ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆ. 14: ರಾಜ್ಯದಲ್ಲಿನ ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಕೈಬಿಟ್ಟಿರುವ ಎಸ್ಸೈ, ಎಸಿಪಿ ದರ್ಜೆ ಅಧಿಕಾರಿಗಳು, ಅಗ್ನಿಶಾಮಕ, ಬಂಧಿಖಾತೆ ಅಧಿಕಾರಿಗಳ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಕೈಬಿಟ್ಟು ಹೋಗಿರುವ ಸಿಬ್ಬಂದಿ ವೇತನ ಪರಿಷ್ಕರಣೆಗೆ ಅನ್ವಯ ಆಗುವಂತೆ ಕ್ರಮ ವಹಿಸಲು ಆರ್ಥಿಕ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಗೋವಾದಲ್ಲಿ ಸಭೆ: ಸೆ.20ಕ್ಕೆ ಗೋವಾದಲ್ಲಿ ಜಿಎಸ್ಟಿ ಕೌನ್ಸಿಲ್ ಸಭೆ ಇದ್ದು, ಅದರಲ್ಲಿ ನಾನು ಪಾಲ್ಗೊಳ್ಳುತ್ತೇನೆ. ರಾಜ್ಯದ ತೆರಿಗೆ ಸಂಗ್ರಹ ಇನ್ನಿತರ ವಿಚಾರಗಳ ಸಂಬಂಧ ರಾಜ್ಯದ ನಿಲುವು ಪ್ರಕಟಿಸಲಾಗುವುದು. ಆ ಸಭೆಗೆ ಪೂರ್ವಭಾವಿಯಾಗಿ ಇಂದು ಬಿಹಾರ್ ಡಿಸಿಎಂ ಸುಶೀಲ್ ಕುಮಾರ್ ಮೋದಿ ಸಭೆ ನಡೆಸಿದ್ದಾರೆ ಎಂದು ತಿಳಿಸಿದರು.
Next Story