ಬಿಜೆಪಿ ಜತೆ ಕೈಜೋಡಿಸಲು ಸಿದ್ಧ: ಶಾಸಕ ಮುನಿರತ್ನ
ಬೆಂಗಳೂರು, ಜು.7: ಬಿಜೆಪಿ ಜತೆ ಕೈಜೋಡಿಸಲು ಸಿದ್ಧ. ನಮಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಹೇಳಿದ್ದಾರೆ.
ರಾಜೀನಾಮೆ ಪತ್ರ ಸಲ್ಲಿಸಿರುವ ಮುನಿರತ್ನ ಅವರು, ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವ ಪಕ್ಷಕ್ಕೆ ನಮ್ಮ ಬೆಂಬಲ. ಬಿಜೆಪಿ ಜತೆ ಕೈಜೋಡಿಸಲು ಸಿದ್ಧ. ನಮಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಚಿವ ರೇವಣ್ಣ ನಿರ್ಲಕ್ಷ್ಯ ವಹಿಸಿದ್ದು, ನಮ್ಮ ರಾಜಕೀಯ ತೀರ್ಮಾನ ಅಚಲ ಎಂದು ಹೇಳಿದ್ದಾರೆ.
Next Story