Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಡಿಮೆ ವೆಚ್ಚದಲ್ಲಿ ಪವಿತ್ರ ಉಮ್ರಾ, ಹಜ್...

ಕಡಿಮೆ ವೆಚ್ಚದಲ್ಲಿ ಪವಿತ್ರ ಉಮ್ರಾ, ಹಜ್ ಯಾತ್ರೆ: ವಂಚಕ ಟೂರ್ ಆಪರೇಟರ್‌ಗಳ ಬಗ್ಗೆ ಜನ ಜಾಗೃತಿ ಅಗತ್ಯ

ರಾಜ್ಯ ಹಜ್ ಆಯೋಜಕರ ಸಂಘಟನೆಯ ಮುಖ್ಯಸ್ಥ ಐ.ಎ.ಸಿದ್ದೀಖಿ

ವಾರ್ತಾಭಾರತಿವಾರ್ತಾಭಾರತಿ19 Oct 2019 6:14 PM IST
share
ಕಡಿಮೆ ವೆಚ್ಚದಲ್ಲಿ ಪವಿತ್ರ ಉಮ್ರಾ, ಹಜ್ ಯಾತ್ರೆ: ವಂಚಕ ಟೂರ್ ಆಪರೇಟರ್‌ಗಳ ಬಗ್ಗೆ ಜನ ಜಾಗೃತಿ ಅಗತ್ಯ

ಬೆಂಗಳೂರು, ಅ.19: ಕಡಿಮೆ ವೆಚ್ಚದಲ್ಲಿ ಪವಿತ್ರ ಉಮ್ರಾ ಹಾಗೂ ಹಜ್ ಯಾತ್ರೆಗೆ ಕರೆದೊಯ್ಯುವುದಾಗಿ ಬಡವರು ಹಾಗೂ ಮಧ್ಯಮ ವರ್ಗದವರಿಂದ ಹಣ ಪಡೆದುಕೊಂಡು ವಂಚಿಸುವಂತಹ ಟೂರ್ ಆಪರೇಟರ್‌ಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ರಾಜ್ಯ ಹಜ್ ಆಯೋಜಕರ ಸಂಘಟನೆಯ ಮುಖ್ಯಸ್ಥ ಇಕ್ಬಾಲ್ ಅಹ್ಮದ್ ಸಿದ್ದೀಖಿ ಹೇಳಿದರು.

ಶನಿವಾರ ನಗರದ ಬಾಗಲೂರು ರಸ್ತೆಯಲ್ಲಿರುವ ಸಿದ್ದೀಖಿ ಫಾರ್ಮ್‌ಹೌಸ್‌ನಲ್ಲಿ ಆಯೋಜಿಸಿದ್ದ ರಾಜ್ಯ ಹಜ್ ಆಯೋಜಕರ ಸಂಘಟನೆಯ 7ನೇ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಳೆದ 10 ವರ್ಷಗಳಿಂದ ಇಂತಹ ವಂಚನೆಯ ಪ್ರಕರಣಗಳು ಕೇಳಿ ಬರುತ್ತಿವೆ. ಇದರಿಂದಾಗಿ, ಇನ್ನುಳಿದ ಖಾಸಗಿ ಟೂರ್ ಆಪರೇಟರ್‌ಗಳ ಮೇಲೂ ಗಂಭೀರವಾದ ಪರಿಣಾಮಗಳು ಬೀರುತ್ತಿವೆ. ಜನರಿಂದ ದುಡ್ಡು ಕಟ್ಟಿಸಿಕೊಂಡು ಅವರನ್ನು ವಿಮಾನ ನಿಲ್ದಾಣ, ಮಕ್ಕಾ ಅಥವಾ ಮದೀನಾ ಬಳಿ ಬಿಟ್ಟು ಪರಾರಿಯಾಗುವಂತಹ ಘಟನೆಗಳು ನಮ್ಮ ಮುಂದಿವೆ ಎಂದು ಅವರು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೊಸದಾಗಿ ಖಾಸಗಿ ಟೂರ್ ಅಂಡ್ ಟ್ರಾವೆಲ್ಸ್ ಆರಂಭಿಸುವವರ ನೋಂದಣಿ ಮಾಡಿಸಬೇಕು. ನಿರ್ದಿಷ್ಟವಾದ ನಿಯಮಾವಳಿಗಳನ್ನು ರಚಿಸಬೇಕು. ಇದರಿಂದ, ಬಡವರನ್ನು ಲೂಟಿ ಮಾಡುವವರಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಇಕ್ಬಾಲ್ ಅಹ್ಮದ್ ಸಿದ್ದೀಖಿ ತಿಳಿಸಿದರು.

