆಡಿಎಸ್ನ ಈ ನಿರ್ಧಾರವನ್ನು ಪಕ್ಷದ ಮುಖಂಡ ವೈ.ಎಸ್.ವಿ.ದತ್ತಾ ಕೂಡಾ ಸ್ಪಷ್ಪಪಡಿಸಿದ್ದಾರೆ.
Next Story