ಕೇಂದ್ರೀಯ ಹಜ್ ಸಮಿತಿಗೆ ಹಂಚಿಕೆಯಾಗುವ ಕೋಟಾ ಹಾಗೂ ಖಾಸಗಿ ಟೂರ್ ಆಪರೇಟರ್‌ಗಳಿಗೆ ಹಂಚಿಕೆಯಾಗುವ ಕೋಟಾದಲ್ಲಿ ವ್ಯತ್ಯಾಸವಿದೆ. ಅಲ್ಲದೇ, ಯಾತ್ರೆಗಾಗಿ ಹಜ್ ಸಮಿತಿ ಹಾಗೂ ಖಾಸಗಿ ಟೂರ್ ಆಪರೇಟರ್‌ಗಳು ಸಂಗ್ರಹಿಸುವ ಮೊತ್ತದಲ್ಲೂ ಸಾಕಷ್ಟು ವ್ಯತ್ಯಾಸವಿದೆ ಎಂದು ಅವರು ಹೇಳಿದರು.

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಜ್ ಸಬ್ಸಿಡಿಯನ್ನು ಹಿಂದಕ್ಕೆ ಪಡೆದ ಬಳಿಕ ಖಾಸಗಿ ಟೂರ್ ಆಪರೇಟರ್‌ಗಳ ಪಾತ್ರ ಹೆಚ್ಚಾಗಿದೆ. ಕೆಲವರು ಮಾಡುವ ವಂಚನೆಯಿಂದಾಗಿ ಎಲ್ಲರಿಗೂ ಸಮಸ್ಯೆ ಉಂಟಾಗುತ್ತದೆ ಎಂದು ಇಕ್ಬಾಲ್ ಅಹ್ಮದ್ ಸಿದ್ದೀಖಿ ತಿಳಿಸಿದರು.

ಸಂಘಟನೆಯ ಕಾರ್ಯದರ್ಶಿ ಶಫಿ ಅಹ್ಮದ್ ಮಾತನಾಡಿ, ಕಡಿಮೆ ವೆಚ್ಚದಲ್ಲಿ ಹಜ್ ಅಥವಾ ಉಮ್ರಾ ಯಾತ್ರೆಗೆ ಕರೆದುಕೊಂಡು ಹೋಗುವುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುವ ಬಣ್ಣ ಬಣ್ಣದ ಜಾಹೀರಾತುಗಳಿಗೆ ಯಾತ್ರಿಗಳು ಮರುಳಾಗಬಾರದು. ಇಂತಹ ಟೂರ್ ಆಪರೇಟರ್‌ಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಕಲೆ ಹಾಕಿದ ಬಳಿಕವಷ್ಟೇ ಮುಂದುವರೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಅಧ್ಯಕ್ಷ ಶೌಕತ್ ಅಲಿ ಸುಲ್ತಾನ್, ಜಂಟಿ ಕಾರ್ಯದರ್ಶಿ ಬಿ.ಎಸ್.ಮಖ್ಬೂಲ್, ಇರಾಕ್ ಹಾಗೂ ಜೋರ್ಡಾನ್‌ನ ಭಾರತದ ರಾಯಭಾರಿಯಾಗಿದ್ದ ಆರ್.ದಯಾಕರ್, ತಮಿಳುನಾಡು ಖಾಸಗಿ ಟೂರ್ ಆಪರೇಟರ್‌ಗಳ ಸಂಘದ ಅಧ್ಯಕ್ಷ ಮುಹಮ್ಮದ್ ರಫೀಕ್, ಆಂಧ್ರಪ್ರದೇಶ-ತೆಲಂಗಾಣ ರಾಜ್ಯಗಳ ಅಧ್ಯಕ್ಷ ಅಬ್ದುಲ್ಲಾ ಖಮರ್, ರಾಜ್ಯ ಹಜ್ ಸಮಿತಿಯ ಮಾಜಿ ಅಧ್ಯಕ್ಷ ಝುಲ್ಫೀಕರ್ ಟೀಪು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X